ವಿಪಕ್ಷಗಳ ರಾಜಕೀಯ ಬ್ಲಾಕ್ ಮೇಲ್‌ಗಾಗಿ ಎಸ್ಐಟಿ ತನಿಖೆ ರಚನೆ : ಪೃಥ್ವಿ ರೆಡ್ಡಿ ಆರೋಪ

Date:

  • ಅಡ್ಜೆಸ್ಟ್‌ಮೆಂಟ್ ರಾಜಕಾರಣ ಬಿಟ್ಟು ನ್ಯಾಯಾಂಗ ಆಯೋಗ ರಚಿಸುವ ಮೂಲಕ ತನಿಖೆ ನಡೆಸಲಿ
  • ಈ ಹಿಂದಿನ ಅನೇಕ ಎಸ್‌ಐಟಿ ತನಿಖೆಗಳು ಈಗಾಗಲೇ ಹಳ್ಳ ಹಿಡಿದಿವೆ : ಪೃಥ್ವಿ ರೆಡ್ಡಿ

“ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಸಾವಿರಾರು ಕೋಟಿ ಭ್ರಷ್ಟಾಚಾರ ಹಗರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಿರುವುದು ಕೇವಲ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿ, ಬ್ಲಾಕ್ ಮೇಲ್ ತಂತ್ರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆಯೇ ಹೆಚ್ಚಾಗಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳಿಗೆ ತಮ್ಮ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲು ಭ್ರಷ್ಟಮುಕ್ತ ಆಡಳಿತದಿಂದ ಮಾತ್ರ ಸಾಧ್ಯ ಎಂಬ ಇಚ್ಛೆ ಇದ್ದಲ್ಲಿ ಸರ್ವೋಚ್ಚ ಹಾಗೂ ಉಚ್ಚನ್ಯಾಯಾಲಯಗಳ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ಆಯೋಗಗಳನ್ನು ರಚಿಸಿ ತನಿಖೆ ನಡೆಸಲಿ” ಎಂದರು. 

“ಬಿಟ್ ಕಾಯಿನ್, 40% ಪರ್ಸೆಂಟ್, ಕೋವಿಡ್ ಕಾಲದ ಖರೀದಿ, ನೇಮಕಾತಿ ಹಾಗೂ ವರ್ಗಾವಣೆ, ಡಿ- ನೋಟಿಫಿಕೇಶನ್ ಹಗರಣಗಳ ತನಿಖೆಗಾಗಿ ಸರ್ಕಾರದ ಅಡಿಯಲ್ಲಿನ ಪೊಲೀಸ್ ಅಧಿಕಾರಿಗಳಿಂದ ಯಾವುದೇ ನ್ಯಾಯ ಸಿಗುವುದಿಲ್ಲ. ಇವರು ತಮ್ಮದೇ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸುವ ಬದ್ಧತೆ ಎಂದಿಗೂ ಸಾಧ್ಯವಿರುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ಈ ಕ್ರಮ ರಾಜ್ಯದ ಜನತೆಯ ಸಾವಿರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿದ ಹಗರಣಗಳನ್ನು ತಿಪ್ಪೇ ಸಾರಿಸಿ, ಮುಚ್ಚಿ ಹಾಕುವ ಪ್ರಕ್ರಿಯೆ ಹೊರತು ಬೇರೇನೂ ಅಲ್ಲ. ಇವುಗಳಿಂದ ವಿಪಕ್ಷಗಳ ಬಾಯಿಮುಚ್ಚಿಸಬಹುದೇ ಹೊರತು, ರಾಜ್ಯದ ಜನತೆಗೆ ಯಾವುದೇ ನ್ಯಾಯವನ್ನು ಕೊಡಿಸಲು ಸಾಧ್ಯವಿಲ್ಲ. ಈ ಹಿಂದಿನ ಅನೇಕ ಎಸ್‌ಐಟಿ ತನಿಖೆಗಳು ಈಗಾಗಲೇ ಹಳ್ಳ ಹಿಡಿದಿವೆ” ಎಂದು ಪೃಥ್ವಿ ರೆಡ್ಡಿ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು

“ಕೇವಲ ನ್ಯಾಯಾಂಗ ಆಯೋಗದ ಮುಂದೆ ಮಾತ್ರ ನಮ್ಮಲ್ಲಿರುವ ದಾಖಲೆ ಹಾಗೂ ಸಾಕ್ಷಿಗಳನ್ನು ಒದಗಿಸುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅನೇಕ ಬಾರಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದು ಗೊತ್ತಿದೆ. ಇವರಿಗೆ ರಾಜ್ಯವನ್ನು ಭ್ರಷ್ಟಮುಕ್ತ ಮಾಡಲು ನಿಜಕ್ಕೂ ಮನಸ್ಸಿದ್ದಲ್ಲಿ ಈ ಕೂಡಲೇ ಅಡ್ಜೆಸ್ಟ್ ಮೆಂಟ್ ರಾಜಕಾರಣವನ್ನು ಬಿಟ್ಟು ನ್ಯಾಯಾಂಗ ಆಯೋಗಗಳನ್ನು ರಚಿಸುವ ಮೂಲಕ ತನಿಖೆ ಮಾಡಿಸಲಿ” ಎಂದು ಪೃಥ್ವಿ ರೆಡ್ಡಿ ಸವಾಲು ಎಸೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...