ನೈರುತ್ಯ ರೈಲ್ವೆ | ಟಿಕೆಟ್ ರಹಿತ ಪ್ರಯಾಣದ 6,27,014 ಪ್ರಕರಣ ದಾಖಲು: ₹46.31 ಕೋಟಿ ದಂಡ ಸಂಗ್ರಹ

Date:

“ಈ ಹಣಕಾಸು ವರ್ಷದಲ್ಲಿ ಅಂದರೆ, 2023 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಟಿಕೆಟ್ ರಹಿತ ಪ್ರಯಾಣದ 6,27,014 ಪ್ರಕರಣಗಳು ದಾಖಲಾಗಿದ್ದು, ₹46.31 ಕೋಟಿ ದಂಡ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 9.95% ಹೆಚ್ಚಳವಾಗಿದೆ. ಇದು ನೈರುತ್ಯ ರೈಲ್ವೆ ಪ್ರಾರಂಭವಾದಾಗಿನಿಂದ ಅತಿ ಹೆಚ್ಚು ವಸೂಲಿಯಾದ ದಂಡವಾಗಿದೆ” ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ನೈರುತ್ಯ ರೈಲ್ವೆ ಇಲಾಖೆ, “ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದು, ಟಿಕೆಟ್ ರಹಿತ ಮತ್ತು ಅನಿಯಮಿತ ಪ್ರಯಾಣವನ್ನು ತಡೆಯಲು ಎಕ್ಸ್‌ಪ್ರೆಸ್, ವಿಶೇಷ ರೈಲುಗಳು ಸೇರಿದಂತೆ ಪ್ರಯಾಣಿಕರ ರೈಲು ಸೇವೆಗಳಲ್ಲಿ ಎಲ್ಲ ಅಧಿಕೃತ ರೈಲು ಬಳಕೆದಾರರಿಗೆ ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿಶೇಷ ಟಿಕೆಟ್ ತಪಾಸಣಾ ಕಾರ್ಯವನ್ನು ನಿಯಮಿತವಾಗಿ ನಡೆಸಲಾಗುತ್ತಿದೆ” ಎಂದು ಹೇಳಿದೆ.

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 3,68,205 ಪ್ರಕರಣಗಳನ್ನು ದಾಖಲಿಸಿದ್ದು, ₹28.26 ಕೋಟಿ ದಂಡ ಸಂಗ್ರಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಡಿಸೆಂಬರ್ ತಿಂಗಳಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 72,041 ಪ್ರಕರಣಗಳನ್ನು ದಾಖಲಿಸಿ ₹5.13 ಕೋಟಿ ದಂಡ ಸಂಗ್ರಹಿಸಲಾಗಿದೆ.

ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ವಿಭಾಗವಾರು ದಂಡ ಸಂಗ್ರಹ

  • ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು 96,790 ಪ್ರಕರಣಗಳನ್ನು ದಾಖಲಿಸಿ, ₹6.36 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 3,68,205 ಪ್ರಕರಣ ದಾಖಲಿಸಿ, ₹28.26 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಮೈಸೂರು ವಿಭಾಗವು 1,00,538 ಪ್ರಕರಣ ದಾಖಲಿಸಿ, ₹5.91 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಫ್ಲೈಯಿಂಗ್ ಸ್ಕ್ವಾಡ್ (ಕೇಂದ್ರ ಕಚೇರಿ) ವಿಭಾಗವು 61,481 ಪ್ರಕರಣ ದಾಖಲಿಸಿ, ₹5.77 ಕೋಟಿ  ದಂಡ ಸಂಗ್ರಹಿಸಿದೆ.

“ರೈಲ್ವೆ ಕಾಯ್ದೆ, 1989ರ ಸೆಕ್ಷನ್ 138ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್ ಅಥವಾ ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದರೆ, ಅಂತಹವರಿಗೆ ₹250 ದಂಡ ವಿಧಿಸಲಾಗುತ್ತದೆ. ಪ್ರಯಾಣಿಕರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹250 ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಟಿಕೆಟ್ ತಪಾಸಣೆಯಲ್ಲಿ ಶ್ಲಾಘನೀಯ ಪ್ರಯತ್ನಗಳಿಗಾಗಿ ಟಿಕೆಟ್ ತಪಾಸಣಾ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...