ಬೆಂಗಳೂರಿನಲ್ಲಿ 7.11 ಕೋಟಿ ರೂ. ಹೊತ್ತೊಯ್ಯುತ್ತಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಪೊಲೀಸರು 60 ಗಂಟೆಗಳಲ್ಲಿ ಭೇದಿಸಿದ್ದಾರೆ. ಈ ಪೂರ್ವ ಯೋಜಿತ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 5.76 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಎಟಿಎಂ ನಗದು-ವಾಹನ ದರೋಡೆ ಪ್ರಕರಣ ಇದಾಗಿದ್ದು, ಆರೋಪಿಗಳನ್ನು ತ್ವರಿತವಾಗಿ ಪತ್ತೆ ಮಾಡುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್ಸ್ಟೆಬಲ್ ಮತ್ತು ಸಿಎಂಎಸ್ ಕಂಪನಿ ಮಾಜಿ ನೌಕರ ಬಂಧಿತ ಆರೋಪಿಗಳು. ದರೋಡೆ ಹಣವನ್ನು ವಶಪಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.
ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ನಗರ ಪೊಲೀಸ್ ಕಮಿಷವರ್ ಸೀಮಾಂತ್ ಕುಮಾರ್ ಸಿಂಗ್ ಘೋಷಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಐವರು ಭಾಗಿಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. 5 ರಾಜ್ಯದಲ್ಲಿ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.





