ಆಗಸ್ಟ್‌ 21 ರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ ಕಾರ್ಡ್‌ ಮಾರಾಟ

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ (ಎನ್‌ಸಿಎಂಸಿ) ಕಾರ್ಡ್‌ಗಳನ್ನು ಆಗಸ್ಟ್‌ 21 ರಿಂದ ಮಾರಾಟ ಮಾಡಲಾಗುತ್ತದೆ. ದೇಶಾದ್ಯಂತ ಪ್ರಯಾಣಕ್ಕೆ ಮತ್ತು ಶಾಪಿಂಗ್ ಅಗತ್ಯಗಳಿಗಾಗಿ ಈ ಒಂದೇ ಕಾರ್ಡ್ ಹೊಂದುವುದು ಅನುಕೂಲವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.  

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಪುಸ್ತುತ ಬಳಕೆಯಲ್ಲಿರುವ ಕಾಂಟ್ಯಾಕ್ಸ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳು (ಸಿಎಸ್‌ಸಿ) ಕ್ಲೋಸ್ ಲೂಪ್ ಕಾರ್ಡ್‌ಗಳಾಗಿವೆ. ಈ ಕಾರ್ಡ್‌ ಅನ್ನು ನಮ್ಮ ಮೆಟ್ರೋ ಪ್ರಯಾಣದಲ್ಲಿ ಮಾತ್ರ ಬಳಸಬಹುದಾಗಿದ. ‘ಒನ್ ನೇಷನ್ ಒನ್ ಕಾರ್ಡ್’ ಅನುಗುಣವಾಗಿ ರುಪೇ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ತೆರೆದ ಲೂಪ್ ಕಾರ್ಡ್‌ಗಳಾಗಿವೆ. ಈ ಕಾರ್ಡ ಅನ್ನು ದೇಶದ ಎಲ್ಲ ಸಾರಿಗೆ ವ್ಯವಸ್ಥೆಗಳಲ್ಲಿ ಹಾಗೂ ಹೆಚ್ಚುವರಿಯಾಗಿ ರಿಟೇಲ್ ಅಂಗಡಿ, ಪೆಟ್ರೋಲ್ ಬಂಕ್‌ಗಳು, ಶಾಪಿಂಗ್ ಇತ್ಯಾದಿ ಅಗತ್ಯಗಳಿಗಾಗಿ ಬಳಸಲು ಅನುಕೂಲವಾಗುತ್ತದೆ” ಎಂದು ತಿಳಿಸಿದೆ.

“ಆಗಸ್ಟ್‌ 21 ರಿಂದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ರುಪೇ ಎನ್‌ಸಿಎಂಸಿ ಕಾರ್ಡ್‌ಗಳು ಖರೀದಿಗೆ ಲಭ್ಯವಿರುತ್ತದೆ. ರುಪೇ ಎನ್‌ಸಿಎಂಸಿ ಕಾರ್ಡ್ ತ್ವರಿತ ವಿತರಣೆಗಾಗಿ, ಪ್ರಯಾಣಿಕರು ತಮ್ಮ ಗ್ರಾಹಕರ ವಿವರಗಳನ್ನು (KYC), ‘NAMMAMETRO.AGSINDIA.COM’, ‘BMRCL RBL Bank NCMC’ ಅಪ್ಲಿಕೇಶನ್‌ನಲ್ಲಿ `ಸ್ವಯಂ-ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆ / ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಟಿಕೆಟ್ ಕೌಂಟರ್ ಇರುವ ನಿರ್ವಾಹಕರಿಗೆ ತಿಳಿಸಬೇಕು. ಕಾರ್ಡ್‌ನ ಮಾರಾಟ ಬೆಲೆ ₹50 ಇದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಲಭ್ಯವಿರುವ ಶೇ.5 ಪ್ರಯಾಣ ದರದ ರಿಯಾತಿಯು ಎನ್‌ಸಿಎಂಸಿ ಕಾರ್ಡ್‌ಗಳಿಗೂ ಅನ್ವಯವಾಗುತ್ತದೆ. ಈ ಕಾರ್ಡ್‌ಗಳು ಎಲ್ಲ ಆರ್‌ಬಿಎಲ್ ಬ್ಯಾಂಕ್ ಶಾಖೆಗಳಲ್ಲೂ ಲಭ್ಯವಿರುತ್ತದೆ. ಪ್ರಯಾಣಕ್ಕೆ ಮತ್ತು ಶಾಪಿಂಗೆ ಬೇಕಾಗಿರುವ ನಾನಾ ಕಾರ್ಡ್‌ಗಳ ಅಗತ್ಯತೆಯನ್ನು ಕಡಿಮೆ ಮಾಡುವ ಸಲುವಾಗಿ ನಮ್ಮ ಮೆಟ್ರೋ ಮುಂದಿನ ದಿನಗಳಲ್ಲಿ ಕಾಂಟ್ಯಾಕ್ಟಸ್ ಸ್ಮಾರ್ಟ್‌ ಕಾರ್ಡ್‌ಗಳನ್ನು (CSC) ಹಂತ ಹಂತವಾಗಿ ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

“ರುಪೇ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಮೆಟ್ರೋ ನಿಲ್ದಾಣಗಳಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಕಾಂಟ್ಯಾಕ್ಟಸ್‌ ಸ್ಮಾರ್ಟ್‌ ಕಾರ್ಡ್‌ಗಳು (ಸಿಎಸ್‌ಸಿ) ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮತ್ತು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಮಾರಾಟಕ್ಕೆ ಲಭ್ಯವಿರುತ್ತದೆ” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...