ರೋಗಿಗಳ ಜೀವದೊಂದಿಗೆ ಚೆಲ್ಲಾಟ; 1,434ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ದೂರು ದಾಖಲು

Date:

ರಾಜ್ಯದಲ್ಲಿ ಮತ್ತೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಎಂಬಿಬಿಎಸ್‌ ಪದವಿ ಮುಗಿಸದೇ, ಸ್ಟೆತಸ್ಕೋಪ್‌‌ ಕೊರಳಿಗೆ ಹಾಕಿಕೊಂಡು ಕ್ಲಿನಿಕ್‌ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ, ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ 1,434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲು ಮಾಡಿದೆ.

ವ್ಯಕ್ತಿಯೊಬ್ಬರ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಆದರೆ, ಕೆಲವರು ಹಣದ ಆಸೆ ಸೇರಿದಂತೆ ನಾನಾ ಕಾರಣಗಳಿಂದ ನಕಲಿ ವೈದ್ಯರ ವೇಷ ಧರಿಸಿ ಜನರ ಜೀವದ ಜತೆಗೆ ಆಟವಾಡುತ್ತಿದ್ದಾರೆ. ವಿದ್ಯೆ ಕಲಿಯದೇ ಸರ್ಜರಿ ಮಾಡಲು ಪ್ರಯತ್ನಿಸುವ ಈ ನಕಲಿ ವೈದ್ಯರು ಹಲವರ ಸಾವಿಗೆ ಕಾರಣವಾಗಿದ್ದಾರೆ. ಇಂತಹ ನಕಲಿ ವೈದ್ಯರ ಪ್ರಕರಣಗಳು ಈ ಹಿಂದೆಯೂ ರಾಜ್ಯದಲ್ಲಿ ಪತ್ತೆಯಾಗಿದ್ದವು. ಇದೀಗ, ಮತ್ತೆ ರಾಜ್ಯದಲ್ಲಿ ದಾಪುಗಾಲಿಟ್ಟಿರುವ ಈ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ.

ಇನ್ನು ಕೊರೊನಾ ಸಮಯದಲ್ಲಿ ಕೆಲವರು ಕೆಲಸ ಇಲ್ಲದೇ, ಜೀವನ ನಡೆಸಲು ಅನ್ಯ ಮಾರ್ಗಗಳನ್ನು ಹಿಡಿದಿದ್ದಾರೆ. ಈ ಪೈಕಿ ಎಂಬಿಬಿಎಸ್‌ ಪದವಿ ಮುಗಿಸದೇ ಇದ್ದರೂ, ಹಲವು ಜನ ಹಳ್ಳಿಗಳಲ್ಲಿ, ನಗರ ಪ್ರದೇಶಗಳಲ್ಲಿ ಹಾಗೂ ಗಡಿ ಭಾಗದಲ್ಲಿ ಹೆಚ್ಚಾಗಿ ಕ್ಲಿನಿಕ್‌ ತೆರೆದು ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 1,500ಕ್ಕೂ ಹೆಚ್ಚು ನಕಲಿ ವೈದ್ಯರಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ್ದು, ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ಸದ್ಯ 1,434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಪ್ರಕರಣ ದಾಖಲಿಸಿದೆ.

ಹೊರ ರಾಜ್ಯಗಳಿಂದ ಬರುತ್ತಿರುವ ನಕಲಿ ವೈದ್ಯರು ಹೊಸೂರು, ಆನೇಕಲ್ ಹಾಗೂ ಜಿಲ್ಲೆಗಳ ಗಡಿ ಭಾಗಗಳಲ್ಲಿ ಮೊಬೈಲ್ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿ ಜನರ ಪ್ರಾಣಕ್ಕೆ ಅಪಾಯ ತರುತ್ತಿದ್ದಾರೆ.

ವೈದ್ಯರ ಪ್ರಮಾಣ ಪತ್ರ ಹಾಗೂ ಆಸ್ಪತ್ರೆಗಳ ಪ್ರಮಾಣಿಕೃತ ಪತ್ರ ನೋಡದೆ ಚಿಕಿತ್ಸೆ ಪಡೆದು ಸಮಸ್ಯೆಗೆ ಒಳಗಾಗಬೇಡಿ. ಸಾರ್ವಜನಿಕರು ನೋಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 300ಕ್ಕೂ ಹೆಚ್ಚು ನಕಲಿ ವೈದ್ಯರು ಇರುವ ಬಗ್ಗೆ ಮಾಹಿತಿ ಇದ್ದು, ಡಿಸೆಂಬರ್ ಕೊನೆಯ ವೇಳೆಗೆ ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗೆ ಬೀಗ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ದೇಶದಲ್ಲೇ ಅಗ್ರಸ್ಥಾನ ಪಡೆದ ಬೆಂಗಳೂರು: ಕಳೆದ ವರ್ಷ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ದಾಖಲು

ಇಷ್ಟು ದೊಡ್ಡ ಸಂಖ್ಯೆಯಲ್ಲಿ ನಕಲಿ ವೈದ್ಯರು ಹುಟ್ಟಿಕೊಳ್ಳಲು ಇಲಾಖೆಯ ಕೆಲ ಹಿರಿಯ ಅಧಿಕಾರಿಗಳು ಸಹಕರಿಸಿದ್ದಾರೆ ಎಂಬ ಆರೋಪವಿದೆ. ಅಲೋಪಥಿ, ನ್ಯಾಚುರೋಪಥಿ, ಆಯುರ್ವೆದ ಹಾಗೂ ಹೋಮಿಯೋಪಥಿ ಹೆಸರಿನಲ್ಲಿ ದಂಧೆ ನಡೆಸುತ್ತಿರುವ ನಕಲಿ ವೈದ್ಯರ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

ಬೀದರ್ನಲ್ಲಿ ಅತಿ ಹೆಚ್ಚು 423 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದು, ಕೋಲಾರನಲ್ಲಿ 179 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದಾರೆ. ಬೆಳಗಾವಿಯಲ್ಲಿ 170, ಕಲಬುರಗಿಯಲ್ಲಿ 82 ನಕಲಿ ವೈದ್ಯರು ಸಿಕ್ಕಿಬಿದ್ದಿದ್ದಾರೆ. ಇಂತಹ ನಕಲಿ ವೈದ್ಯರ ಕ್ಲಿನಿಕ್ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾಕಷ್ಟು ರೋಗಿಗಳು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...