‘ಇಂದಿರಾ ಕ್ಯಾಂಟೀನ್’ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಲು ಸೂಚನೆ

Date:

  • ಆಯಾ ವಲಯ ಆಯುಕ್ತರಿಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಹೊಣೆ
  • ಕ್ಯಾಂಟೀನ್‌ಗಳ ನಿರ್ವಹಣೆಗೆ ಹೊಸ ಪ್ರಸ್ತಾವನೆ ಸಿದ್ದಪಡಿಸಲು ಸೂಚನೆ 

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಇಂದಿರಾ ಕ್ಯಾಂಟೀನ್‌’ ನಾಲ್ಕೈದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಸ್ತುತ ನಗರದಲ್ಲಿರುವ ಎಲ್ಲ ಕ್ಯಾಂಟೀನ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಗುರುವಾರದಿಂದ ಎಲ್ಲ ವಲಯ ಆಯುಕ್ತರು, ವಲಯದ ಜಂಟಿ ಆಯುಕ್ತರು, ಅಭಿಯಂತರರು, ಆರೋಗ್ಯಾಧಿಕಾರಿಗಳು ವಲಯವಾರು ವರದಿಯನ್ನು ನೀಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.

ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಸಂಬಂಧಿಸಿದಂತೆ ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಎಲ್ಲ ವಲಯ ಆಯುಕ್ತರು, ಜಂಟಿ ಆಯುಕ್ತರು, ಆರೋಗ್ಯ ಅಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಅಂದಾಜು 175 ಇಂದಿರಾ ಕ್ಯಾಂಟೀನ್ ಇದ್ದು, ಆದರಲ್ಲಿ 163 ಇಂದಿರಾ ಕ್ಯಾಂಟೀನ್‌ಗಳು ಸದ್ಯ ಚಾಲ್ತಿಯಲ್ಲಿವೆ. ಉಳಿದ 12 ಕ್ಯಾಂಟೀನ್ ಗಳು (6 ಆರ್ ಆರ್ ನಗರ ಹಾಗೂ 3 ದಕ್ಷಿಣ ವಲಯ) ಚಾಲ್ತಿಯಲ್ಲಿಲ್ಲ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಲಯವಾರು ಇಂದಿರಾ ಕ್ಯಾಂಟೀನ್ ನಿರ್ವಹಣೆಯನ್ನು ಸಂಬಂಧಪಟ್ಟ ಆಯಾ ವಲಯ ಆಯುಕ್ತರು ಅಥವಾ ಜಂಟಿ ಆಯುಕ್ತರುಗಳಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗುವುದು” ಎಂದು ತಿಳಿಸಿದರು.

“ಎಲ್ಲ ವಲಯ ಆಯುಕ್ತರು ವಲಯವಾರು ತಂಡಗಳನ್ನು ರಚಿಸಿ  ಘನತ್ಯಾಜ್ಯ ವಿಭಾಗ/ ಪೌರಕಾರ್ಮಿಕರು/ ಇತರೆ ಸಿಬ್ಬಂದಿಗಳ ಮುಖಾಂತರ ಇಂದಿರಾ ಕ್ಯಾಂಟೀನ್ ಸ್ವಚ್ಛತಾ ಕಾರ್ಯ ನಡೆಸಬೇಕು” ಎಂದು ಹೇಳಿದರು.

“ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಗುಣಮಟ್ಟ ಹಾಗೂ ರುಚಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಇಂದಿರಾ ಕ್ಯಾಂಟೀನ್, ಬೇಸ್ ಕ್ಯಾಂಟೀನ್ ಸ್ಥಾಪನೆಗೆ ಹಾಗೂ ಆಹಾರ ಪೂರೈಕೆಗೆ ನಾಳೆಯೇ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಹೊಸ ಪ್ರಸ್ತಾವನೆಯನ್ನು ಸಿದ್ದಪಡಿಸಲು ವಿಶೇಷ ಆಯುಕ್ತ(ಆರೋಗ್ಯ) ತ್ರಿಲೋಕ್ ಚಂದ್ರ ಅವರಿಗೆ ಸೂಚಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೂನ್‌ನಿಂದ್‌ ಉಬರ್ ಇ ವಿ ಕ್ಯಾಬ್ ಸೇವೆ

“ಹೆಚ್ಚುವರಿಯಾಗಿ ವಾರ್‍ಡುಗಳ ಅನುಕೂಲಕ್ಕೆ ತಕ್ಕಂತೆ ಇಂದಿರಾ ಕ್ಯಾಂಟೀನ್ ಸ್ಥಾಪಿಸಲು ಹಾಗೂ ಮೊಬೈಲ್ ಕ್ಯಾಂಟೀನ್ ಮರು ಚಾಲನೆಗೆ ವರದಿಯನ್ನು ಎಲ್ಲ ವಲಯ ಆಯುಕ್ತರು ನೀಡಬೇಕು” ಎಂದರು.

ಈ ವರ್ಚುವಲ್ ಸಭೆಯಲ್ಲಿ ಬಿಬಿಎಂಪಿ ಎಲ್ಲ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಆರೋಗ್ಯ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...