ಕಟ್ಟಡ ನಿರ್ಮಾಣ ನಕ್ಷೆಗೆ ಪ್ರಮಾಣೀಕೃತ ವಾಸ್ತುಶಿಲ್ಪಿಗಳ ಸ್ವಯಂ ದೃಢೀಕರಣ ವ್ಯವಸ್ಥೆ ಶೀಘ್ರ ಜಾರಿ: ಡಿಸಿಎಂ

Date:

“ಪ್ರಮಾಣೀಕೃತ ವಾಸ್ತುಶಿಲ್ಪಿಗಳಿಂದ ಕಟ್ಟಡ ನಿರ್ಮಾಣ ನಕ್ಷೆಯ ಸ್ವಯಂ ದೃಢೀಕರಣ ವ್ಯವಸ್ಥೆ ಜಾರಿಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೋ ಆರ್ಟ್ ಕೇಂದ್ರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಟಿರಿಯರ್ ಡಿಸೈನ್ ಶುಕ್ರವಾರ ಏರ್ಪಡಿಸಿದ್ದ ‘ಡಿಸೈನೂರು’ ಹಬ್ಬದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಪ್ರಮಾಣಿಕೃತ ಲೆಕ್ಕಪರಿಶೋಧಕರು ಇರುವಂತೆ, ಪ್ರಮಾಣೀಕೃತ ಕಟ್ಟಡ ವಾಸ್ತುಶಿಲ್ಪಿಗಳಿಗೆ ನಿವೇಶನಗಳ ಕಟ್ಟಡಗಳ ನಕ್ಷೆ ಸ್ವಯಂ ದೃಢೀಕರಿಸುವ ಅವಕಾಶ ನೀಡಲಾಗುವುದು. ಇದರಿಂದ ನಕ್ಷೆ ಮಂಜೂರಿಗೆ ಜನ ಪದೇಪದೇ ಬಿಬಿಎಂಪಿಯ ಬಾಗಿಲು ತುಳಿಯುವುದು ತಪ್ಪುತ್ತದೆ. ಅಧಿಕಾರಿಗಳ ಕಿರುಕುಳ ಸೇರಿದಂತೆ ಕೆಲಸ ವಿಳಂಬವಾಗುವುದೂ ತಪ್ಪುತ್ತದೆ. ಈ ನೆಲದ ಕಾನೂನಿನ ಅರಿವಿರುವ ಕಟ್ಟಡ ವಾಸ್ತುಶಿಲ್ಪಿಗಳು ಸರ್ಕಾರದ ನಿರ್ಣಯಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಜನಸಾಮಾನ್ಯರು ಮನೆ ಕಟ್ಟಲು ಪರದಾಡುವ ಸ್ಥಿತಿ ಈ ಕಾನೂನಿನಿಂದ ಪರಿಹಾರವಾಗಲಿದೆ. ನೀವೆಲ್ಲಾ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೀರಿ ಎನ್ನುವ ನಂಬಿಕೆ ನನಗಿದೆ” ಎಂದರು.

“ಎಷ್ಟು ಅಳತೆಯ ನಿವೇಶನಗಳ ಕಟ್ಟಡಗಳಿಗೆ ಇದು ಅನ್ವಯ ಆಗಲಿದೆ ಎಂಬುದರ ಬಗ್ಗೆ ಒಂದೆರಡು ದಿನದಲ್ಲಿ ವಿವರ ನೀಡಲಾಗುವುದು. ಕಟ್ಟಡ ಮತ್ತು ಒಳಾಂಗಣ ವಿನ್ಯಾಸ ಕ್ಷೇತ್ರಕ್ಕೆ ಬೆಂಗಳೂರು ಮಟ್ಟದಲ್ಲಿ ಸ್ಪರ್ಧೆಯಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಏರ್ಪಟ್ಟಿದೆ. ನಮಗೆಲ್ಲರಿಗೂ ನಾವು ಮಾಡುವ ಕೆಲಸದ ಬಗ್ಗೆ ಗೌರವ ಮತ್ತು ಹೆಮ್ಮೆ ಇರಬೇಕು. ನಿರ್ಮಾಣ ಮತ್ತು ವಿನ್ಯಾಸ ಕ್ಷೇತ್ರದ ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಕಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕ್ಷೇತ್ರಕ್ಕೆ ಸೃಜನಶೀಲ ಮತ್ತು ಹೊಸ ಆಲೋಚನೆಗಳನ್ನು ಹೊಂದಿರುವ ಕೌಶಲ್ಯ ಬೇಕಾಗುತ್ತದೆ. ತಂತ್ರಜ್ಞಾನ ಬೆಳೆಯುತ್ತಿರುವ ಕಾರಣ ಪ್ರತಿ ದಿನವೂ ಈ ಕ್ಷೇತ್ರದಲ್ಲಿ ಸವಾಲುಗಳು ಎದುರಾಗುತ್ತವೆ. ಹೆಚ್ಚು, ಹೆಚ್ಚು ಕಲಿತಷ್ಟು ಕೆಲಸದ ಆಯಸ್ಸು ಹೆಚ್ಚುತ್ತದೆ. ಸೌಂದರ್ಯ ವರ್ಧಕ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚು ಬೇಡಿಕೆ ಇದೆ ಎಂದು ನನ್ನ ಮಗಳು ಆಗಾಗ ಹೇಳುತ್ತಿರುತ್ತಾಳೆ. ಏಕೆಂದರೆ, ಸೌಂದರ್ಯ ಪ್ರಜ್ಞೆ ಎನ್ನುವುದು ಜನರ ತಲೆಯಲ್ಲಿ ಕುಳಿತಿದೆ. ಸಾಮಾನ್ಯ ಕಟ್ಟಡ ನಿರ್ಮಾಣಕ್ಕಿಂತ ಶೇ.10 ರಷ್ಟು ಹೆಚ್ಚುವರಿ ವೆಚ್ಚ ಕಟ್ಟಡ ವಿನ್ಯಾಸ ಮತ್ತು ಒಳಾಂಗಣ ವಿನ್ಯಾಸಕ್ಕೆ ಖರ್ಚಾಗುತ್ತದೆ. ಇದರ ಬಗ್ಗೆ ಗ್ರಾಹಕರಿಗೆ ಮನವರಿಕೆ ಮಾಡುವುದು ನಿಮ್ಮ ಕೆಲಸ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿದ್ದಾರೆ ಅತಿ ಹೆಚ್ಚು ನಕಲಿ ವೈದ್ಯರು: ರೋಗಿಗಳ ಜೀವದ ಜತೆಗೆ ಚೆಲ್ಲಾಟ

“ಬೆಂಗಳೂರು ದಿನೇ, ದಿನೇ ಬೆಳೆಯುತ್ತಿದೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಕಟ್ಟಡ ವಿನ್ಯಾಸದಲ್ಲೇ ಅತ್ಯಂತ ಸುಂದರ ಕಟ್ಟಡವಾದ ವಿಧಾನಸೌಧವನ್ನು ನಿರ್ಮಾಣ ಮಾಡಿದ್ದು, ಕೆಂಗಲ್ ಹನುಮಂತಯ್ಯನವರು. ಇತರೇ ಸುಂದರ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು ಬ್ರಿಟಿಷರು. ಮುಂದಿನ ದಿನಗಳಲ್ಲಿ ಕಟ್ಟಡ ವಿನ್ಯಾಸಕಾರರಿಗೆ ಹೆಚ್ಚು, ಹೆಚ್ಚು ಕೆಲಸ ದೊರೆಯುವಂತಾಗಲಿ. ನಿಮ್ಮ ಕೆಲಸದ ವಿಚಾರದಲ್ಲಿ ಯಾವುದಾದರೂ ತೊಂದರೆ ಉಂಟಾದರೆ ನೇರವಾಗಿ ನನ್ನ ಭೇಟಿಯಾಗಿ ಸಮಸ್ಯೆ ತಿಳಿಸಬಹುದು. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...