ಶಕ್ತಿ ಯೋಜನೆ | ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ಬದಲಿಗೆ ಸಾಮಾನ್ಯ ಬಸ್‌ ಪಾಸ್ ವಿತರಣೆ

Date:

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್‌ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದರು. ಇದೇ ವೇಳೆ, ಕೆಲವು ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ಗಳನ್ನು ನೀಡಲಾಗಿತ್ತು. ಇನ್ನುಳಿದಂತೆ ರಾಜ್ಯದ ಮಹಿಳೆಯರಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಲು ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ನೀಡಲಾಗುವುದು ಎಂದು ಹೇಳಲಾಗಿತ್ತು. ಇದೀಗ, ಸ್ಮಾರ್ಟ್‌ ಕಾರ್ಡ್‌ಗಳ ಬದಲಿಗೆ ಸಾಮಾನ್ಯ ಬಸ್‌ ಪಾಸ್‌ ನೀಡಲು ನಿಗಮ ಯೋಜಿಸಿದೆ ಎಂದು ತಿಳಿದು ಬಂದಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ನಿಗಮಗಳಿಗೆ ಅಧಿಕ ಆದಾಯ ಬರುತ್ತಿದೆ. ನಾಲ್ಕು ನಿಗಮದ ಬಸ್‌ಗಳಲ್ಲಿ ನಿತ್ಯ 56 ಸಾವಿರಕ್ಕೂ ಹೆಚ್ಚು ಮಹಿಳೆಯರು ಸಂಚರಿಸುತ್ತಿದ್ದಾರೆ.

ಸುಮಾರು ಮೂರು ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ತಯಾರಿಸುವ ಕುರಿತು ಸೆಂಟರ್‌ ಫಾರ್ ಇ-ಆಡಳಿತ (ಸಿಇಜಿ)ವನ್ನು ಸಾರಿಗೆ ನಿಗಮ ಸಂಪರ್ಕಿಸಿತ್ತು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿತ್ತು. ಇಷ್ಟು ಪ್ರಮಾಣದ ಸ್ಮಾರ್ಟ್‌ ಕಾರ್ಡ್‌ಗಳನ್ನು ತಯಾರಿಸಲು ಸಿಇಜಿ ಹಿಂದೇಟು ಹಾಕಿದೆ. ಹಾಗಾಗಿ, ಸಾರಿಗೆ ನಿಗಮಗಳು ಸಾಮಾನ್ಯ ಬಸ್ ಪಾಸ್‌ಗಳನ್ನು ಹೋಲುವ ಶಕ್ತಿ ಪಾಸ್‌ಗಳನ್ನು ಪರಿಚಯಿಸಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, “ಸ್ಮಾರ್ಟ್ ಕಾರ್ಡ್ ಅಭಿವೃದ್ಧಿಯ ಪ್ರಸ್ತಾವನೆಯನ್ನು ಸಿಇಜಿ ತಿರಸ್ಕರಿಸಿದೆ. ಹಾಗಾಗಿ, ಶಕ್ತಿ ಯೋಜನೆಯ ಸಾಮಾನ್ಯ ಬಸ್ ಪಾಸ್‌ ಪರಿಚಯಿಸಲು ನಿರ್ಧರಿಸಲಾಗಿದೆ. ಪಾಸ್ ಪ್ರಿಂಟಿಂಗ್ ಮತ್ತು ವಿತರಣೆಗೆ ಅಸ್ತಿತ್ವದಲ್ಲಿರುವ ವ್ಯವಸ್ಥೆ ಬಳಸಿಕೊಳ್ಳಬೇಕು” ಎಂದು ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಟ್‌ ಕಾಯಿನ್ ಪ್ರಕರಣ | ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು

“ಈ ಬಸ್‌ಪಾಸ್‌ಗಳು ಸಾಮಾನ್ಯ ಬಸ್‌ಪಾಸ್‌ಗಳಂತೆ ಇರುತ್ತವೆ. ಈಗಾಗಲೇ ಪಾಸ್‌ಗಳನ್ನು ನೀಡುವ ವ್ಯವಸ್ಥೆಯನ್ನು ಹೊಂದಿರುವುದರಿಂದ ಈ ಕಾರ್ಯ ಸುಲಭವಾಗಲಿದೆ. ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಅಧಿಕೃತ ಪೋರ್ಟಲ್‌ನಲ್ಲಿ ಅರ್ಜಿ ಹಾಕಬೇಕು. ನಂತರ ಈ ಪಾಸ್‌ಗಳನ್ನು ಬಸ್‌ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ವಿತರಣೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಈಗ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ ನೋಂದಣಿ ನಡೆಯುತ್ತಿರುವುದರಿಂದ ಶಕ್ತಿ ಸಾಮಾನ್ಯ ಕಾರ್ಡ್‌ಗಳ ನೋಂದಣಿ ಪ್ರಾರಂಭಕ್ಕೆ ವಿಳಂಬವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...