ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ?: ಮುಖ್ಯಮಂತ್ರಿ ಚಂದ್ರು

Date:

“ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಲ್ಲಾ ಏನು ಕಡಿದು ಕಟ್ಟೆ ಹಾಕಿದ್ದೀರಾ? ಮೇಕೆದಾಟು ಯೋಜನೆ ಯಾಕೆ ಪ್ರಾರಂಭಿಸಿಲ್ಲ. ಅಧಿವೇಶನ ಕರೆದು ನೀರು ಬಿಡಲ್ಲ ಎಂದು ನಿರ್ಣಯ ಮಾಡಿ, ಸುಪ್ರೀಂಕೋರ್ಟ್‌ಗೂ ವಿಚಾರ ತಿಳಿಸಿ, ಕೋರ್ಟ್ ಛೀಮಾರಿ ಹಾಕಬಹುದು, ಜೈಲಿಗೆ ಹಾಕಬಹುದು, ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ” ಎಂದು ರಾಜ್ಯ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷದ ರಾಜ್ಯಾಧಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದರು.

ಕುಡಿಯುವ ನೀರಿನ ಅಗತ್ಯತೆ ಅರಿಯದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಅವೈಜ್ಞಾನಿಕ ಆದೇಶ ಖಂಡಿಸಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ಮತ್ತಿತರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಒಟ್ಟಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಕಾವೇರಿ ಹೋರಾಟದ ಜಾಗೃತಿ ಸಭೆ ನಡೆಯಿತು.

ಕಾವೇರಿ ಹೋರಾಟದ ಜಾಗೃತಿ ಸಭೆಯಲ್ಲಿ ಸೆಪ್ಟೆಂಬರ್ 26ಕ್ಕೆ ಬೆಂಗಳೂರು ಬಂದ್‌ ಘೋಷಿಸಲಾಗಿದೆ. ಕಾವೇರಿ ನದಿ ಭಾಗದ ಎಲ್ಲ ಜಿಲ್ಲೆಯ ಜನರು ಬೆಂಗಳೂರು ಬಂದ್‌ಗೆ ಬೆಂಬಲಿಸುವಂತೆ ಕರೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ನಾಡು, ನುಡಿ, ಜನ ರಕ್ಷಣೆ ಬಂದಾಗ ಆಮ್ ಆದ್ಮಿ ಪಕ್ಷ ಭೇದಭಾವ ಇಲ್ಲದೆ, ಹೋರಾಟ ಮಾಡುತ್ತದೆ. ಒಂದು ಕೋಟಿಗೂ ಹೆಚ್ಚು ಜನ ಬೆಂಗಳೂರಿನಲ್ಲಿದ್ದು, ಬೆಂಗಳೂರಿಗೆ 1450 ಎಂಎಲ್‌ಡಿ ನೀರು ಬೇಕು. ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 150 ಲೀಟರ್ ನೀರು ಬೇಕು. ಆದರೆ, ಈಗ 108 ಲೀಟರ್ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ” ಎಂದರು.

“ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆಯಾಗಲಿದೆ. ಇಷ್ಟು ವರ್ಷ ಅಧಿಕಾರ ನಡೆಸಿದ ಮೂರು ಪಕ್ಷಗಳು, ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ವಿಫಲವಾಗಿವೆ. ನಿಮಗೆ ನಾಡಿನ ಹಿತ ಕಾಪಾಡುವ ಬದ್ಧತೆ ಇಲ್ಲವಾ?” ಎಂದು ಪ್ರಶ್ನಿಸಿದರು.

ಬೆಂಗಳೂರಿನ ಜನ ಹೋರಾಟ ಮಾಡಲಿ

“ಬೆಂಗಳೂರಿನಲ್ಲಿ 1.30 ಲಕ್ಷ ಜನ ಇದ್ದು, ಇದರಲ್ಲಿ 65 ಲಕ್ಷ ಜನ ಬೇರೆ ಭಾಷಿಕರು ಇದ್ದಾರೆ. ಅವರಿಗೂ ಕುಡಿಯುವ ನೀರಿನ ಅವಶ್ಯಕತೆ ಇದೆ. 45 ದಿನಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ ಜನ ಮಲಗಿದ್ದಾರೆ. ಇದು ಸರಿಯಲ್ಲ” ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

“ಯಾವುದೇ ಭಾಷಿಕರು ಆದರೂ ಕುಡಿಯಲು, ಬಳಸಲು ನೀರು ಮುಖ್ಯ ಆದ್ದರಿಂದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜನರ ಬದುಕು ಮುಖ್ಯ, ಯಾವುದೇ ಆದೇಶ ಏನೂ ಮಾಡಲು ಆಗಲ್ಲ. ಕುಡಿಯುವ ನೀರಿಗೆ ಆದ್ಯತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಪೌರ ಕಾರ್ಮಿಕ ದಿನಾಚರಣೆಯ ಜೊತೆಗೆ ತಾರತಮ್ಯ, ಅವಮಾನ, ಶೋಷಣೆಯೂ ಇದೆ…

ಸಹಿ ಸಂಗ್ರಹ ಚಳವಳಿ

ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಬೆಂಗಳೂರಿನ ಜನ ಬೀದಿಗಿಳಿಯುವುದು ಕಷ್ಟ ಎನ್ನಲಾಗುತ್ತದೆ. ಆದರೆ, ಸ್ಟೀಲ್ ಫ್ಲೈ ಓವರ್ ವಿಚಾರದಲ್ಲಿ ಬೆಂಗಳೂರಿಗರು ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಮಾಡಿದ್ದರು. ಅಂತಹ ಕೆಲಸ ಮತ್ತೆ ಆಗಬೇಕು. ಮಾತ್ರವಲ್ಲದೆ ನಾವೇ ಜನರ ಬಳಿ ಹೋಗಿ ಸಹಿ ಸಂಗ್ರಹಣೆ ಮಾಡಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಹೇಳಿದರು.

ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತಿತರ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...