ಬಿಬಿಎಂಪಿ | ಮತದಾರರ ಪಟ್ಟಿ ಪರಿಷ್ಕರಣೆಗೆ ಕ್ರಮ: ತುಷಾರ್ ಗಿರಿನಾಥ್

Date:

  • ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜುಲೈ 21ರಿಂದ ಆರಂಭ
  • ಆ. 28 ರಿಂದ ಸೆ. 29 ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳೆ ಯಾವುದೇ ನ್ಯೂನತೆಗಳಾಗದಂತೆ ಸರಿಯಾದ ಮಾದರಿಯಲ್ಲಿ ಪರಿಷ್ಕರಣೆ ಕಾರ್ಯವಾಗಬೇಕು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆಯು ಜುಲೈ 21ರಿಂದ ಆಗಸ್ಟ್‌ 21 ರವರೆಗೆ ನಡೆಯಲಿದೆ” ಎಂದರು.

“ಜುಲೈ 21ರಿಂದ ಒಂದು ತಿಂಗಳ ಕಾಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಬಿಎಲ್‌ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಈ ವೇಳೆ, ಬೂತ್ ಮಟ್ಟದ ಏಜೆಂಟ್‌ಗಳು ಸ್ಥಳದಲ್ಲಿರಬೇಕಿದ್ದು, ರಾಜಕೀಯ ಪಕ್ಷದ ಅಧಿಕಾರಿಗಳು ಎಲ್ಲ ಕಡೆ ಬೂತ್ ಮಟ್ಟದ ಏಜೆಂಟ್‌ಗಳನ್ನು ನಿಯೋಜನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಎಲ್ಲೆಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕಡಿಮೆಯಿದ್ದಾರೆ ಅಲ್ಲಿ ಕೂಡಲೆ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗಣ್ಯರಿಗೆ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ: ಬ್ರಿಜೇಶ್ ಕಾಳಪ್ಪ

“ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸವನ್ನು ಎಲ್ಲ ಬಿಎಲ್‌ಒಗಳು ಯಾವುದೇ ಲೋಪದೋಷಗಳಿಲ್ಲದಂತೆ ಸರಿಯಾಗಿ ನಿರ್ವಹಿಸಬೇಕು. ಮತದಾರರ ಪಟ್ಟಿಯಲ್ಲಿ ಮರಣ ಹೊಂದಿರುವ ಹಾಗೂ ಬೇರೆಡೆ ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ-2024ರಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು(ನಮೂನೆ 6), ತಿದ್ದುಪಡಿಗಾಗಿ (ನಮೂನೆ 8) ಅರ್ಜಿ ಸಲ್ಲಿಸಬೇಕಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಆಗಸ್ಟ್‌ 28 ರಿಂದ ಸೆಪ್ಟೆಂಬರ್ 29 ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ ನಡೆಯಲಿದ್ದು, ಮತಗಟ್ಟೆಗಳ ಸ್ಥಳಾಂತರ/ದುರಸ್ಥಿಯಲ್ಲಿರುವ ಮತಗಟ್ಟೆಗಳ ಪ್ರಸ್ತಾವನೆ ಸಲ್ಲಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷದ ಪ್ರತಿನಿಧಿಗಳು, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...