ಹಸುಗೂಸು ಮಾರಾಟ | ಕಳೆದ 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ

Date:

ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್‌ ಸಕ್ರಿಯವಾಗಿದ್ದು, ಇತ್ತೀಚೆಗೆ 20 ದಿನದ ಗಂಡು ಮಗುವನ್ನು ಮಾರಾಟ ಮಾಡುವ ವೇಳೆ, ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದೊಂದಾಗಿ ಸತ್ಯ ಹೊರಬೀಳುತ್ತಿದೆ. ಆರೋಪಿಗಳು ಕಳೆದ 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಸಿಸಿಬಿ ವಿಚಾರಣೆ ವೇಳೆ ಹೊರಬಿದ್ದಿದೆ.

250 ಮಕ್ಕಳ ಪೈಕಿ ಕರ್ನಾಟಕದಲ್ಲಿ 50-60 ಮಕ್ಕಳನ್ನು ಮಾರಾಟ ಮಾಡಿದ್ದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಾರಾಟ ಮಾಡಿರುವ ಮಕ್ಕಳ ಪೈಕಿ 10 ಮಕ್ಕಳ ಸುಳಿವು ಸದ್ಯ ಪೊಲೀಸರಿಗೆ ದೊರೆತಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮಕ್ಕಳನ್ನು ಯಾರಿಗೆ ಮತ್ತು ಎಲ್ಲಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅವರಿಂದ ಕಮಿಷನ್ ಪಡೆಯುತ್ತಿದ್ದ ಮಹಾಲಕ್ಷ್ಮಿ ಈ ದಂಧೆಯ ಪ್ರಮುಖ ಸೂತ್ರಧಾರಿಯಾಗಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಈಕೆ ಈ ಮೊದಲು ಬಾಡಿಗೆ ಮನೆಯಲ್ಲಿದ್ದು, ಗಾರ್ಮೆಂಟ್‌ನಲ್ಲಿ ₹8000ಕ್ಕೆ ಕೆಲಸ ಮಾಡಿಕೊಂಡಿದ್ದಳು. ಗಾರ್ಮೆಂಟ್‌ನಲ್ಲಿ ಪರಿಚಯವಾದ ಒಬ್ಬರು ಅಂಡಾಣು ನೀಡಿದರೆ, ಹಣ ನೀಡುವುದಾಗಿ ಹೇಳಿದ್ದಾರೆ. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮಿ 20 ಸಾವಿರ ಕಮಿಷನ್ ಪಡೆದಿದ್ದಳು. ಬಳಿಕ ತಾನೇ ಈ ದಂಧೆಯಲ್ಲಿ ಮುಂದುವರೆದ ಈಕೆ ಅಂಡಾಣು ನೀಡುವವರನ್ನು ಪತ್ತೆ ಮಾಡಿ ಕಮಿಷನ್ ಪಡೆಯುತ್ತಿದ್ದಳು. ಬಳಿಕ ಸ್ವಂತ ಮನೆ, ಕಾರು ಜತೆಗೆ ಮೈತುಂಬಾ ಚಿನ್ನಾಭರಣವನ್ನು ಆರೋಪಿ ಮಹಾಲಕ್ಷ್ಮಿ ಹೊಂದಿದ್ದಾಳೆ ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...