ತಂತ್ರಜ್ಞಾನ ಬೆಂಕಿಯಂತೆ, ಅಡುಗೆಯೂ ಆಗುತ್ತೆ, ಮನೆಯೂ ಸುಡುತ್ತೆ: ಸಿಎಂ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್

Date:

ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ(ಎಐ) ಕಾಲಘಟ್ಟದಲ್ಲಿ ಮಾಧ್ಯಮಗಳು” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿಗೆ ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಅದು ಫೇಕ್ ಎಂದು ಗೊತ್ತಾಗುವುದರೊಳಗೆ ಅದನ್ನು ಲಕ್ಷಾಂತರ ಮಂದಿ ಅಸಲಿ ಎಂದೇ ನಂಬಿ ಬಿಟ್ಟಿದ್ದರು. ರಶ್ಮಿಕಾ ಅವರ ಬದಲಿಗೆ ಯಾವುದೋ ಧಾರ್ಮಿಕ ನಾಯಕರ, ರಾಜಕೀಯ ನಾಯಕರ ಡೀಪ್ ಫೇಕ್ ವಿಡಿಯೊ ಹಾಕಿ ನಕಲಿ ಸಂದೇಶ ಕೊಟ್ಟಿದ್ದರೆ ಅದು ನಕಲಿ ಎಂದು ಗೊತ್ತಾಗುವುದರೊಳಗೆ ಭಾರೀ ಅನಾಹುತಗಳನ್ನು ಮಾಡಿ ಬಿಡುತ್ತಿತ್ತು. ಹೀಗಾಗಿ ಯಾವುದೇ ತಂತ್ರಜ್ಞಾನವಿರಲಿ, ಅದನ್ನು ಯಾರು ಬಳಸುತ್ತಾರೆ, ಹೇಗೆ ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

321 2

ಪತ್ರಿಕೋದ್ಯಮ ತನ್ನ ವೇಗದಲ್ಲಿ ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ವ್ಯತ್ಯಾಸವನ್ನೇ ಅಳಿಸಿ ಬಿಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗ ಪತ್ರಿಕೋದ್ಯಮದಲ್ಲಿ ಊಹಾಪೋಹದ ಪತ್ರಿಕೋದ್ಯಮ ಎನ್ನುವ ಅನಾಹುತಕಾರಿ ಬೆಳವಣಿಗೆ ಶುರುವಾಗಿದೆ. ಈ ಊಹೆಗೆ ಮಿತಿಯೇ ಇಲ್ಲ. ಕಣ್ಣ ಮುಂದಿರುವ ಸತ್ಯವನ್ನು ತನಗೆ ಬೇಕಾದಂತೆ ಊಹಾ ಪತ್ರಿಕೋದ್ಯಮ ಚಿತ್ರಿಸುತ್ತಿದೆ ಎಂದು ಪ್ರಭಾಕರ್ ಕಳವಳ ವ್ಯಕ್ತಪಡಿಸಿದರು.

ನಿತ್ಯದ ಅಗತ್ಯ ವಸ್ತು ಸಂಗತಿಗಳಲ್ಲಿ ಪತ್ರಿಕೆಗಳೂ ಸೇರಿವೆ. ಪತ್ರಿಕೆಗಳ ವಿಶ್ವಾಸಾರ್ಹತೆ ಉಳಿದ ಮಾಧ್ಯಮಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಇತರೆ ಯಾವುದೇ ಮೂಲದಿಂದ ಸುದ್ದಿ ಬಂದರೂ ಅದರ ಸತ್ಯಾಸತ್ಯತೆಗೆ ಜನ ಪತ್ರಿಕೆಗಳ ಮೇಲೆ ಅವಲಂಬಿತರಾಗಿದ್ದಾರೆ. ಸಮಾಜ ಮತ್ತು ಸರ್ಕಾರದ ನಡುವೆ ಪತ್ರಿಕೆಗಳು ಸೇತುವೆ ಇದ್ದಂತೆ ಎಂದು ಅಭಿಪ್ರಾಯಪಟ್ಟರು.

ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ವಿಜ್ಞಾನ ಬರಹಗಾರರಾದ ನಾಗೇಶ್ ಹೆಗ್ಡೆ, ತಂತ್ರಜ್ಞಾನ ವಿಶ್ಲೇಷಕ ಶ್ರೀನಿಧಿ ಮತ್ತು ಕಾವ್ಯಶ್ರೀ, ಮಾಧ್ಯಮ‌ ಅಕಾಡೆಮಿ ಕಾರ್ಯದರ್ಶಿ ರೂಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...