ರಸ್ತೆ ಬಗ್ಗೆ ಟ್ವೀಟ್ ಬೇಡ, ಸಿಎಸ್‌ಆರ್‌ ಕೆಲಸ ಮಾಡಿ; ಕಿರಣ್ ಮಜುಂದಾರ್‌ಗೆ ಸಚಿವ ಎಂ ಬಿ ಪಾಟೀಲ್ ತಿರುಗೇಟು

Date:

ಬೆಂಗಳೂರಿನ ಕಳಪೆ ರಸ್ತೆಗಳ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರಿಗೆ ಕರ್ನಾಟಕದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. “ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ಕೆಲಸ ಮಾಡಿ” ಎಂದು ಅವರಿಗೆ ಸಲಹೆ ನೀಡಿದ್ದಾರೆ.

ಕಿರಣ್ ಮಜುಂದಾರ್ ಅವರ ಎಕ್ಸ್ ಪೋಸ್ಟ್ ಕಳಪೆ ರಸ್ತೆಗಳು ಮತ್ತು ಕಸದ ಸಮಸ್ಯೆಯ ಬಗ್ಗೆ ಗಮನ ಸೆಳೆದಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ ಬಿ ಪಾಟೀಲ್, “ಕಿರಣ್ ಮಜುಂದಾರ್ ಶಾ ಅವರಿಗೆ ಸರ್ಕಾರವು 1,000 ಕೋಟಿ ರೂ. ವೆಚ್ಚದಲ್ಲಿ ಗುಂಡಿಗಳನ್ನು ಮುಚ್ಚುತ್ತಿರುವುದು ಗೊತ್ತಿದೆ. ಆದರೂ ಈ ಟ್ವೀಟ್ ಅಗತ್ಯವಿರಲಿಲ್ಲ. ಹಲವು ಬಾರಿ ಇಂತಹ ಮಾತುಗಳನ್ನು ಆಡುವ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ಕಿರಣ್ ಮಜುಂದಾರ್ ಶಾ ಅವರು ಗಾಬರಿಯಾಗಬೇಕಿಲ್ಲ. ಅವರು ತಮ್ಮ ಪ್ರದೇಶದಲ್ಲಿ ಸಿಎಸ್‌ಆರ್ ಅಡಿಯಲ್ಲಿ ಒಂದಿಷ್ಟು ಕೆಲಸ ತೆಗೆದುಕೊಳ್ಳಲಿ” ಎಂದು ಸಚಿವರು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಕ್ಕೆ ಗುಂಡಿಗಳ ಸಮಸ್ಯೆಯು ಹಿಂದಿನ ಬಿಜೆಪಿ ಸರ್ಕಾರದಿಂದ ಬಳುವಳಿಯಾಗಿದೆ. ನಾವು ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದೇವೆ, ಆದರೆ ಇದಕ್ಕೆ ಸಮಯ ಬೇಕು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

ಬೆಂಗಳೂರನ್ನು “ವಿಶ್ವಮಟ್ಟದ ಬೆಳೆಯುತ್ತಿರುವ ನಗರ” ಎಂದು ಬಣ್ಣಿಸಿದ ಪಾಟೀಲ್, ಲಂಡನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಸಂಚಾರಿ ಸಮಸ್ಯೆಗಳನ್ನು ಉದಾಹರಣೆಯಾಗಿ ನೀಡಿದರು. “ಲಂಡನ್‌ನಲ್ಲಿ ಎರಡು ಮೈಲಿ ದೂರವನ್ನು ಕ್ರಮಿಸಲು 2.5 ಗಂಟೆಗಳು ಬೇಕಾಗುತ್ತೆ” ಎಂದು ತಿಳಿಸಿದರು.

ಬೆಂಗಳೂರಿನ ಮೇಲಿನ ಒತ್ತಡವು ಇತರ ರಾಜ್ಯಗಳಿಂದ ಬಂದವರಿಂದ ಹೆಚ್ಚುತ್ತಿದೆ. ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶದಿಂದ ಜನ ಬರುತ್ತಿದ್ದಾರೆ, ವಿಶೇಷವಾಗಿ ಐಟಿ ಕ್ಷೇತ್ರದಲ್ಲಿ. ಅವರು ಫ್ಲ್ಯಾಟ್, ಕಾರು ಖರೀದಿಸುತ್ತಾರೆ. ಇದರಿಂದ ಬೆಂಗಳೂರಿನ ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಆದರೆ, ನಾವು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿಲ್ಲ. ಕರ್ನಾಟಕದಿಂದ ಕೇವಲ ಶೇ. 5 ರಷ್ಟು ಜನರು ಗುಜರಾತ್, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿಗೆ ಹೋಗುತ್ತಾರೆ ಎಂದು ಅವರು ಹೇಳಿದರು.

ಕಳಪೆ ಮೂಲಸೌಕರ್ಯದಿಂದ ಯಾವ ಕಂಪನಿಯೂ ಬೆಂಗಳೂರನ್ನು ತೊರೆಯುವುದಿಲ್ಲ ಎಂಬ ವಿಶ್ವಾಸವನ್ನು ಪಾಟೀಲ್ ವ್ಯಕ್ತಪಡಿಸಿದರು. “ಯಾರು ತೊರೆದಿದ್ದಾರೆ? ಇತರ ರಾಜ್ಯಗಳು ಹೂಡಿಕೆದಾರರನ್ನು ಕರೆಯುತ್ತಿವೆ. ಆದರೆ ಬೆಂಗಳೂರಿನಲ್ಲಿ ಇಲ್ಲಿ ಪ್ರತಿಭೆ, ಉತ್ತಮ ಸೌಕರ್ಯ ಎಲ್ಲವೂ ಇದೆ. ಯಾರೂ ತೊರೆಯುವ ಪ್ರಶ್ನೆಯೇ ಇಲ್ಲ. ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಬೆಂಗಳೂರನ್ನು ವಿಶ್ವಮಟ್ಟದ ನಗರವನ್ನಾಗಿ ಮಾಡಿತು ಎಂದು ಅವರು ಸ್ಮರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...