ಅನಧಿಕೃತ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಸೂಚನೆ

Date:

ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು ಆದೇಶಿಸಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದು, “ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಕರ್ನಾಟಕ ಶಿಕ್ಷಣ ಕಾಯಿದೆ-1983 ಸೆಕ್ಷನ್-30, 31ರ ಪ್ರಕಾರ ಇಲಾಖಾ ವತಿಯಿಂದ ಯಾವುದೇ ನೋಂದಣಿ ಪಡೆಯದೆ ಅನಧಿಕೃತವಾಗಿ ಶಾಲೆ ನಡೆಸುವುದು ಕಾನೂನು ಬಾಹಿರವಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಜಿಲ್ಲೆಯಲ್ಲಿ ನೋಂದಣಿ ಪಡೆಯದೆ ಅನಧಿಕೃತವಾಗಿ ಶಾಲೆ ನಡೆಸುತ್ತಿರುವುದು, ನೋಂದಣಿ ಇಲ್ಲದೆ ಉನ್ನತೀಕರಿಸಿದ ತರಗತಿ ನಡೆಸುತ್ತಿರುವುದು, ಅನಧಿಕೃತ ಪಠ್ಯಕ್ರಮ ಮತ್ತು ಅನಧಿಕೃತ ಪಠ್ಯಪುಸ್ತಕ ಬೋಧಿಸುತ್ತಿರುವುದು ಹಾಗೂ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜಿಸಿದ ನಂತರವೂ ರಾಜ್ಯ ಪಠ್ಯಕ್ರಮದ ಶಾಲೆ ನಡೆಸುತ್ತಿರುವುದು ಅತ್ಯಂತ ಆಕ್ಷೇಪಾರ್ಹ ಮತ್ತು ನಿಯಮಬಾಹಿರವಾಗಿರುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆ ಬಾಡಿಗೆ ಹಣ ಕೇಳಿದಕ್ಕೆ ಚಾಕುವಿನಿಂದ ಹಲ್ಲೆ

“ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ನೋಂದಣಿ ಪಡೆಯದ ನಡೆಯುತ್ತಿರುವ ಶಾಲೆಗಳು ಯಾವುದು ಇರುವುದಿಲ್ಲವೆಂದು ದೃಢೀಕರಣ ನೀಡಬೇಕು. 2023-24ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಾರಂಭವಾಗುವ ಮುನ್ನ ತಕ್ಷಣ ನಿಯಮಾನುಸಾರ ಕ್ರಮವಹಿಸಬೇಕು. 45 ದಿನಗಳ ಒಳಗಾಗಿ ಮಕ್ಕಳ ದಾಖಲಾತಿಗಳನ್ನು ನೀಡಬೇಕು. ಈ ಕ್ರಮ ಮುಗಿದ ನಂತರದಲ್ಲಿ ಶಾಲೆ ಮುಂದುವರೆಸಿದ್ದಲ್ಲಿ ಅಂತಹ ಶಾಲೆಗಳಿಗೆ ಪೋಷಕರು ಮಕ್ಕಳನ್ನು ದಾಖಲಿಸದಂತೆ ಸಾರ್ವಜನಿಕವಾಗಿ ಪ್ರಕಟಣೆ ಪ್ರಕಟಿಸಬೇಕು” ಎಂದು ತಿಳಿಸಿದ್ದಾರೆ.

ಸರ್ಕಾರ

“ಸಾರ್ವಜನಿಕರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪಡೆಯದ ಅನಧಿಕೃತವಾಗಿ ಶಾಲೆಗಳು ನಡೆಯುತ್ತಿವೆ ಎಂದು ದೂರು ಬಂದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದುʼ’ ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...