ಹಣಕ್ಕಾಗಿ ಅಪಹರಿಸಲ್ಪಟ್ಟ 13 ವರ್ಷದ ಬಾಲಕನ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿದ್ದ ಬಾಲಕನ ಮೃತದೇಹ ಕಗ್ಗಲೀಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸದ್ಯ ಅಪಹರಣಕಾರರನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮೃತ ಬಾಲಕ ಕ್ರೈಸ್ಟ್ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ನಿಶ್ಚಿತ್ ಬುಧವಾರ ಸಂಜೆ ಐದು ಗಂಟೆಯಿಂದ ನಾಪತ್ತೆಯಾಗಿದ್ದ. ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕನ ಅಪಹರಣ ಮಾಡಲಾಗಿತ್ತು.
ಇದನ್ನು ಓದಿದ್ದೀರಾ? ಬೆಂಗಳೂರು | ಅಪಹರಣ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್ಐಆರ್
ಬಾಲಕನ ತಂದೆ ಜೆ.ಸಿ.ಅಚ್ಯುತ್ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಂಜೆ 7.30 ಕಳೆದರೂ ಟ್ಯೂಷನ್ನಿಮದ ಮಗ ವಾಪಸ್ ಬರದ ಕಾರಣ ತಾಯಿ ಟ್ಯೂಷನ್ ಶಿಕ್ಷಕರಿಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಬಾಲಕ ಟ್ಯೂಷನ್ನಿಂದ ತೆರಳಿರುವುದಾಗಿ ಶಿಕ್ಷಕರು ಹೇಳಿದ್ದಾರೆ.
ಅರಕೆರೆ ಫ್ಯಾಮಿಲಿ ಪಾರ್ಕ್ ಬಳಿ ಬಾಲಕನ ಸೈಕಲ್ ಪತ್ತೆಯಾಗಿದ್ದು ಅಚ್ಯುತ್ ಪೊಲೀಸರಿಗೆ ದೂರು ನೀಡಿದ್ದರು. ಈ ನಡುವೆಯೇ ಬಾಲಕನ ಬಿಡುಗಡೆಗಾಗಿ 5 ಲಕ್ಷ ರೂಪಾಯಿ ನೀಡುವಂತೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು. ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳ ಆದರೆ ಗುರುವಾರ ಬಾಲಕನ ಶವ ಪತ್ತೆಯಾಗಿದೆ.
ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಅಪಹರಣಕಾರರಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರು ತಪ್ಪಿಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಈ ಪೈಕಿ ಗುರುಮೂರ್ತಿ ಅಚ್ಯುತ್ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ.





