ಜು.25 ರಂದು ಬೆಂಗಳೂರು ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ “ದಿ ಗೌರಿ ಫೈಲ್ಸ್” ಸಂವಾದ ಕಾರ್ಯಕ್ರಮ

Date:

ಬೆಂಗಳೂರಿನ ದೊಮ್ಮಲೂರಿನಲ್ಲಿರುವ ‘ಬೆಂಗಳೂರು ಇಂಟರ್‌ನ್ಯಾಷನಲ್‌ ಸೆಂಟರ್‌’ ಕೇಂದ್ರದಲ್ಲಿ ಜುಲೈ 25, 2025ರಂದು ಸಂಜೆ 6.30 ರಿಂದ 8.00 ಗಂಟೆಯವರೆಗೆ “ದಿ ಗೌರಿ ಫೈಲ್ಸ್: ಒಬ್ಬ ಪತ್ರಕರ್ತೆಯ ಹತ್ಯೆ ಮತ್ತು ಅದರ ಪರಿಣಾಮಗಳು” ಎಂಬ ಸಂವಾದ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಮತ್ತು ಲೇಖಕ ರೊಲೊ ರೊಮಿಗ್ ಅವರ ಇತ್ತೀಚಿನ ಪುಸ್ತಕ “ಐ ಆಮ್ ಆನ್ ದಿ ಹಿಟ್ ಲಿಸ್ಟ್: ಮರ್ಡರ್ ಆಂಡ್ ಮಿಥ್-ಮೇಕಿಂಗ್ ಇನ್ ಸೌತ್ ಇಂಡಿಯಾ” ಕುರಿತಾದ ಚರ್ಚೆ ನಡೆಯಲಿದೆ. 2017ರಲ್ಲಿ ತಮ್ಮ ಬೆಂಗಳೂರು ಮನೆಯ ಮುಂದೆ ಗುಂಡಿಕ್ಕಿ ಹತ್ಯೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಜೀವನ ಮತ್ತು ಕೊಲೆಯ ಬಗ್ಗೆ ಈ ಪುಸ್ತಕ ಆಳವಾದ ಒಳನೋಟಗಳನ್ನು ನೀಡಲಿದೆ. ರೊಲೊ ರೊಮಿಗ್ ಅವರು ಲೇಖಕ ಹಾಗೂ ಸಾಮಾಜಿಕ ಕಾರ್ಯಕರ್ತ ಶಿವಸುಂದರ್, ಲೇಖಕಿ ಹಾಗೂ ಕಲಾವಿದೆ ಪುಷ್ಪಮಾಲಾ ಎನ್ ಮತ್ತು ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

2017ರಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ದೇಶಾದ್ಯಂತ ಆಘಾತವನ್ನುಂಟು ಮಾಡಿತ್ತು. ಆದರೆ ಈ ಘಟನೆ ಅಲ್ಲಿಗೇ ಕೊನೆಗೊಂಡಿಲ್ಲ. ರೊಮಿಗ್ ಅವರು ತಮ್ಮ ಹಲವು ವರ್ಷಗಳ ಕಾಲದ ತನಿಖಾ ಪತ್ರಿಕೋದ್ಯಮದ ಮೂಲಕ ಗೌರಿ ಲಂಕೆಶ್‌ ಅವರು ಬದುಕಿದ್ದ ಪರಿಸರವನ್ನು ಆಳವಾಗಿ ಅನ್ವೇಷಿಸಿದ್ದಾರೆ. ಇದರ ಜೊತೆ ದೇಶದಲ್ಲಿ ನಡೆಯುತ್ತಿರುವ ದ್ವೇಷ ಮತ್ತು ಕೋಮುವಾದದ ಏರಿಕೆಯನ್ನು ಬೆಳಕಿಗೆ ತರುವ ಮೂಲಕ ಭಾರತದ ಪ್ರಜಾಪ್ರಭುತ್ವದಲ್ಲಿ ಬದಲಾಗುತ್ತಿರುವ ಸ್ವರೂಪವನ್ನು ಚಿತ್ರಿಸಿದ್ದಾರೆ. ಈ ಸಂವಾದವು ಗೌರಿಯ ಜೀವನ, ಅವರ ಹತ್ಯೆ ಹಿಂದಿನ ರಾಜಕೀಯ ಒಳಸಂಚುಗಳು ಮತ್ತು ದೇಶದ ಸಾಮಾಜಿಕ ವಾಸ್ತವತೆಯನ್ನು ಚರ್ಚಿಸುವ ವೇದಿಕೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಪತ್ರಕರ್ತ ಮತ್ತು ಲೇಖಕ ರೊಲೊ ರೊಮಿಗ್ ಅವರು ಅಮೆರಿಕದ ಡೆಟ್ರಾಯ್ಟ್‌ನಲ್ಲಿ ಜನಿಸಿ ಬೆಳೆದವರು. 2013ರಿಂದ ದಕ್ಷಿಣ ಭಾರತದ ಬಗ್ಗೆ, ವಿಶೇಷವಾಗಿ ‘ದಿ ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಗಾಗಿ ವರದಿಗಾರಿಕೆ ಮಾಡುತ್ತಿದ್ದಾರೆ. 2025ರಲ್ಲಿ ರೊಮಿಗ್ ಅವರ ಈ ಪುಸ್ತಕವು ಪುಲಿಟ್ಜರ್ ಪ್ರಶಸ್ತಿಯ ಅಂತಿಮ ಸುತ್ತಿಗೆ ಪ್ರವೇಶಿಸಿತ್ತು.

ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಮೊದಲು ಆದ್ಯತೆ ಆಧಾರದ ಮೇಲೆ ಆಸನ ಲಭ್ಯವಿರುತ್ತದೆ. ಆಸಕ್ತರು RSVP ವೆಬ್‌ಲಿಂಕ್‌ನ ಮೂಲಕ ಸ್ಥಳವನ್ನು ಕಾಯ್ದಿರಿಸಬಹುದು. ಹೆಚ್ಚಿನ ಮಾಹಿತಿಗಾಗಿ bic@bangaloreinternationalcentre.org ಗೆ ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...