ಬಾಲಕಿ ಮೇಲೆ ಅತ್ಯಾಚಾರ | ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶಾಲೆ ಬಂದ್

Date:

ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ.

ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ ​ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದನು. ಆದರೆ, ಅನಧಿಕೃತವಾಗಿ ಬೆಂಗಳೂರಿನ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ.

ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿದ ಹಿನ್ನೆಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆ ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದರಿಂದ 140ಕ್ಕೂ ಹೆಚ್ಚಿನ ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯ ಅತಂತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯಕ್ಕೆ ಯಾವುದೇ ತೊಂದರೆ ಉಂಟಾಗಬಾರದು. ಹಾಗಾಗಿ, ಪಾಲಕರು ಹೇಳಿದ ಶಾಲೆಯಲ್ಲಿ ಸರ್ಕಾರದಿಂದ ದರ ನಿಗದಿ ಮಾಡಿ ಸೀಟ್‌ ವ್ಯವಸ್ಥೆ ಮಾಡಲಾಗುವುದು” ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

ಏನಿದು ಪ್ರಕರಣ?

ನಗರದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕಿಯನ್ನು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.

ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ನರ ದೌರ್ಬಲ್ಯ ಖಾಯಿಲೆಯಿಂದ ಬಳಲುತ್ತಿದ್ದಳು. ಆಗಸ್ಟ್ 3ರ ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ. 11.30ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ‌‌ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಐಸ್‌ಕ್ರೀಂ ಕೊಟ್ಟು ಕಳುಹಿಸಿದ್ದನು.

ಮಧ್ಯಾಹ್ನ 3.30ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತಾಯಿಗೆ ಹೊಟ್ಟೆ ನೋವು ಎಂದು ಹೇಳಿದ್ದಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ.

ಈ ಘಟನೆ ಸಂಬಂಧ ಬಾಲಕಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...