ಬೆಂಗಳೂರು | 41 ಅಂಡರ್‌ಪಾಸ್‌ಗಳ ಸ್ಥಿತಿಗತಿ ವರದಿ ಸಿದ್ಧಪಡಿಸಿದ ಬಿಬಿಎಂಪಿ

Date:

  • ಅಂಡರ್‌ಪಾಸ್‌ಗಳ ನಿರ್ವಹಣೆಗಾಗಿ ಹಣ ವ್ಯಯಿಸುತ್ತಿರುವ ಬಿಬಿಎಂಪಿ
  • ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿದ ಸಾಫ್ಟವೇರ್ ಎಂಜಿನಿಯರ್

ಬೆಂಗಳೂರಿನ ಕೆ ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಯುವತಿ ಸಾವನ್ನಪ್ಪಿದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಚೆತ್ತುಕೊಂಡಿದೆ. ರೈಲ್ವೆ ಸೇತುವೆಗಳು ಸೇರಿದಂತೆ 41 ಅಂಡರ್‌ಪಾಸ್‌ಗಳ ಸ್ಥಿತಿಗತಿಯ ಬಗೆಗಿನ ವರದಿ ಸಿದ್ಧಗೊಳಿಸಿದೆ. ಈ ವರದಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲು ನಿರ್ಧರಿಸಿದೆ.

ನಗರದ ಹಲವಾರು ಅಂಡರ್‌ಪಾಸ್‌ಗಳ ನಿರ್ವಹಣೆಗಾಗಿ ಬಿಬಿಎಂಪಿ ಹಣ ವ್ಯಯಿಸುತ್ತಿದೆ. ಆದರೂ, ಸೇತುವೆಗಳು ಗುಣಮಟ್ಟದಿಂದ ಕೂಡಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

“ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಧಿಕೃತ ವೆಬ್‌ಸೈಟ್‌ನಲ್ಲಿ ವರದಿಯನ್ನು ಹಾಕಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ರಸ್ತೆ ಮೂಲಸೌಕರ್ಯ ವಿಭಾಗವು ನಗರದ ನಾನಾ ಭಾಗಗಳಲ್ಲಿ ಇರುವ 53 ಅಂಡರ್‌ಪಾಸ್‌ಗಳ ಪೈಕಿ 41 ಅಂಡರ್‌ಪಾಸ್‌ಗಳ ಸಮೀಕ್ಷೆ ಪೂರ್ಣಗೊಳಿಸಿದೆ. ಇದುವರೆಗೆ 14 ಅಂಡರ್‌ಪಾಸ್‌ಗಳ ಆಡಿಟ್ ವರದಿಗಳನ್ನು ಅಪ್ಲೋಡ್ ಮಾಡಲಾಗಿದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮೇ 21ರಂದು ಯುವತಿ ಭಾನುರೇಖಾ ಅವರು ತಮ್ಮ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು ಮಳೆ ನೀರಿನಲ್ಲಿ ಮುಳುಗಿತ್ತು. ಭಾನುರೇಖಾ ಸಾವನ್ನಪ್ಪಿದ್ದರು. ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ನಗರದಲ್ಲಿರುವ ಹಲವು ಅಂಡರ್‌ಪಾಸ್‌ಗಳನ್ನು ನೇರವಾಗಿ ಬಿಬಿಎಂಪಿಯೇ ನಿರ್ವಹಿಸುತ್ತಿದೆ. ಕೆಲವು ಅಂಡರ್‌ಪಾಸ್‌ಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸಿದೆ ಎಂಬುದು ಸಮೀಕ್ಷೆ ವೇಳೆ ತಿಳಿದುಬಂದಿದೆ. ಅಂಡರ್‌ಪಾಸ್‌ಗಳ ನೀರು ಸರಾಗವಾಗಿ ಮಳೆ ಚರಂಡಿಗಳಿಗೆ ಹರಿದುಹೋಗುವಂತೆ ನೋಡಿಕೊಳ್ಳಲು ಪಾಲಿಕೆಯು ಹೊರಗುತ್ತಿಗೆ ನೀಡುತ್ತಿದೆ ಎಂದು ಹೇಳಲಾಗಿದೆ.

ನಾಯಂಡಹಳ್ಳಿ, ಆನಂದ್ ನಗರ (ಬಳ್ಳಾರಿ ರಸ್ತೆ), ಕಂಟೋನ್ಮೆಂಟ್ ರೈಲು ನಿಲ್ದಾಣ (ಜಯಮಹಲ್ ಸಂರ್ಕಿಸುವ ರಸ್ತೆ), ಆರ್‌ ಎಮ್‌ ವಿ ಲೇಔಟ್ ಮತ್ತು ಯಲಹಂಕ ರೈಲ್ವೆ ಕೆಳಸೇತುವೆಗಳ ನಿರ್ವಹಣೆಯನ್ನು ಬಿಬಿಎಂಪಿ ಹೊರಗುತ್ತಿಗೆಗೆ ನೀಡಿದೆ.

ಸಿಎನ್ಆರ್ ರಸ್ತೆ, ಕುವೆಂಪು ವೃತ್ತ (ಹೊಸ ಬಿಇಎಲ್ ರಸ್ತೆ ಕಡೆಗೆ) ಮತ್ತು ಮೆಕ್ರಿ ವೃತ್ತದಲ್ಲಿರುವ ಅಂಡರ್‌ಪಾಸ್‌ಗಳನ್ನು ಅಲ್ಲಿ ಜಾಹೀರಾತು ಫಲಕಗಳನ್ನು ಹಾಕುವ ಹಕ್ಕು ಹೊಂದಿರುವ ಖಾಸಗಿ ಸಂಸ್ಥೆಗಳು ನಿರ್ವಹಿಸುತ್ತಿವೆ.

ಈ ಅಂಡರ್‌ಪಾಸ್‌ಗಳು ಪದೇಪದೆ ಜಲಾವೃತವಾಗುತ್ತಿವೆ. ಒಳಚರಂಡಿಗೆ ನೀರು ಹರಿಯುವ ಜಾಗದಲ್ಲಿ ಕಸ, ಮಣ್ಣು ಮತ್ತು ಹೂಳನ್ನು ತೆರವುಗೊಳಿಸದೇ ಇರುವುದೇ ಇಂದಿನ ಪರಿಸ್ಥಿತಿಗೆ ಕಾರಣವೆಂದು ತಜ್ಞರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ : ಸಚಿವ ಈಶ್ವರ ಖಂಡ್ರೆ

ಸ್ಯಾಂಕಿ ರಸ್ತೆ (ಗಾಲ್ಫ್ ಕ್ಲಬ್ ಹತ್ತಿರ), ಕಾವೇರಿ ಥಿಯೇಟರ್ (ಭಾಷ್ಯಂ ವೃತ್ತ ಮತ್ತು ಬಳ್ಳಾರಿ ರಸ್ತೆ ನಡುವೆ), ಮತ್ತು ಕೆ ಆರ್ ವೃತ್ತ (ನೃಪತುಂಗ ರಸ್ತೆ) ಈ ಮೂರು ‘U’ ಆಕಾರದ ಅಂಡರ್‌ಪಾಸ್‌ಗಳಲ್ಲಿ ಮೇಲ್ಛಾವಣಿ ಹಾಕಬೇಕೆಂದು ವರದಿ ಸೂಚಿಸಿದೆ.

ಕೆ ಆರ್ ವೃತ್ತ, ನೆಹರು ವೃತ್ತ ಮತ್ತು ಶಿವಾನಂದ ವೃತ್ತ ಸೇರಿದಂತೆ ನಗರದ ಕೇಂದ್ರ ಭಾಗದಲ್ಲಿರುವ ಅಂಡರ್‌ಪಾಸ್‌ಗಳನ್ನು ಮುಚ್ಚಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ತಿಳಿಸಿದ್ದಾರೆ.

“ಹೊರ ವರ್ತುಲ ರಸ್ತೆಯಲ್ಲಿರುವ ಹೆಬ್ಬಾಳದಿಂದ ನಾಗವಾರ ಮತ್ತು ಕಾಡುಬೀಸನಹಳ್ಳಿಯಿಂದ ಕೆಆರ್ ಪುರಂ ಮಾರ್ಗದ ಅಂಡರ್‌ಪಾಸ್‌ಗಳಲ್ಲಿಯೂ ನೀರು ತುಂಬಿದ್ದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ರಸ್ತೆಯುದ್ದಕ್ಕೂ ಇರುವ ಮಳೆನೀರು ಚರಂಡಿಗಳಲ್ಲಿ ಪ್ಲಾಸ್ಟಿಕ್, ಹೂಳು, ಮರಳು ಮತ್ತು ಇತರ ಕಸ ತುಂಬಿರುವುದು ರಸ್ತೆ ಜಲಾವೃತವಾಗಲು ಕಾರಣವಾಗಿದೆ. ಈ ಪ್ರದೇಶಗಳಲ್ಲಿ ಸಾಕಷ್ಟು ನಿರ್ಮಾಣ ಚಟುವಟಿಕೆಗಳು ನಡೆಯುತ್ತಿವೆ. ಅಲ್ಲಿನ ತ್ಯಾಜ್ಯಗಳು ಚರಂಡಿಗಳನ್ನು ಸೇರುತ್ತಿವೆ” ಎಂದು ಅನುಚೇತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...