ಪತ್ರಕರ್ತರಲ್ಲಿ ಪ್ರಶ್ನೆ ಮಾಡುವ ಸೂಕ್ಷ್ಮತೆ ಕ್ಷೀಣ: ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ

Date:

  • ಓದುವ ಪ್ರವೃತ್ತಿಯನ್ನು ಯುವ ಜನರು ಬೆಳೆಸಿಕೊಂಡು ಪ್ರಶ್ನೆ ಮಾಡಬೇಕು
  • ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದರೆ ಎಲ್ಲ ವಿಷಯದ ಬಗ್ಗೆ ಜ್ಞಾನ ಬೇಕು

“ಪತ್ರಕರ್ತರಲ್ಲಿ ಓದುವ ಆಸಕ್ತಿ ಕಡಿಮೆ ಆಗಿರುವುದರಿಂದ ಇಂದು ಪತ್ರಕರ್ತರು ಪ್ರಶ್ನೆ ಮಾಡುವ ಸೂಕ್ಷ್ಮತೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಹೇಳಿದರು.

ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮತ್ತು ವಿಜಯ ವಿದ್ಯಾರ್ಥಿ ವಾರ್ಷಿಕ ಸಂಚಿಕೆ ಸಮಿತಿ ವತಿಯಿಂದ ಮಾಧ್ಯಮ ಭಾಷಾ ಕೌಶಲ್ಯ ಬರವಣಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಅವರು, “ಓದುವ ಪ್ರವೃತ್ತಿಯನ್ನು ಯುವ ಜನರು ಬೆಳೆಸಿಕೊಂಡು ಪ್ರಶ್ನೆ ಮಾಡುವ ಪ್ರವೃತ್ತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಆದರೆ, ಇವತ್ತಿನ ಮಾಧ್ಯಮ ಬದಲಾಗಿದೆ. ಟಿವಿ ಮಾಧ್ಯಮಗಳು ಬಂದ ನಂತರ ಹೇಳಿದರು-ಕೇಳಿದರು ಎಂದು ಬರೆಯುತ್ತಿದ್ದೇವೆ ಹೊರತು ನಾವು ಪ್ರಶ್ನೆ ಮಾಡುವ ಮಾಧ್ಯಮವಾಗಿ ಉಳಿದಿಲ್ಲ. ಕೇವಲ ಪ್ರತಿಕ್ರಿಯೆ ಪಡೆಯುವ ಮಾಧ್ಯಮವಾಗಿ ಬೆಳೆಯುತ್ತಿದೆ. ಅದು ಅಪಾಯಕಾರಿ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದರೆ ಎಲ್ಲ ವಿಷಯದ ಬಗ್ಗೆ ಜ್ಞಾನಬೇಕು. ವಿಜ್ಞಾನ, ತಂತ್ರಜ್ಞಾನ, ಅರ್ಥಶಾಸ್ತ್ರ ಬಗ್ಗೆಯೂ ಅರಿವಿರಬೇಕು. ವಿಚಾರಗಳನ್ನು ತಿಳಿದವರಿಂದ ಪಡೆದು ವರದಿ ಮಾಡಬೇಕು. ಇಂದಿನ ಮಾಧ್ಯಮಗಳಲ್ಲಿ ತನಿಖಾ ವರದಿಯ ಕೊರತೆ ಕಾಣುತ್ತಿದೆ. ಕಾನೂನಿನ ತೊಡಕು ಇದ್ದರೂ ಸಹ, ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ವರದಿ ಮಾಡಬೇಕು. ಇದರಿಂದ ಕಾನೂನಿನ ಸಮಸ್ಯೆ ತಪ್ಪುತ್ತದೆ” ಎಂದರು.

“ಮುದ್ರಣ ಮಾಧ್ಯಮ ಇನ್ನೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿದೆ. ಇತ್ತೀಚೆಗೆ ನಡೆದ ಮಾಧ್ಯಮ ಸಮೀಕ್ಷೆಯಲ್ಲಿ ಮುದ್ರಣ ಮಾಧ್ಯಮ ಶೇ.62ರಷ್ಟು ವಿಶ್ವಾಸವನ್ನು ಉಳಿಸಿಕೊಂಡಿವೆ. ಡಿಜಿಟಲ್ ಮಾಧ್ಯಮಗಳು ವಿಶ್ವಾಸ ಕಳೆದುಕೊಳ್ಳುತ್ತಿವೆ” ಎಂದು ವಿಶಾದ ವ್ಯಕ್ತಪಡಿಸಿದರು.

ಶೇ.56ರಷ್ಟು ವಿದ್ಯುನ್ಮಾನ ಮಾಧ್ಯಮಗಳು ವಿಶ್ವಾಸವನ್ನು ಕಳೆದುಕೊಂಡಿವೆ. ಗೂಗಲ್ ಎಲ್ಲ ಕೊಡುತ್ತದೆ. ಆದರೆ, ನಂಬಿಕೆ ಕಷ್ಟ. ಸಾಮಾಜಿಕ ಮಾಧ್ಯಮಗಳಾದ ಶೇ.53 ಟ್ವಿಟರ್, ಶೇ.30 ಫೇಸ್‌ಬುಕ್, ಶೇ.31 ಟೆಲಿಗ್ರಾಂ ಹಾಗೂ ಶೇ.28 ವಾಟ್ಸ್‌ಆಪ್ ಹಾಗೂ ಶೇ. 29ರಷ್ಟು ಇನ್‌ಸ್ಟಾಗ್ರಾಂ ವಿಶ್ವಾಸ ಉಳಿಸಿಕೊಂಡಿವೆ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್‌ಗೆ ದಾಸರಾಗದೆ ಹೆಚ್ಚು ಪುಸ್ತಕಗಳನ್ನು ಓದಬೇಕು” ಎಂದು ಹೇಳಿದರು.

“ಉತ್ತಮ ಮಾಧ್ಯಮ ಈಗ ಕೈಗಾರಿಕೆಯಾಗಿ ಬೆಳೆದಿದೆ. ಯಾವ ಸುದ್ದಿಯನ್ನು ಓದುಗ ಗ್ರಾಹಕನಿಗೆ ನೀಡಬೇಕು ಎಂದು ವರದಿಗಾರಿಕೆ ಮಾಡುವವರಿಗೆ ತಿಳಿದಿರಬೇಕು. ರಾಜಕೀಯ ವರದಿ ಮಾಡುವ ಪತ್ರಕರ್ತರ ಜವಾಬ್ದಾರಿಗಳು ಹೆಚ್ಚು ಇರುತ್ತದೆ. ಇಡೀ ರಾಜ್ಯದಲ್ಲಿ ರಾಜಕೀಯ ಪಕ್ಷ ಹಾಗೂ ರಾಜ್ಯದಲ್ಲಿ ಆಗುವ ಎಲ್ಲ ಬೆಳವಣಿಗೆಗಳ ಬಗ್ಗೆ ಗಮನಿಸಬೇಕು. ಎಲ್ಲ ತರದ ಕೌಶಲ್ಯ ಬೇಕು. ಸರ್ಕಾರವನ್ನು ಬೀಳಿಸಿರುವ ವರದಿಗಳು ನಮ್ಮ ರಾಜ್ಯದಲ್ಲಿವೆ. ಆದ್ದರಿಂದ ಮಾಧ್ಯಮಗಳು ಪ್ರಭಾವವನ್ನು ಬೀರಿವೆ. ಸರ್ಕಾರ ಮತ್ತು ಜನರ ನಡುವೆ ಯಾವುದೇ ಪತ್ರಿಕೆ ಅಥವಾ ಪತ್ರಕರ್ತ ಸೇತುವೆಯಾಗಿ ಕೆಲಸ ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ಬದಲಿಗೆ ಸಾಮಾನ್ಯ ಬಸ್‌ ಪಾಸ್ ವಿತರಣೆ

“ವರದಿಗಾರ ಯಾವುದೇ ರಾಜಕಾರಣಿಗಳ ಜೊತೆ ಅತಿಯಾದ ಸಂಬಂಧವನ್ನು ಇಟ್ಟುಕೊಳ್ಳಬಾರದು. ಏಕೆಂದರೆ ಈ ಸಂಬಂಧದಿಂದ ಉತ್ತಮ ಸುದ್ದಿಯನ್ನು ಮಾಡಲು ಸಾಧ್ಯವಿಲ್ಲ. ಪತ್ರಿಕೆಗಳು ಜನರಿಗೆ ಹತ್ತಿರವಾಗಬೇಕು. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಅದರ ಸದುಪಯೋಗವನ್ನು ಪಡೆಯಲು ಸಲಹೆ ನೀಡಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶಪ್ಪ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಸ್.ಜಿ. ಐಕ್ಯೂಎಸಿ ಸಂಚಾಲಕರಾದ ಟಿ.ಎನ್. ಜ್ಞಾನೇಶ್ವರ ಅವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...