ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳ ಸಾವು

Date:

ಬೆಕ್ಕುಗಳಲ್ಲಿ ಕಂಡುಬರುವ ಮಾರಕ ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ತಗುಲಿ 3 ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೃತಪಟ್ಟಿವೆ.

ಬನ್ನೇರುಘಟ್ಟ ಉದ್ಯಾನವನದ ಚಿರತೆಗಳಲ್ಲಿ ಮೊದಲ ಬಾರಿಗೆ ಮಾರಕ ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ಕಂಡುಬಂದಿದೆ. ಆಗಸ್ಟ್‌ 22ರಂದು ಚಿರತೆ ಮರಿಗಳಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಸೆ.5 ರ ವೇಳೆಗೆ ಏಳೂ ಮರಿಗಳು ಸಾವನ್ನಪ್ಪಿವೆ.

ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಲಾಗಿತ್ತು. ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಮಾರಕ ಫೆಲಿನ್‌ ಪ್ಯಾನ್ಲೂಕೋಪೇನಿಯಾ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿದ್ದು, ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಹಾಗೂ ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಣೆ ಮಾಡಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ಚಿರತೆ ಮರಿಗಳನ್ನೂ ಸಫಾರಿಗೆ ಬಿಡಲಾಗಿತ್ತು. ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರದಲ್ಲಿ ಒಟ್ಟು 80 ಚಿರತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ನೀಡಿದ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌, “ಸೋಂಕಿನಿಂದ ಚಿರತೆ ಮರಿಗಳು ಸಾವನ್ನಪ್ಪಿದ್ದು, ಈ ರೋಗ ಬೇರೆ ಪ್ರಾಣಿಗಳಿಗೆ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಜೈವಿಕ ಉದ್ಯಾನವನದ ಪ್ರಯೋಗಾಲಯದಲ್ಲಿ ಮೃತ ಚಿರತೆ ಮರಿಗಳ ರಕ್ತವನ್ನು ಪರೀಕ್ಷೆ ಮಾಡಿದಾಗ ಚಿರತೆಗಳಿಗೆ ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ಸೋಂಕು ತಗುಲಿರುವುದು ದೃಢವಾಗಿದೆ” ಎಂದರು.

“ಚಿರತೆಗಳಿಗೆ ಈ ವೈರಸ್‌ ತಗುಲಿದರೆ, ವಾಂತಿ, ಭೇದಿಯಾಗುತ್ತದೆ. ಜತೆಗೆ ಬಿಳಿರಕ್ತ ಕಣಗಳು ಕಡಿಮೆಯಾಗುತ್ತವೆ. ಈ ರೀತಿಯ ಸೋಂಕಿನ ಲಕ್ಷಣ ಕಾಣಿಸಿಕೊಂಡ ಚಿರತೆಗಳನ್ನು ಈಗಾಗಲೇ ಪ್ರತ್ಯೇಕ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲ ಚಿರತೆಗಳಿಗೆ ಬೂಸ್ಟರ್‌ ಡೋಸ್‌ ನೀಡಲಾಗಿದೆ. ನಿತ್ಯ ಎರಡು ಸಲ ಗ್ಲೂಕೋಸ್‌ ನೀಡುವ ಮೂಲಕ ಆಂಟಿ ವೈರಲ್‌ ಔಷಧಿ ನೀಡಲಾಗುತ್ತಿದೆ” ಎಂದು ತಿಳಿಸಿದರು.

“ಉದ್ಯಾನವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಉದ್ಯಾನವನದಲ್ಲಿ ಬ್ಲಿಚೀಂಗ್‌ ಪೌಡರ್‌ ಸಿಂಪಡಿಸಲಾಗಿದ್ದು, ಕೇಜ್‌ಗಳಲ್ಲಿ ವೈರಸ್ ನಾಶಪಡಿಸಲು ಬರ್ನಿಂಗ್‌ ಮಾಡಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ; ಗಂಭೀರ ಗಾಯ

“ಉದ್ಯಾನವನದ ವೈದ್ಯರಾದ ಡಾ.ಉಮಾಶಂಕರ್‌, ಡಾ.ವಿಜಯಕುಮಾರ್, ಡಾ.ಮಂಜುನಾಥ್‌ ಅವರ ನೇತೃತ್ವದಲ್ಲಿ ತಜ್ಞರಾದ ಡಾ.ಅನ್ಸರ್‌ ಕಮರನ್‌, ಡಾ.ಉಪೇಂದ್ರ, ಡಾ.ವೀರೇಗೌಡ ಅವರ ಸಲಹೆಯಂತೆ ಚಿರತೆಗಳಿಗೆ ಚಿಕಿತ್ಸೆ ನೀಡಲಾಗಿದೆ. ಹುಲಿ ಮತ್ತು ಸಿಂಹಗಳಿಗೂ ಬೂಸ್ಟರ್‌ ಡೋಸ್‌ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ ಮಾರಕ ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬಂದಿದೆ” ಎಂದರು.

“ನಿಫಾ ವೈರಸ್‌ ಕೇರಳದಲ್ಲಿ ಉಲ್ಬಣಗೊಂಡ ಹಿನ್ನೆಲೆ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಾರ್ಕ್‌ ಒಳಬರುವ ಬಾವಲಿಗಳ ಮೇಲೆ ನಿಗಾ ಇಡಲಾಗಿದೆ. ಮುಂಬರುವ ದಿನಗಳಲ್ಲಿ ಪ್ರವಾಸಿಗರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲು ಸಿದ್ಧತೆ ನಡೆಸಲಾಗಿದೆ. ಉದ್ಯಾನಕ್ಕೆ ಬರುವ ಪ್ರವೇಶದ್ವಾರ ಮತ್ತು ನಿರ್ಗಮನ ದ್ವಾರದಲ್ಲಿ ಸೋಂಕು ನಿವಾರಕ ದ್ರಾವಣ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...