ಬಿಸಿಯೂಟ ಯೋಜನೆಗೆ ಶಾಲಾ ಶಿಕ್ಷಕರ ಬಳಕೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿ: ರಮೇಶ್ ಬಾಬು

Date:

“ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಶಾಲಾ ಹಂತದಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಯೋಜನೆಗೆ ಶಾಲಾ ಮುಖ್ಯ ಶಿಕ್ಷಕ ಮತ್ತು ಇನ್ನಿತರ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ” ಎಂದು ಕಾಂಗ್ರೆಸ್‌ ಮುಖಂಡ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಕ್ಕೆ ಅನುಗುಣವಾಗಿ ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಯಲ್ಲಿದೆ. ಈ ಯೋಜನೆಗೆ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ” ಎಂದು ಹೇಳಿದ್ದಾರೆ.

“ಆದರೆ, ಕಲಬುರಗಿ ಜಿಲ್ಲೆಯ ಒಂದು ಪ್ರಕರಣ ಬಳಸಿಕೊಂಡು ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ವೈಫಲ್ಯಗಳಿಗೆ ಶಾಲೆಯ ಮುಖ್ಯ ಶಿಕ್ಷಕರನ್ನು ಹೊಣೆ ಮಾಡುವ ಸುತ್ತೋಲೆ ಹೊರಡಿಸಿರುವುದು ಅನೇಕ ಗೊಂದಲಗಳಿಗೆ ಕಾರಣವಾಗಿದೆ. ಈ ಬಿಸಿಯೂಟ ಯೋಜನೆಯು ಶಾಲೆಯ ಮುಖ್ಯ ಶಿಕ್ಷಕರಿಗೆ ಅಥವಾ ಇನ್ನುಳಿದ ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಯಾಗಿದೆ. ಜತೆಗೆ, ಹೆಚ್ಚುವರಿ ಕೆಲಸವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆಯ ಬಗ್ಗೆ ನಾನಾ ರೀತಿ ಸುತ್ತೋಲೆ ಹೊರಡಿಸುವ ಕಾರಣ ಶಿಕ್ಷಕರನ್ನು ಬೋಧಕೇತರ ಚಟುವಟಿಕೆಗಳಲ್ಲಿ ಭಾಗಿ ಆಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕುಂಠಿತವಾಗಲು ಅವಕಾಶ ನೀಡುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಈ ಜಂಟಿ ಯೋಜನೆಯು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ ಆರೋಗ್ಯ ಸಂರಕ್ಷಣೆ ಮಾಡುವ ಸಾಮಾಜಿಕ ಕಳಕಳಿ ಹೊಂದಿದೆ. ಇಡೀ ರಾಜ್ಯದಲ್ಲಿ ಬಹುತೇಕ ಶಾಲಾ ಶಿಕ್ಷಕರ ಮುಖಾಂತರ ಈ ಯೋಜನೆ ಜಾರಿಗೆ ತರಲಾಗಿದೆ” ಎಂದು ವಿವರಿಸಿದ್ದಾರೆ.

“ಬಿಸಿಯೂಟ ಯೋಜನೆಯ ಜವಾಬ್ದಾರಿಯನ್ನು ಕೆಲವೆಡೆ ಖಾಸಗಿಯವರಿಗೆ ನೀಡಲಾಗಿದೆ. ಬಿಸಿಯೂಟ ಯೋಜನೆಯಲ್ಲಿ ಆಹಾರ ಪದಾರ್ಥಗಳ ಶೇಖರಣೆ, ಅಡುಗೆಯ ಸಿಬ್ಬಂದಿ ಜತೆಗೆ ಸಂಯೋಜನೆ, ಬಿಸಿಯೂಟ ತಯಾರಿಕೆ ಮತ್ತು ವಿತರಣೆ, ಸುರಕ್ಷತಾ ಹಾಗೂ ಸ್ವಚ್ಛತಾ ವ್ಯವಸ್ಥೆಯ ಅಳವಡಿಕೆ ಮತ್ತು ಮೇಲ್ವಿಚಾರಣೆ, ಎಸ್‌ಡಿಎಂಸಿ ಸಮಿತಿ ಮತ್ತು ಷೋಷಕರೊಂದಿಗೆ ಹೊಂದಾಣಿಕೆ, ಯೋಜನೆಯ ಹಣಕಾಸು ನಿರ್ವಹಣೆ ಇತ್ಯಾದಿ ಕೆಲಸಗಳು ಈ ಬಿಸಿಯೂಟ ಯೋಜನೆಯಲ್ಲಿವೆ. ಇದಕ್ಕಾಗಿಯೇ ಶಿಕ್ಷಕರನ್ನು ಸಮಯ ನೀಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನವೆಂಬರ್‌ನಲ್ಲಿ ₹10,86 ಕೋಟಿ ಮೌಲ್ಯದ ಮಾದಕ ವಸ್ತು ವಶ : ಬಿ. ದಯಾನಂದ್

“ಇದರಿಂದ ಸ್ವಾಭಾವಿಕವಾಗಿ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗುತ್ತವೆ. ಇದರ ಜತೆಗೆ ಬಿಸಿಯೂಟ ಯೋಜನೆಯ ಲೋಪ ಅಥವಾ ವಿಫಲತೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡುವ ಸುತ್ತೋಲೆಯಿಂದ ಶಿಕ್ಷಕರು ಮತ್ತಷ್ಟು ಮಾನಸಿಕ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇದರಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿ ಮಕ್ಕಳ ವಿಕಸನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ತಿಳಿಸಿದ್ದಾರೆ.

“ಶಿಕ್ಷಣ ಇಲಾಖೆ ಪದೇಪದೆ ಇಂತಹ ಸುತ್ತೋಲೆ ಹೊರಡಿಸುವುದರ ಮೂಲಕ ಶಾಲಾ ಶಿಕ್ಷಕರಲ್ಲಿ ಗೊಂದಲ ಉಂಟು ಮಾಡುತ್ತಿದೆ. ಶಾಲಾ ಶಿಕ್ಷಕರನ್ನು ಬೋಧನಾ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಅವಕಾಶ ನೀಡಿದರೆ, ಇದರಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುತ್ತದೆ. ಶಿಕ್ಷಕರನ್ನು ಬೋಧಕೇತರ ಕಾರ್ಯದಲ್ಲಿ ಹೊಣೆಗಾರರನ್ನಾಗಿ ಮಾಡುವುದು ಸಮಂಜಸವಾಗಿರುವುದಿಲ್ಲ. ಹಾಗಾಗಿ, ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಶೈಕ್ಷಣಿಕ ಹಿತದೃಷ್ಟಿಯಿಂದ ಈಗ ನೀಡಿರುವ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲು ಆದೇಶಿಸಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...