ಕನ್ನಡಕ್ಕೆ ಮತ್ತೊಂದು ಡಿಜಿಟಲ್ ಮಾಧ್ಯಮ: ‘ಕನ್ನಡ ಪ್ಲಾನೆಟ್’ ವೆಬ್‌ಸೈಟ್‌ ಲೋಕಾರ್ಪಣೆ

Date:

ಸುಳ್ಳೇ ಸತ್ಯವಾಗುತ್ತಿರುವ ಯುಗದಲ್ಲಿ ತಿಳಿವಿನ ಆಳ ಮತ್ತು ಸತ್ಯದ ಪರಿಮಳವನ್ನು ಹರಡಲು ಕನ್ನಡ ಪ್ಲಾನೆಟ್ (Kannada Planet) ಎಂಬ ನೂತನ ವೆಬ್‌ಸೈಟ್‌ ಆರಂಭವಾಗಿದೆ. ವೆಬ್‌ಸೈಟ್‌ಅನ್ನು ಹಿರಿಯ ಪತ್ರಕರ್ತೆ ಡಾ. ವಿಜಯಾ ಲೋಕಾರ್ಪಣೆಗೊಳಿಸಿದ್ದಾರೆ.

“ದುರಿತ ಕಾಲದಲ್ಲಿ ಮಾತಿನ ಶಕ್ತಿ ಕುಂದಬಾರದು. ಮಾತು ಸೋಲಬಾರದು, ಮಾತು ಮುಗಿದು ಹೋಗಿಬಿಡಬಾರದು. ಬರೆದು ಬದುಕುತ್ತ ಬಂದವರು ನಾವು. ಹಿಂದೆ ಪತ್ರಿಕೆ, ನಂತರ ಟಿವಿ, ಈಗ ಡಿಜಿಟಲ್ ಮಾಧ್ಯಮ. ಸುತ್ತ ನೂರು ಟೆಂಪ್ಲೇಟುಗಳು ಅಡ್ಡಾದಿಡ್ಡಿಯಾಗಿ ಬಿದ್ದಿರುವಾಗ, ನಾವು ಹೊಸದೊಂದು ಬೋರ್ಡು ಹಿಡಿದು ಬರಬೇಕು. ಮಾತಾಡಬೇಕು, ನಮ್ಮ ತಿಳಿವಿನ ಆಳ ಹರಡುತ್ತ ಸಾಗಬೇಕು” ಎಂದು ಕನ್ನಡ ಪ್ಲಾನೆಟ್ ಬಳಗ ಹೇಳಿದೆ.

“ಕನ್ನಡ ಪ್ಲಾನೆಟ್ ನಾವೇ ಕಟ್ಟಿಕೊಂಡ ಹೊಸ ವೇದಿಕೆ. ಇದನ್ನು ನಿಮ್ಮ ವೇದಿಕೆಯನ್ನಾಗಿಸುವುದು ನಮ್ಮ ಗುರಿ. ಕನ್ನಡ ಪ್ಲಾನೆಟ್ ಒಂದು ದೊಡ್ಡ ಕಿಟಕಿ, ನಿಮ್ಮನ್ನು ನೋಡಲು, ಜಗತ್ತನ್ನು ಅರ್ಥ ಮಾಡಿಕೊಳ್ಳಲು, ಸತ್ಯ ಮಾತಾಡಲು. ರಾಶಿರಾಶಿ ಕನಸುಗಳನ್ನು ಹರಡಿ ಕುಳಿತಿದ್ದೇವೆ. ಇದೆಲ್ಲ ಒಂದೇ ಏಟಿಗೆ ಸಾಧ್ಯವಾಗುವಂಥಾಗಲು ನಾವು ಸಹಸ್ರ ಬಾಹುಗಳಾಗಬಾರದೇ ಎಂಬ ಧಾವಂತ ನಮ್ಮದು. ನೀವು ಜತೆಗಿದ್ದರೆ ಯಾವುದೂ ಅಸಾಧ್ಯವಲ್ಲ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ; ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಣೆ

“ನಾವು ನೊಂದವರ ಧ್ವನಿಯಾಗಬೇಕು, ಶೋಷಿತರ ಕೊರಳಾಗಬೇಕು, ಸಮಾಜದ ಕಟ್ಟಕಡೆಯಲ್ಲಿ ನಿಲ್ಲಿಸಲ್ಪಟ್ಟ ಮನುಷ್ಯನ ಎದೆಯ ಕೂಗಾಗಬೇಕು. ಇದೆಲ್ಲ ಈಗ ಕ್ಲೀಷೆಯ ಮಾತುಗಳಾದವು. ತುಂಬ ತುರ್ತಾಗಿ ನಾವು ಈಗ ನೀವಾಗಬೇಕು. ನಿಮ್ಮ ಕಣ್ಣಲ್ಲಿ ಜಗತ್ತನ್ನು ನೋಡಬೇಕು. ಹಾಗಾದಾಗ ಎಲ್ಲ ದೊಡ್ಡದೊಡ್ಡ ಆಶಯಗಳೂ ಸಾವಯವವಾಗಿ ಸಾಧ್ಯವಾಗಿಬಿಡುತ್ತದೆ” ಎಂದು ಕನ್ನಡ ಪ್ಲಾನೆಟ್ ಹೇಳಿಕೆ.

“ಕನ್ನಡ ಪ್ಲಾನೆಟ್ ಬದಲಾದ ಕಾಲಘಟ್ಟದಲ್ಲಿ ನಮ್ಮ ಅಳಿದುಳಿದ ಸಂವೇದನೆಗಳನ್ನು ಎತ್ತಿಹೇಳುವ ವೇದಿಕೆ. ನಮ್ಮೆಲ್ಲರ ಆತ್ಮಸಾಕ್ಷಿಗಳನ್ನು ಬಡಿದು ಏಳಿಸುವ ವೇದಿಕೆ. ಸತ್ಯಕ್ಕಾಗಿ ಹಂಬಲಿಸುವ ವೇದಿಕೆ. ಸದ್ಯದಲ್ಲೇ ಯೂಟ್ಯೂಬ್, ಫೇಸ್ ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಹೀಗೆ ಎಲ್ಲ ಕಡೆಗಳಲ್ಲೂ ನಿಮ್ಮ ಈ ಕನ್ನಡ ಪ್ಲಾನೆಟ್ ಇರುತ್ತದೆ. ಇದರ ಮೂಲಕವೇ ನಾವು ಮಾತನಾಡುತ್ತೇವೆ. ಮಾತಿನ ಧ್ವನಿ ಸೋಲದಂತೆ. ನಿಮ್ಮ ಎಲ್ಲ ಬಗೆಯ ಬೆಂಬಲವನ್ನೂ ಬೇಡುತ್ತೇವೆ. ಜತೆಗೆ, ನಿಂತುಕೊಳ್ಳಿ, ನಿಮಗೆ ನಿರಾಶೆಯಾಗದಂತೆ ಬದುಕುತ್ತೇವೆ” ಎಂದು ತಿಳಿಸಿದೆ.

ಕನ್ನಡ ಪ್ಲಾನೆಟ್ ಒಂದು ದೊಡ್ಡ ಕಿಟಕಿ, ನಿಮ್ಮನ್ನು ನೋಡಲು, ಜಗತ್ತನ್ನು ಅರ್ಥ ಮಾಡಿಕೊಳ್ಳಲು, ಸತ್ಯ ಮಾತಾಡಲು. ರಾಶಿರಾಶಿ ಕನಸುಗಳನ್ನು ಹರಡಿ ಕುಳಿತಿದ್ದೇವೆ. ಇದೆಲ್ಲ ಒಂದೇ ಏಟಿಗೆ ಸಾಧ್ಯವಾಗುವಂಥಾಗಲು ನಾವು ಸಹಸ್ರ ಬಾಹುಗಳಾಗಬಾರದೇ ಎಂಬ ಧಾವಂತ ನಮ್ಮದು. ನೀವು ಜತೆಗಿದ್ದರೆ ಯಾವುದೂ ಅಸಾಧ್ಯವಲ್ಲ. ನಾವೇ ಕಟ್ಟಿಕೊಂಡ ಹೊಸ ವೇದಿಕೆ. ಇದನ್ನು ನಿಮ್ಮ ವೇದಿಕೆಯನ್ನಾಗಿಸುವುದು ನಮ್ಮ ಗುರಿ ಎಂದು ಕನ್ನಡ ಪ್ಲಾನೆಟ್‌ ಬಳಗ ಹೇಳಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...