ಇನ್ನೂ ಎರಡು ತಿಂಗಳು ನೂರರ ಗಡಿಯಲ್ಲಿಯೇ ಮುಂದುವರೆಯಲಿದೆ ಟೊಮೆಟೊ ದರ

Date:

  • ಇತರೆ ರಾಜ್ಯಗಳಿಗೆ ರಫ್ತಾಗುತ್ತಿರುವ ನಮ್ಮ ರಾಜ್ಯದ ಟೊಮೆಟೊ
  • ಮಳೆಯ ಕೊರತೆಯಿಂದ ಕಡಿಮೆಯಾದ ಟೊಮೆಟೊ ಬೆಳೆ

ರಾಜ್ಯದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಈ ಬೆಲೆ ಇನ್ನೂ ಎರಡು ತಿಂಗಳು ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ತರಕಾರಿ ಹಣ್ಣುಗಳ ದರ ದುಪ್ಪಟ್ಟಾಗಿದೆ. ಇದರಿಂದ ಗ್ರಾಹಕರು ಕಂಗೆಟ್ಟಿದ್ದು, ಕೆಜಿ ತರಕಾರಿ ತೆಗೆದುಕೊಳ್ಳುತ್ತಿದ್ದವರು ಇದೀಗ ಅರ್ಧಕೆಜಿಗೆ ಬಂದಿಳಿದಿದ್ದಾರೆ. ಇನ್ನೂ ಕೆಲವರು ಅಡಿಗೆ ಸಾಂಬಾರ್‌ಗೆ ಟೊಮೆಟೊ ಬಳಸುವುದನ್ನು ಬಿಟ್ಟು ಹುಣಸೆ ಮತ್ತು ಇನ್ನಿತರ ಪದಾರ್ಥಗಳನ್ನು ಬಳಸುತ್ತಿದ್ದಾರೆ.

ರಾಜ್ಯಕ್ಕೆ ಮುಂಗಾರು ತಡವಾಗಿ ಆಗಮಿಸಿದ್ದು, ಜೂನ್‌ನಲ್ಲಿ ಆರಂಭವಾಗಬೇಕಿದ್ದ ಮಳೆ ಇದೀಗ ಜುಲೈಗೆ ಪ್ರಾರಂಭವಾಗಿದೆ. ಸರಿಯಾದ ಸಮಯಕ್ಕೆ ಮಳೆ ಬರದ ಕಾರಣ ರೈತರು ಬೆಳೆದ ಬೆಳೆ ನಾಶವಾಗಿದೆ. ಇದೇ ವೇಳೆ, ಎಲೆರೋಗ ಕಾಣಿಸಿಕೊಂಡು ಟೊಮೆಟೊ ನಾಶವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷ ಮಳೆಯ ಕೊರತೆ ಹಿನ್ನೆಲೆ, ಉತ್ತರ ಪ್ರದೇಶ, ಚತ್ತೀಸ್‌ಘಡ್, ದೆಹಲಿಯಲ್ಲಿ ಟೊಮೆಟೊ ಬೆಳೆ ಕಡಿಮೆಯಾಗಿದೆ. ಹಾಗಾಗಿ, ನಮ್ಮ ರಾಜ್ಯದ ಟೊಮೆಟೊಗೆ ಬೇಡಿಕೆ ಇದ್ದು, ಇತರ ರಾಜ್ಯಗಳಿಗೆ ಟೊಮೆಟೊ ರಫ್ತು ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

ಈ ವರ್ಷ ಬೇಡಿಕೆಗೆ ತಕ್ಕಂತೆ ಟೊಮೆಟೊ ಸಿಗದ ಕಾರಣ ಹೆಚ್ಚಿನ ಬೆಲೆ ನಿಗದಿ ಮಾಡಿ ರೈತರು ವ್ಯಾಪಾರ ಮಾಡುತ್ತಿದ್ದಾರೆ. ಪ್ರತಿಬಾರಿ ರಾಜ್ಯಕ್ಕೆ ನಾಸಿಕ್‌ನಿಂದ ಟೊಮೆಟೊ ಸರಬರಾಜು ಆಗುತ್ತಿತ್ತು. ಈ ಬಾರಿ ಅಲ್ಲಿಯೂ ಕೂಡ ಸರಿಯಾಗಿ ಬೆಳೆ ಬಂದಿಲ್ಲ. ಹೀಗಾಗಿ ನಾಸಿಕ್, ತಮಿಳುನಾಡು, ಚೆನೈಗೆ ಕರ್ನಾಟಕದಿಂದ ಟೊಮೆಟೊ ರಫ್ತು ಮಾಡಲಾಗುತ್ತಿದೆ. ಇದರಿಂದ ಬೆಲೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...