ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

Date:

  • ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು
  • ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ

ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಮರಳುತ್ತಿದ್ದಾರೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆ ಆರಂಭದ ದಿನ ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡುವಂತೆ ಸರ್ಕಾರ ಸೂಚನೆ ನೀಡಿದೆ.

ಈ ಕುರಿತಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳು ಶಾಲೆ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡಬೇಕು. ಮಕ್ಕಳು ಶಾಲೆಗೆ ಬರುವ ಮುನ್ನ ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು, ನೀರಿನ ಸಂಪ್‌ಗಳು, ಅನಗತ್ಯ ವಸ್ತುಗಳ ವಿಲೇವಾರಿ, ಶಾಲೆ ಆವರಣ ಸ್ವಚ್ಛಗೊಳಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023-24ರ ಹೊಸ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು 224 ದಿನ ಕಾರ್ಯನಿರ್ವಹಿಸಲಿದ್ದು, ಪ್ರತಿ ತರಗತಿಗೆ ವೇಳಾಪಟ್ಟಿಯನ್ನು ಸಿದ್ಧವಾಗಿರಿಸಬೇಕು ಎಂದು ಹೇಳಿದೆ.

ಜೂನ್‌ 1ರಿಂದ ರಿಂದ ಅಕ್ಟೋಬರ್‌ 7ರವರೆಗೆ ಶಾಲೆಗಳು ಕಾರ್ಯನಿರ್ವಹಿಸುತ್ತವೆ. ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ದಸರಾ ರಜೆ ನೀಡಲಾಗುತ್ತದೆ.

ಅಕ್ಟೋಬರ್ 25 ರಂದು ಎರಡನೇ ಅವಧಿಗೆ ಶಾಲೆಗಳು ಪ್ರಾರಂಭವಾಗಿ 2024ರ ಏ. 10ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿದ್ದು, ಬೋಧನೆ ಪ್ರಾರಂಭವಾಗಲಿದೆ.

ಶಾಲಾ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶಾಲೆಗಳ ಆರಂಭದ ದಿನವೇ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

‘ಪ್ರಮೋಷನ್‌ನೊಂದಿಗೆ ಪ್ರವೇಶ’ ಪ್ರಕ್ರಿಯೆ ‘ವಿದ್ಯಾ ಪ್ರವೇಶ’ ಅಥವಾ ಮೊದಲ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ತಯಾರಿ ಮಾಡ್ಯೂಲ್ ಚಟುವಟಿಕೆಗಳು ಜೂನ್ 1 ರಂದು ಪ್ರಾರಂಭವಾಗುತ್ತವೆ ಮತ್ತು 40 ದಿನಗಳ ಅವಧಿಯವರೆಗೆ ಮುಂದುವರಿಯುತ್ತವೆ.

‘ಬಡ್ತಿಯೊಂದಿಗೆ ಪ್ರವೇಶ’ ಪ್ರಕ್ರಿಯೆಯಡಿ ಮುಂದಿನ ತರಗತಿಗಳಿಗೆ ಎಲ್ಲ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

‘ಮಿಂಚಿನ ಸಂಚಾರ’ ಅಭಿಯಾನದಡಿ ಜಾರಿ ಅಧಿಕಾರಿಗಳು ಜೂನ್ 1 ರಿಂದ ಜೂನ್ 15ರ ನಡುವೆ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ನಾನಾ ಕಲಿಕಾ ಕಾರ್ಯಕ್ರಮಗಳು, ಮೂಲಸೌಕರ್ಯ ಮತ್ತು ಶಾಲೆಗಳ ಇತರ ಅಂಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...