ಫ್ಲೋರ್‌ ಕ್ಲೀನರ್‌ ಕುಡಿದು ಅನ್ನನಾಳ ಕಳೆದುಕೊಂಡಿದ್ದ 6 ವರ್ಷದ ಮಗು; ಯಶಸ್ವಿ ಮರುನಿರ್ಮಾಣ

Date:

  • ಯಶಸ್ವಿಯಾಗಿ ಅನ್ನನಾಳ ಮರುನಿರ್ಮಾಣ ಮಾಡಿದ ಫೋರ್ಟೀಸ್ ಆಸ್ಪತ್ರೆಯ ವೈದ್ಯರು
  • ಕಿರಿದಾಗಿದ್ದ ಅನ್ನನಾಳ ತೆರವುಗೊಳಿಸಿ, ನೇರವಾಗಿ ಮಗುವಿನ ಸಣ್ಣ ಕರುಳಿಗೆ ಟ್ಯೂಬ್‌ ಅಳವಡಿಕೆ

ಆರು ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಫ್ಲೋರ್‌ ಕ್ಲೀನರ್‌ ಲಿಕ್ವಿಡ್‌ ಕುಡಿದ ಪರಿಣಾಮ ಮಗುವಿನ ಅನ್ನನಾಳ ಸಂಪೂರ್ಣ ಸುಟ್ಟುಹೋಗಿತ್ತು. ಇದೀಗ ಫೋರ್ಟೀಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಅನ್ನನಾಳ ಮರುನಿರ್ಮಾಣ ಮಾಡಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಚೀಫ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಶ್ ಜೋಶಿ ಅವರ ತಂಡ ಮಗುವಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ.

ಈ ಬಗ್ಗೆ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಚೀಫ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಶ್ ಜೋಶಿ, “ಆರು ವರ್ಷದ ಪುಟ್ಟ ಬಾಲಕಿ ಮನೆಯಲ್ಲಿ ಆಟವಾಡುವಾಗ ಪಕ್ಕದಲ್ಲಿಯೇ ಇದ್ದ ಫ್ಲೋರ್‌ ಕ್ಲೀನರ್‌ ಲಿಕ್ವಿಡ್ ಅನ್ನು ಆಕಸ್ಮಿಕವಾಗಿ ಕುಡಿದಿದೆ. ಇದರಿಂದ ಮಗುವಿನ ಅನ್ನನಾಳ ಹಾಗೂ ಸಣ್ಣ ಕರುಳಿನ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಹೋಗಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೋಷಕರು ಬಾಲಕಿಯನ್ನು ಕೂಡಲೇ ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಮಗುವಿನ ಅನ್ನನಾಳ ಹಾಗೂ ಸಣ್ಣ ಕರುಳು ಸಂಪೂರ್ಣ ಸುಟ್ಟ ಕಾರಣ ಹಾನಿಗೊಳಗಾದ ಆಹಾರ ಪೈಪ್‌ನ ಒಂದು ಭಾಗವನ್ನು ತೆಗೆದು, ಟ್ಯೂಬ್ ಮುಖಾಂತರ ಮಗುವಿನ ಸಣ್ಣ ಕರುಳಿಗೆ ನೇರವಾಗಿ ಆಹಾರ ನೀಡಲು ವ್ಯವಸ್ಥೆ ಮಾಡಲಾಗಿತ್ತು” ಎಂದರು.

“ಕಳೆದ ಎರಡು ವರ್ಷಗಳಿಂದ ದೇಹದ ಹೊರಭಾಗದಿಂದ ಹೆಚ್ಚುವರಿಯಾಗಿ ಫೀಡಿಂಗ್‌ ಟ್ಯೂಬ್‌ ಅಳವಡಿಸಿದ್ದು, ಬಾಲಕಿ ಅದರ ಸಹಾಯದಿಂದಲೇ ಆಹಾರ ಸೇವನೆ ಮಾಡಬೇಕಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇದೂ ಸಹ ಮಗುವಿಗೆ ಕಷ್ಟವಾಗುತ್ತಿತ್ತು. ಹೀಗಾಗಿ, ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಓಸೊಫಾಗೊ-ಗ್ಯಾಸ್ಟ್ರೋ-ಡ್ಯುಯೊಡೆನೊಸ್ಕೋಪಿಗೆ ಒಳಪಡಿಸಿ, ಮೇಲ್ಭಾಗದ ಜೀರ್ಣಾಂಗ ವ್ಯವಸ್ಥೆಯನ್ನು ಮೈಕ್ರೋ ಕ್ಯಾಮರಾದ ಮೂಲಕ ಪರೀಕ್ಷಿಸಲಾಯಿತು” ಎಂದು ಹೇಳಿದರು.

“ಮಗುವಿನ ಅನ್ನನಾಳ ಹಾಗೂ ಸಣ್ಣಕರುಳು ಸುಟ್ಟ ಪರಿಣಾಮ ತೀರ ಕಿರಿದಾಗಿತ್ತು. ಹೀಗಾಗಿ, ಅನ್ನನಾಳದ ಪುನರ್‌ ನಿರ್ಮಾಣಕ್ಕೆ ಮಕ್ಕಳ ತಜ್ಞರು ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್‌ಗಳು, ಅರವಳಿಕೆ ತಜ್ಞರ ಸಹಕಾರದೊಂದಿಗೆ ಮಗುವಿನ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು. ಈಗಾಗಲೇ ಸಂಪೂರ್ಣವಾಗಿ ಸುಟ್ಟು, ಕಿರಿದಾಗಿದ್ದ ಅನ್ನನಾಳವನ್ನು ತೆರವುಗೊಳಿಸಿ, ಟ್ಯೂಬ್‌ನನ್ನು ನೇರವಾಗಿ ಮಗುವಿನ ಸಣ್ಣ ಕರುಳಿಗೆ ಅಳವಡಿಸಲಾಗಿದೆ. ಈ ಮೂಲಕ ಅನ್ನನಾಳವನ್ನು ಮರುನಿರ್ಮಾಣ ಮಾಡಲಾಗಿದೆ. ಇದರಿಂದ ಇದೀಗ ಮಗುವು ಯಾವುದೇ ಟ್ಯೂಬ್‌ ಇಲ್ಲದೆಯೂ ಸಹ ಆಹಾರವನ್ನು ಬಾಯಿಯ ಮೂಲಕ ಸೇವಿಸಬಹುದಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನಿಮ್ಮ ಮೊಬೈಲ್ ಸಂಖ್ಯೆಗಳನ್ನು ಸವಾರರೊಂದಿಗೆ ಹಂಚಿಕೊಳ್ಳಬೇಡಿ ಎಂದ ರ‍್ಯಾಪಿಡೋ

ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಬಿಸಿನೆಸ್ ಹೆಡ್ ಅಕ್ಷಯ್ ಒಲೇಟಿ ಮಾತನಾಡಿ, “ಆರು ವರ್ಷದ ಬಾಲಕಿಗೆ ಮರುಜೀವ ನೀಡುವಲ್ಲಿ ನಮ್ಮ ವೈದ್ಯರ ಶ್ರಮ ಶ್ಲಾಘನೀಯ. ನಮ್ಮ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ವೈದ್ಯಕೀಯ ಉಪಕರಣಗಳಿಂದ ಯಾವುದೇ ಸವಾಲಿನ ಪ್ರಕರಣಗಳಾದರೂ ಅದನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸಲು ಸಾಧ್ಯವಾಗುತ್ತಿದೆ. ಯಾವ ವಯಸ್ಸಿನ ಪ್ರಕರಣಗಳೇ ಆದರೂ ಅದನ್ನು ನಿಭಾಯಿಸಲು ಸಮರ್ಥವಾಗಿದ್ದೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...