ಕಾರ್ನಾಡ್ ನೆನಪಿನಲ್ಲಿ ರಂಗೋತ್ಸವ; ‘ತುಘಲಕ್’ ನಾಟಕ 100ನೇ ಪ್ರದರ್ಶನ

Date:

ಹಿರಿಯ ಸಾಹಿತಿ, ಚಿಂತಕ ದಿ. ಗಿರೀಶ್ ಕಾರ್ನಾಡ್‌ ರಚಿಸಿದ್ದ ‘ತುಘಲಕ್’ ನಾಟಕವು ತನ್ನ 100ನೇ ಪ್ರದರ್ಶನಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ‘ಸಮುದಾಯ ಬೆಂಗಳೂರು’ ರಂಗ ತಂಡವು ‘ಕಾರ್ನಾಡ್ ನೆನಪು – ತುಘಲಕ್ 100ರ ಸಂಭ್ರಮ’ ಹೆಸರಿನಲ್ಲಿ ಎರಡು ದಿನಗಳ ರಂಗೋತ್ಸವನ್ನು ಆಯೋಜಿಸಿದೆ.

ರಂಗೋತ್ಸವವು ಅಕ್ಟೋಬರ್ 28 ಮತ್ತು 29ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ  ನಡೆಯಲಿದ್ದು, ಎರಡನೇ ದಿನ (ಅ.29) ‘ತುಘಲಕ್’ ನಾಟಕದ 100ನೇ ಪ್ರದರ್ಶನ ನಡೆಯಲಿದೆ ಎಂದು ತಂಡ ತಿಳಿಸಿದೆ.

ತಂಡವು ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದು, ಅಕ್ಟೋಬರ್ 28ರಂದು ತಂಡವು ಸಿದ್ದಪಡಿಸಿರುವ ಸ್ಮರಣಾ ಸಂಚಿಕೆಯನ್ನು ಹಿರಿಯ ಚಿಂತಕಿ ಡಾ. ವಿಜಯ, ರಂಗ ನಿರ್ದೇಶಕ ಸಿ ಬಸವಲಿಂಗಯ್ಯ, ಪ್ರಾಧ್ಯಾಪಕ ಡಾ. ನಟರಾಜ್ ಹುಳಿಯಾರ್ ಹಾಗೂ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಬಿಡುಗಡೆ ಮಾಡಲಿದ್ದಾರೆ ಎಂದು ಸಮುದಾಯ ತಂಡ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ನಾಡರ ಕುರಿತು ಹಿರಿಯ ಚಿಂತಕ ವಿ.ಎಸ್‌ ಶ್ರೀಧರ್,  ರಂಗಕರ್ಮಿ ಕೆ.ಎಂ ಚೈತನ್ಯ, ಸಮುದಾಯ ಕರ್ನಾಟಕದ ಕೆ.ಎಸ್‌ ವಿಮಲಾ ಹಾಗೂ ಹಿರಿಯ ನಾಟಕಕಾರ ಡಾ. ಎಚ್‌.ಎಸ್ ಶಿವಪ್ರಕಾಶ್ ನೆನಪಿಸಿಕೊಳ್ಳಲಿದ್ದಾರೆ ಎಂದು ತಂಡ ಹೇಳಿದೆ.

ಅಲ್ಲದೆ, ಕಾರ್ನಾಡರ ಕುರಿತು ಕೆ.ಎಂ ಚೈತನ್ಯ ಅವರು ನಿರ್ದೇಶಿಸಿರುವ ಸಾಕ್ಷ್ಯಾ ಚಿತ್ರ ಪ್ರದರ್ಶನವೂ ನಡೆಯಲಿದೆ. ಬಳಿಕ, ಕಾರ್ನಾಡ್‌ ರಚಿಸಿರುವ ‘ಹೂವು’ ಏಕವ್ಯಕ್ತಿ ನಾಟಕ ಪ್ರದರ್ಶನ ಇರಲಿದೆ ಎಂದು ತಂಡ ತಿಳಿಸಿದೆ.

ಎರಡನೇ ದಿನ (ಅ.29), ಕರ್ನಾಡರ ಕೃತಿಗಳಲ್ಲಿನ ಒಳನೋಟಗಳ ಕುರಿತು ರಂಗ ತಜ್ಞ ನಟರಾಜ್ ಹೊನ್ನವಳ್ಳಿ, ಡಾ. ಎಚ್‌.ಎಲ್ ಪುಷ್ಟ, ಕೆ.ವೈ ನಾರಾಯಣಸ್ವಾಮಿ, ಅಗ್ರಹಾರ ಕೃಷ್ಣಮೂರ್ತಿ, ಡಾ. ಕೆ ಮರುಳಸಿದ್ದಪ್ಪ ಮಾತನಾಡಲಿದ್ದಾರೆ. ರಂಗ ತಜ್ಞ ಡಾ. ಶ್ರೀಪಾದ್ ಭಟ್, ಸಿ.ಕೆ ಗುಂಡಣ್ಣ ಹಗೂ ಕೀರ್ತಿ ತೊಂಡಗೆರೆ ಅವರು ‘ರಂಗ ಚಿಂತನ’ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.

ಅಂದು ರಾತ್ರಿ 7:30ಕ್ಕೆ ‘ತುಘಲಕ್’ ನಾಟಕ ಪ್ರದರ್ಶನ ಇರಲಿದೆ. ನಾಟಕ ನೋಡಲು ಪ್ರವೇಶಕ್ಕೆ ಟಿಕೆಟ್ ದರ 100 ರೂ. ಇರಲಿದೆ ಎಂದು ತಂಡವು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 95919 67557 ಸಂಖ್ಯೆಗೆ ಕರೆ ಮಾಡಬಹುದು ಎಂದು ತಂಡವು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...