ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

Date:

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ ‘ವಿಶ್ವ ಛಾಯಾಗ್ರಾಹಕ ದಿನ’ವನ್ನು ಉದ್ಘಾಟಿಸಿ ಮಾತನಾಡಿದರು. “ಫೋಟೋ ಜರ್ನಲಿಸ್ಟ್‌ಗಳೇ ಸಂಘಟಿಸಿರುವ ಇವತ್ತಿನ ಕಾರ್ಯಕ್ರಮದಲ್ಲಿ ನನಗೆ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಇಬ್ಬರೂ ‘ಫೋಟೋ ಜರ್ನಲಿಸಂನ ದೃಶ್ಯ ಪಠ್ಯಗಳು’ ಎಂದು ಹೇಳಲು ಇಚ್ಚಿಸುತ್ತೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕರ್ನಾಟಕ 50 | ಪತ್ರಿಕೋದ್ಯಮ ಕಂಡ ಮೂರು ಪಲ್ಲಟಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ ‘Love at First Sight’ ಎಂದು ಹೇಳೋದು. ಹೀಗಾಗಿ ಫೋಟೋ ಜರ್ನಲಿಸ್ಟ್‌ಗಳಿಗೆ ನೋಟ, ಒಳನೋಟ ಬಹಳ ಮುಖ್ಯ” ಎಂದರು.

“ಆಫ್ರಿಕಾದ ಫೋಟೋ ಜರ್ನಲಿಸ್ಟ್ ತೆಗೆದ ಒಂದು ಫೋಟೋ ಇವತ್ತಿಗೂ ತೀವ್ರ ಚರ್ಚೆಯ ಸಂಗತಿಯಾಗಿಯೇ ಉಳಿದಿದೆ. ಯುದ್ಧ ಸಂತ್ರಸ್ಥ ಸುಡಾನ್ ದೇಶದಲ್ಲಿ ತೆಗೆದ ಫೋಟೋ ಅದು. ಗಂಜಿ ಕೇಂದ್ರಕ್ಕೆ ತೆವಳುತ್ತಿದ್ದ ಒಂದು ಮಗು ಹಸಿವಿನಿಂದ ನೆಲಕ್ಕೇ ತಲೆಕೊಟ್ಟು ನಿತ್ರಾಣಗೊಂಡಿದೆ. ಅಲ್ಲೇ ಒಂದು ರಣಹದ್ದು ಮಗುವನ್ನೇ ತಿನ್ನಲು ಹೊಂಚು ಹಾಕಿ ಕುಳಿತಿದೆ. ಈ ಫೋಟೋಗೆ 1994ರಲ್ಲಿ ವಿಶ್ವಶ್ರೇಷ್ಠ ಪುಲಿಟ್ಜರ್ ಪ್ರಶಸ್ತಿ ಬಂತು. ಆದರೆ ಪ್ರಶಸ್ತಿ ಪಡೆದ ಕೆವಿನ್ ಕಾರ್ಟರ್ ಮೂರು ತಿಂಗಳಲ್ಲಿ ಅಳುಕಿನಿಂದ ಆತ್ಮಹತ್ಯೆ ಮಾಡಿಕೊಂಡರು. ಇದು ಪತ್ರಿಕಾ ವೃತ್ತಿಯ ಚರಿತ್ರೆಯಲ್ಲಿ ಅಳಿಸಲಾಗದ ಒಂದು ಪಠ್ಯ” ಎಂದು ಹೇಳಿದರು.

“ಕೆವಿನ್ ತೆಗೆದ ಒಂದು ಫೋಟೋ ಹುಟ್ಟಿಸಿದ ಪ್ರಶ್ನೆಗಳು ಆತನನ್ನು ಆತ್ಮಹತ್ಯೆಗೆ ದೂಡಿದರೆ, ಅದೊಂದು ಫೋಟೋದ ಮೇಲೆ ನೂರಾರು ಭಾಷೆಗಳಲ್ಲಿ ಕೋಟಿಗಟ್ಟಲೆ ಪದಗಳು, ವಾಕ್ಯಗಳಲ್ಲಿ ಚರ್ಚೆ ನಡೆಯಿತು. ಹೀಗಾಗಿ ನೋಟವೇ ಒಂದು ಭಾಷೆ. ಇದು ವಿಶ್ವ ಭಾಷೆಯಾಗಿದೆ” ಎಂದು ಕೆ.ವಿ.ಪ್ರಭಾಕರ್ ವಿವರಿಸಿದರು.

“ಹಾಗೆಯೇ ಒಂದೂ ಮಾತು, ಒಂದೇ ಒಂದು ಪದದ ಸಹವಾಸವಿಲ್ಲದೆ ಸಂಗೊಳ್ಳಿಯ ಸಂಗವ್ವ ವಿಶ್ವಕ್ಕೇ ಪರಿಚಯವಾದರು. ಸರ್ಕಾರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಘೋಷಿಸಿದಾಗ ಕುಹಕ, ಅಣಕ, ಟೀಕೆ, ವಿಮರ್ಷೆಗಳ ಮಹಾಪೂರವೇ ಹರಿಯುತ್ತಿತ್ತು. ಆದರೆ, ಉಚಿತ ಬಸ್ ಹತ್ತುವಾಗ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಸರ್ಕಾರಿ ಬಸ್‌ನ ಮೆಟ್ಟಿಲುಗಳಿಗೆ ನಮಸ್ಕರಿಸಿದ ಒಂದು ಫೋಟೋ ಎಲ್ಲಾ ಕುಹಕ, ಅಣಕಗಳನ್ನು ಅಳಿಸಿಹಾಕಿತು. 24 ಗಂಟೆಯಲ್ಲಿ ಸಂಗವ್ವ ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿಬಿಟ್ಟರು. ಹೀಗಾಗಿ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಫೋಟೋ ಜರ್ನಲಿಸಂನ ಎರಡು ಪಠ್ಯಗಳು ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

“ಇವತ್ತಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟವೇ ಇರಲಿ, ಯುದ್ಧಗಳೇ ಇರಲಿ‌, ನಮ್ಮ ಪೂರ್ವಜರ ಮುಖಗಳನ್ನು ದಾಖಲಿಸಿ ಕೊಡುವುದು ಫೋಟೋಗಳು. ಹೀಗಾಗಿ ಫೋಟೋ ಜರ್ನಲಿಸ್ಟ್‌ಗಳು ಏಕ ಕಾಲಕ್ಕೆ ಚರಿತ್ರಕಾರರೂ ಕೂಡ ಆಗಿರುತ್ತಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ವರದಿಗಳು, ಮಾತುಗಳು, ಪದಗಳು ಸುಳ್ಳು ಹೇಳಬಹುದು ಅಥವಾ ಸತ್ಯವನ್ನು ತಿರುಚಬಹುದು. ಆದರೆ, ಫೋಟೋಗಳು, ನೋಟಗಳು ಸುಳ್ಳು ಹೇಳುವುದಿಲ್ಲ. ನಾವು ಬರೆಯುವ ಸುದ್ದಿಗಳಿಗೆ ಸತ್ಯದ ಮೊಹರೆ ಒತ್ತುವುದು ಫೋಟೋಗಳು. ಫೋಟೋಗ್ರಫಿ ಪತ್ರಿಕೋದ್ಯಮದ ಅವಿಭಾಜ್ಯ ಅಂಗ. ಫೋಟೋಗಳು ಘಟನೆಯ ನೈಜ ಚಿತ್ರಣವನ್ನು ಓದುಗರ ಗ್ರಹಿಕೆಗೆ ಒದಗಿಸುತ್ತವೆ” ಎಂದು ಅಭಿಪ್ರಾಯಿಸಿದರು.

“ಆಧುನಿಕ ತಂತ್ರಜ್ಞಾನ ಫೋಟೋಗ್ರಫಿ ಹೆಚ್ಚಿನ ಮೌಲ್ಯವನ್ನು ತಂದುಕೊಟ್ಟಿದೆ. ಕೃತಕ‌ ಬುದ್ದಿಮತ್ತೆ ಒಂದು ಸವಾಲು ಮತ್ತು ಅವಕಾಶವೂ ಹೌದು. ಯಾವುದೇ ತಂತ್ರಜ್ಞಾನ ಬಂದರೂ ಅದಕ್ಕೆ ಸ್ವಂತ ಕಾಲ್ಪನಿಕ‌ ಶಕ್ತಿ ಇರುವುದಿಲ್ಲ. ಎಲ್ಲಿಯವರೆಗೂ ಫೋಟೋ ಜರ್ನಲಿಸ್ಟ್‌ಗಳ ಕಲ್ಪನಾ ಸಾಮರ್ಥ್ಯ ಸೃಜನಶೀಲ ಮತ್ತು ಶ್ರೀಮಂತ ಹಾಗೂ ಸಹೃದಯತೆಯಿಂದ ಕೂಡಿರುತ್ತದೋ ಅಲ್ಲಿಯವರೆಗೂ ಯಾವ ತಂತ್ರಜ್ಞಾನವೂ ಅಪಾಯ ಒಡ್ಡುವುದಿಲ್ಲ” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

“ಸುಮಾರು 20 ವರ್ಷಗಳ ಹಿಂದೆ ಫೋಟೋಗ್ರಫಿ ಈಗಿನಷ್ಟು ಸರಾಗ ಮತ್ತು ಸುಲಭವಾಗಿರಲಿಲ್ಲ ಬಹಳ ಕಷ್ಟ ಪಡಬೇಕಾಗಿತ್ತು. ಆದರೆ ಬದಲಾದ ತಂತ್ರಜ್ಞಾನದಿಂದಾಗಿ ಫೋಟೋಗ್ರಫಿ ಅತ್ಯಂತ ಸುಲಭವಾಗಿದ್ದು, ಸೃಜನಶೀಲತೆ ರೂಪಿಸಿಕೊಂಡು ಫೋಟೋಗಳ ಮೂಲಕವೇ ಅರ್ಥಪೂರ್ಣ ಸ್ಟೋರಿಗಳನ್ನು ಸೃಷ್ಟಿಸುವ ಶಕ್ತಿ -ಸಾಮರ್ಥ್ಯ ರೂಡಿಸಿಕೊಂಡರೆ ಮಾತ್ರ ಈಗಿನ ಸ್ಪರ್ಧಾಜಗತ್ತಿನಲ್ಲಿ ಉಳಿಯಲು ಸಾಧ್ಯ” ಎಂದರು.

“ಇವತ್ತಿಗೂ ಗ್ರಾಮೀಣ ಮತ್ತು ತಾಲ್ಲೂಕು ಮಟ್ಟದಲ್ಲಿ ಸುದ್ದಿ ಬರೆಯುವ ವರದಿಗಾರರಿಗಿಂತ ಫೋಟೋಗ್ರಾಫರ್‌ಗಳಿಗೇ ಹೆಚ್ಚು ಬೇಡಿಕೆ ಇದೆ. ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಒಂದು ಫೋಟೋ ಬಂದರೆ ಸಾಕು ಎಂದು ರಾಜಕಾರಣಿಗಳು ಕಾತರಿಸುತ್ತಾರೆ. ಯಾವುದೇ ಭಾಷೆಯವರಿಗಾದರೂ, ಅನಕ್ಷರಸ್ಥರಿಗೂ ಕೂಡ ಫೋಟೋ ಮೂಲಕ ಸಂವಹನ ನಡೆಸಬಹುದಾದ ಸಾಧ್ಯತೆಯೇ ಫೋಟೋ ಜರ್ನಲಿಸ್ಟ್‌ಗಳ ಮಹತ್ವವನ್ನು ಹೇಳುತ್ತದೆ” ಎಂದು ಹೇಳಿದರು.

“ಒಂದು ವರದಿಯನ್ನು ಸಂಪಾದಕರು ತೆಗೆದು ಪಕ್ಕಕ್ಕಿಡಬಹುದು. ಆದರೆ ಉತ್ತಮವಾದ ಒಂದು ಫೋಟೋವನ್ನು ಯಾರೂ ಪಕ್ಕಕ್ಕಿಡುವುದಿಲ್ಲ. ಆದ್ದರಿಂದ ಪತ್ರಿಕೆಗಳಲ್ಲಿ ಲಭ್ಯವಿರುವ ಸ್ಪೇಸ್ ಅನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಳ್ಳಿ” ಎಂದು ಕೆವಿಪಿ ಕರೆ ನೀಡಿದರು.

ಡೆಕ್ಕನ್ ಹರಾಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಕೆ.ಎನ್.ಶಾಂತಕುಮಾರ್, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಹಿರಿಯ ಫೋಟೋ ಜರ್ನಲಿಸ್ಟ್ ಭಾಗ್ಯಪ್ರಕಾಶ್, ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಮೋಹನ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...