ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

Date:

  • ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಹತ್ತು ಟ್ರಿಪ್‌ಗಳಲ್ಲಿ ಸಂಚಾರ
  • ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದಾಗಿವೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಮತ್ತು ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ ಇಂದ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ.

ಏ. 25ರಿಂದ ಜೂನ್ 27 ರವರೆಗೆ ಪ್ರತಿ ಮಂಗಳವಾರ (ರೈಲು ಸಂಖ್ಯೆ 06083) ಕೊಚುವೇಲಿಯಿಂದ ಸಂಜೆ 06:05 ಗಂಟೆಗೆ ರೈಲು ಹೊರಡಲಿದೆ. ಮರುದಿನ ಬೆಳಿಗ್ಗೆ 10:55 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ವಿಶೇಷ ರೈಲು ಆಗಮಿಸಲಿದೆ.

ಈ ರೈಲು ಮಾರ್ಗದಲ್ಲಿ ಕೊಲ್ಲಂ, ಕಾಯಂಕುಲಂ, ಮಾವೇಲಿಕರ, ಚೆಂಗನ್ನೂರ್, ತಿರುವಳ್ಳ, ಚೆಂಗನಸೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಅಲುವಾ, ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರ್, ಈರೋಡ್, ಸೇಲಂ, ತಿರುಪತ್ತೂರ್, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಿಗೆ ವಿಶೇಷ ರೈಲು ಆಗಮಿಸಿ/ನಿರ್ಗಮಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 26 ರಿಂದ ಜೂನ್ 28 ರವರೆಗೆ ಪ್ರತಿ ಬುಧವಾರ (ರೈಲು ಸಂಖ್ಯೆ-06084) ಬೆಂಗಳೂರಿನಿಂದ ಮಧ್ಯಾಹ್ನ 12:45 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಡುವ ವಿಶೇಷ ರೈಲು, ಮರುದಿನ ಬೆಳಗ್ಗೆ 6 ಗಂಟೆಗೆ ಕೊಚುವೇಲಿ ನಿಲ್ದಾಣ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರ್, ಸೇಲಂ, ಈರೋಡ್, ತಿರುಪ್ಪೂರ್-, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚೆಂಗನಸೇರಿ, ತಿರುವಳ್ಳ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ. ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿರಲಿದೆ.

ಈ ಸುದ್ದಿ ಓದಿದ್ದೀರಾ? ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೇ ರಂಗದಲ್ಲಿ ಬದಲಾವಣೆ ತರಲು ಸಾಧ್ಯ: ತುಷಾರ್ ಗಿರಿನಾಥ್

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಏಪ್ರಿಲ್ ತಿಂಗಳಲ್ಲಿ​ ರೈಲುಗಳು ರದ್ದಾಗಿವೆ.

ಭಾಗಶಃ ರದ್ದಾದ ರೈಲುಗಳು

  • (ರೈಲು ಸಂಖ್ಯೆ 12678) ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.
  • (ರೈಲು ಸಂಖ್ಯೆ 12677) ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ ಎಕ್ಸಪ್ರೆಸ್​ ರದ್ದಾಗಿದೆ.
  • (ರೈಲು ಸಂಖ್ಯೆ 12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.
  • (ರೈಲು ಸಂಖ್ಯೆ 01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.
  • (ರೈಲು ಸಂಖ್ಯೆ 06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...