ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

Date:

  • ತಹಶೀಲ್ದಾರ ಅವರು ಮಾಡಿದ ಎಡವಟ್ಟಿನಿಂದ ಮುಜುಗರಕ್ಕೀಡಾದ ಪಾಲಿಕೆ
  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ತಿಂಗಳು ಒತ್ತುವರಿ ತೆರವು ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹದ ಪರಿಸ್ಥಿತಿಗೆ ಕಾರಣವಾದ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಆರಂಭವಾದ ಕೆಲವೇ ಗಂಟೆಗಳಲ್ಲಿ ಸ್ಥಗಿತಗೊಂಡಿದೆ.

ಬೆಂಗಳೂರಿನ ಸುತ್ತಮುತ್ತ ನದಿ, ಸಮುದ್ರವಿಲ್ಲ. ಆದರೂ ಮಳೆ ಆದ ಸಂದರ್ಭದಲ್ಲಿ ನಗರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೆ ಕಾರಣ ನಗರದಲ್ಲಿ ಮಳೆ ನೀರು ಹಾದುಹೋಗಲು ಇರುವ ಜಾಗವನ್ನು ಬಹುತೇಕರು ಆಕ್ರಮಣ ಮಾಡಿಕೊಂಡು ಮನೆ ಮತ್ತು ಕಟ್ಟಡಗಳನ್ನು ಕಟ್ಟಿದ್ದಾರೆ.

ಕಳೆದ ವರ್ಷ ಸುರಿದ ಮಳೆಗೆ ಇಡೀ ಬೆಂಗಳೂರಿನಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದ ಮಹದೇವಪುರ, ಸರ್ಜಾಪುರ ರಸ್ತೆ, ಸಾಯಿ ಲೇಔಟ್, ರೇನ್‌ ಬೋ ಲೇಔಟ್‌ ಸೇರಿದಂತೆ ಇನ್ನಿತರ ಪ್ರದೇಶಗಳು ಸಂಪೂರ್ಣ ನೀರಿನಿಂದ ಜಲಾವೃತವಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾಗಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ತಿಂಗಳು ಒತ್ತುವರಿ ತೆರವು ಕಾರ್ಯಾಚರಣೆ ಎಂದು ನಗರದಲ್ಲಿ ಬುಲ್ಡೋಜರ್ ಸದ್ದು ಮಾಡಲು ಆರಂಭಿಸಿದ್ದವು. ಈ ವೇಳೆ, ಒತ್ತುವರಿ ಆಗಿರುವ ಸಣ್ಣಪುಟ್ಟ ಶೆಡ್‌ಗಳು, ಕಾಂಪೌಡ್‌ಗಳು ಹಾಗೂ ಖಾಲಿ ಜಾಗಗಳನ್ನು ತೆರವು ಮಾಡಿ ಆ ಜಾಗವನ್ನು ವಶಪಡಿಸಿಕೊಳ್ಳಲಾಗಿತ್ತು.

ಇದೀಗ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತೆರವು ಕಾರ್ಯಾಚರಣೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ನಗರದ ಮಹದೇವಪುರ ವಲಯದಲ್ಲಿ ಶನಿವಾರ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು.

ಕೆಲವು ಕಟ್ಟಡಗಳಿಗೆ ಸ್ಟೇ ಆರ್ಡರ್ ಇರುವ ಹಿನ್ನಲೆ ಬಿಬಿಎಂಪಿಯಿಂದ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಸ್ಟೇ ಇಲ್ಲದ ಕಟ್ಟಡಗಳನ್ನ ಸೋಮವಾರಕ್ಕೆ ತೆರವು ಮಾಡಲು ಪಾಲಿಕೆ ಮುಂದಾಗಿದೆ.

ಮಹದೇವಪುರದ ಮುನೇನಕೊಳಲು ಬಳಿ ರಾಜಕಾಲುವೆ ಮೇಲೆಯೇ ಅಕ್ರಮವಾಗಿ ಐದಾರು ಅಂತಸ್ತಿನ ಬೃಹತ್ ಕಟ್ಟಡಗಳ ನಿರ್ಮಾಣ ಮಾಡಿರುವುದು ಕಂಡು ಬಂದಿದೆ.

ಸೆಪ್ಟೆಂಬರ್​​ನಲ್ಲಿ ಬೆಂಗಳೂರು ಉತ್ತರ ತಹಶೀಲ್ದಾರ್ ನೋಟಿಸ್​​ಗೆ ನಿವಾಸಿಗಳು ಸ್ಟೇ ಆರ್ಡರ್ ತಂದಿದ್ದರು. ಈ ಬಗ್ಗೆ ತಹಶೀಲ್ದಾರ್ ಅವರು ಬಿಬಿಎಂಪಿ ಗಮನಕ್ಕೆ ತಂದಿಲ್ಲ. ಜೂನ್ 15ರಂದು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಭಾಗಿಯಾಗಿದ್ದ ತಹಶೀಲ್ದಾರ್ ಅವರು ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ತೀರ್ಮಾನ ಕೈಗೊಂಡಿದ್ದರು. ಆದರೆ, ಸಭೆಯಲ್ಲಿಯೂ ನಿವಾಸಿಗಳು ಸ್ಟೇ ತಂದಿರುವ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ಯಾಬ್ ಚಾಲಕರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

22 ಸ್ಥಳಗಳಲ್ಲಿ ಒತ್ತುವರಿ ಆಗಿರುವುದನ್ನು ಮಾರ್ಕ್‌ ಮಾಡಿಕೊಂಡು ತೆರವು ಕಾರ್ಯಾಚರಣೆ ಆರಂಭಿಸಿದ ಬಳಿಕ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಸ್ಟೇ ಆರ್ಡರ್ ಕಾಪಿ ತೋರಿಸಿದ್ದಾರೆ. ಇದೀಗ, ತಹಶೀಲ್ದಾರ್ ಅವರು ಮಾಡಿದ ಎಡವಟ್ಟಿನಿಂದ ಪಾಲಿಕೆ ಮುಜುಗರಕ್ಕಿಡಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...