ಬೆಂಗಳೂರು | ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ: ಬಿಎಂಆರ್‌ಸಿಎಲ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮುಂದೆ ಇಂತಹ ಘಟನೆಗಳು ನಡೆಯದಿರಲು ಹಾಗೂ ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸೇವೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಸಿಬ್ಬಂದಿ ಯಾವಾಗಲು ಸಿದ್ಧರಾಗಿದ್ದಾರೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಎಂದು ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡಲು ನಮ್ಮ ಮೆಟ್ರೋ ಸಿದ್ಧವಾಗಿದೆ. ಭದ್ರತಾ ಸಿಬ್ಬಂದಿಯು ಯಾವಾಗಲೂ ಜಾಗರೂಕರಾಗಿದ್ದು, ತುರ್ತು ಸಂದರ್ಭದಲ್ಲಿ ಯಾವುದೇ ಸಹಾಯಕ್ಕಾಗಿ ಸಿದ್ಧರಾಗಿರುತ್ತಾರೆ. ಪ್ರಯಾಣಿಕರು ನಿಯಂತ್ರಣ ಕೇಂದ್ರವನ್ನು ದೂರವಾಣಿ ಸಂಖ್ಯೆ 080 2519 1208, 080 2216 2258 / 2208 ಮತ್ತು ಟೋಲ್ ಫ್ರೀ ಸಹಾಯವಾಣಿ 1800-425-12345ಗೆ ಸಂಪರ್ಕಿಸಬಹುದು” ಎಂದು ತಿಳಿಸಿದೆ.

“ಹೆಚ್ಚುವರಿಯಾಗಿ, ತುರ್ತು ಸಮಯದಲ್ಲಿ ಪ್ರಯಾಣಿಕರು ಸಹಾಯ ಪಡೆಯಲು ಎಲ್ಲ ಮೆಟ್ರೋ ಬೋಗಿಯಲ್ಲಿ (ಪ್ರತಿ ಬೋಗಿಯಲ್ಲಿ-4) ಅಳವಡಿಸಿರುವ ತುರ್ತು ಎಚ್ಚರಿಕೆ (Passenger Emergency Alarm) ವ್ಯವಸ್ಥೆಯನ್ನು ಬಳಸಿ, ರೈಲು ನಿರ್ವಾಹಕರೊಂದಿಗೆ ಸಂವಹನ ನಡೆಸಬಹುದು. ಇದರಿಂದಾಗಿ, ಸಮೀಪಿಸುತ್ತಿರುವ ಅಥವಾ ಮುಂದಿನ ನಿಲ್ದಾಣದಲ್ಲಿ ಸಹಾಯ ಒದಗಿಸಲು ಅನುಕೂಲವಾಗುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ, ನಿಯಂತ್ರಣ ಕೇಂದ್ರದ ದೂರವಾಣಿ ಸಂಖ್ಯೆಗಳು ಮತ್ತು ಪ್ಯಾಸೆಂಜ‌ರ್ ಎಮರ್ಜೆನ್ಸಿ ಅಲಾರ್ಮ್ (Passenger Emergency Alarm) ವ್ಯವಸ್ಥೆಯನ್ನು ಸಾರ್ವಜನಿಕರು ಬಳಸಿಕ್ಕೊಳ್ಳಬೇಕು” ಎಂದು ತಿಳಿಸಿದೆ.

ಡಿ.7 ರಂದು ಮುಂಜಾನೆ 9.40 ಗಂಟೆಗೆ ರಾಜಾಜಿನಗರದಿಂದ ಎಂ.ಜಿ ರಸ್ತೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ಮಹಿಳಾ ಪ್ರಯಾಣಿಕರು, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ ರೈಲಿನಿಂದ ಹೊರ ಬರುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ದೌರ್ಜನ್ಯ ಎಸಗಿದ್ದಾನೆ ಎಂದು ಭದ್ರತಾ ಸಿಬ್ಬಂದಿಯ ಸಹಾಯ ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಕೂಡಲೇ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಲ್ಲದೆ, ಆಕೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕೂಡ ಸಹಾಯ ಮಾಡಿದ್ದಾರೆ.

ಈ ಹಿಂದೆ, 2023ರ ಏಪ್ರಿಲ್‌ನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ 20 ಮೊಬೈಲ್ ಫೋನ್ ಗಳು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಜಾಮೀನಿನ ಮೇಲೆ ಹೊರಬಂದಿದ್ದಾನೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...