ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೇರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?
ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.





