ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮೂಗಿಗೆ ತುಪ್ಪ ಸವರುವ ಕೆಲಸ: ಮುಖ್ಯಮಂತ್ರಿ ಚಂದ್ರು

Date:

  • ಅಭಿವೃದ್ಧಿ ಮಾಡದ ಬಿಜೆಪಿ ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಿದೆ
  • ಚುನಾವಣಾ ದೃಷ್ಟಿಯಿಂದ ಕಾನೂನುಬಾಹಿರ ಕ್ರಮ ತೆಗೆದುಕೊಂಡ ಸರ್ಕಾರ

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿಗೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದವರ ಮೂಗಿಗೆ ತುಪ್ಪ ಹಚ್ಚಿ ಮೋಸ ಮಾಡಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಪ್ರವರ್ಗ 2ಎ, 2ಬಿ ಮತ್ತು ಪ್ರವರ್ಗ 1ಕ್ಕೆ ಯಾವುದೇ ರೀತಿಯ ಬದಲಾವಣೆ ಮಾಡಬಾರದು ಎಂದು ಹಿಂದುಳಿದ ವರ್ಗಗಳ ಆಯೋಗವು ತನ್ನ ಮಧ್ಯಂತರ ವರದಿಯಲ್ಲಿ ಶಿಫಾರಸು ಮಾಡಿತ್ತು. ಪ್ರವರ್ಗ 2ಬಿಯನ್ನು ತೆಗೆದು ಇಡಬ್ಲ್ಯೂಎಸ್‌ಗೆ ವರ್ಗಾಯಿಸಬೇಕೆಂದು ಆಯೋಗವು ಮಧ್ಯಂತರ ವರದಿಯಲ್ಲಿ ಎಲ್ಲಿಯೂ ಹೇಳಿಯೇ ಇರಲಿಲ್ಲ. ಮೀಸಲಾತಿ ಪರಿಷ್ಕರಣೆ ಮಾಡಲು ಅಂತಿಮ ವರದಿಯ ತನಕ ಕಾಯಬೇಕೆಂದು ಮಧ್ಯಂತರ ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಆದರೆ, ರಾಜ್ಯ ಸರ್ಕಾರವು ಇವೆಲ್ಲವನ್ನೂ ಗಾಳಿಗೆ ತೂರಿ, ಕೇವಲ ಚುನಾವಣಾ ದೃಷ್ಟಿಯಿಂದ ಕಾನೂನುಬಾಹಿರ, ಸಂವಿಧಾನಬಾಹಿರ ಹಾಗೂ ಅಮಾನವೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ಹೇಳಿದರು.

“ಮಧ್ಯಂತರ ವರದಿಗೆ ವಿರುದ್ಧವಾದ ಆದೇಶಕ್ಕೆ ಸಹಿ ಹಾಕಿರುವುದಕ್ಕೆ ಸಂಬಂಧಿಸಿ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ ತುಳಸಿ ಮುದ್ದಿನೇನರವರು ಪ್ರತಿಕ್ರಿಯೆ ನೀಡಬೇಕು. ಅವರು ಯಾರ ಒತ್ತಡಕ್ಕೆ ಒಳಗಾಗಿ ಇಂತಹ ನಿರ್ಣಯ ತೆಗೆದುಕೊಂಡರೆಂಬುದು ಜನತೆಗೆ ತಿಳಿಯಬೇಕು. ಅಂತಿಮ ವರದಿಯ ತನಕ ಕಾಯಬೇಕೆಂದು ಸುಪ್ರೀಂ ಕೋರ್ಟ್‌ ಆದೇಶವಿದ್ದರೂ, ಅದಕ್ಕೂ ಮೊದಲೇ ರಾಜ್ಯ ಸರ್ಕಾರ ಇಂತಹ ನಿರ್ಧಾರ ತೆಗೆದುಕೊಂಡಿದ್ದೇಕೆ? ಈ ಮೂಲಕ ಮಂತ್ರಿಮಂಡಲವು ಮೋಸ ಮಾಡಿದ್ದು, ಶೀಘ್ರವೇ ರಾಜ್ಯಪಾಲರು ಮಂತ್ರಿಮಂಡಲವನ್ನು ವಜಾ ಮಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

“ಬಿಜೆಪಿಯು ಪ್ರತಿಯೊಬ್ಬರಿಗೂ ₹15 ಲಕ್ಷ ಕೊಡುತ್ತೇವೆ, ಕುಟುಂಬ ರಾಜಕಾರಣ ಮಾಡುವುದಿಲ್ಲ, ಭ್ರಷ್ಟಾಚಾರ ಮಾಡುವುದಿಲ್ಲ ಎಂದೆಲ್ಲ ಹೇಳಿತ್ತು. ಅವೆಲ್ಲವೂ ಸುಳ್ಳೆಂದು ಈಗ ಸಾಬೀತಾಗಿದೆ. ಆ ಸುಳ್ಳುಗಳ ಸಾಲಿಗೆ ಮತ್ತೊಂದು ಸೇರ್ಪಡೆಯೇ ಈ ಮೀಸಲಾತಿ ಹೆಚ್ಚಳ. ರಾಜ್ಯದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುತ್ತಿದ್ದೇವೆಂದು ಬಿಜೆಪಿ ಸುಳ್ಳು ಹೇಳಿ ವಂಚಿಸಿದೆ. 9ನೇ ಶೆಡ್ಯೂಲ್‌ಗೆ ತಿದ್ದಪಡಿ ತರದೇ ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಗೊತ್ತಿದ್ದರೂ ಬಿಜೆಪಿಯು ಸುಳ್ಳು ಹೇಳುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಚುನಾವಣೆ ಎದುರಿಸಲು ಬಿಜೆಪಿಗೆ ಸಾಧ್ಯವಾಗದ ಕಾರಣ ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಿದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...