ಕೆಐಎ ಸಿಬ್ಬಂದಿ ಮೇಲೆ ಅಸಮಾಧಾನ ಹೊರಹಾಕಿದ ರಾಜಭವನದ ಉನ್ನತ ಅಧಿಕಾರಿಗಳು

Date:

  • ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳು
  • ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅಧಿಕಾರಿಗಳು

ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್‌ ಅವರನ್ನು ಬಿಟ್ಟು ವಿಮಾನ ಹಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಮಾನದ ಸಿಬ್ಬಂದಿ ಮೇಲೆ ರಾಜಭವನದ ಉನ್ನತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಳೆದ 10 ವರ್ಷದಿಂದ ರಾಜಭವನದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೂವರು ರಾಜ್ಯಪಾಲರಿಗೆ ಪ್ರೋಟೋಕಾಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಸಾಂವಿಧಾನಿಕ ಮುಖ್ಯಸ್ಥರನ್ನು ಇಂತಹ ಶೈಲಿಯಲ್ಲಿ ನಡೆಸಿಕೊಳ್ಳುವುದನ್ನು ನಾನು ಎಂದು ಕಂಡಿಲ್ಲ” ಎಂದು ರಾಜಭವನದ ಪ್ರೋಟೋಕಾಲ್ ಅಧಿಕಾರಿ ಎಂ ವೇಣುಗೋಪಾಲ್ ತಿಳಿಸಿದರು.

“ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳು ಗವರ್ನರ್ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ್ದಾರೆ. ಅನುಸರಿಸಬೇಕಾದ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಪಾಲರು ಗುರುವಾರ ಬೆಳಗ್ಗೆ 9 ಗಂಟೆಗೆ ಟೇಕ್ ಆಫ್ ಆಗಬೇಕಿದ್ದ ಸ್ಟಾರ್ ಏರ್ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಿದ್ದರು. ಆದರೆ, ರಾಜ್ಯಪಾಲರು ಹಿಂದಿನ ರಾತ್ರಿ (ಬುಧವಾರ) ಇಂದೋರ್‌ನಿಂದ ತಡವಾಗಿ ಬೆಂಗಳೂರಿಗೆ ಬಂದ ಕಾರಣ ಬೆಳಗಿನ ವಿಮಾನವನ್ನು ರದ್ದುಗೊಳಿಸಿ, ಮಧ್ಯಾಹ್ನದ ವಿಮಾನವನ್ನು ಕಾಯ್ದಿರಿಸಿದರು” ಎಂದು ವಿವರಿಸಿದರು.

“ಏರ್‌ಏಷ್ಯಾ ಇಂಡಿಯಾ ವಿಮಾನದ ಟಿಕೆಟ್‌ ಅನ್ನು ಮಧ್ಯಾಹ್ನ 2.05ಗಂಟೆಗೆ ಕಾಯ್ದಿರಿಸಲಾಗಿತ್ತು. ಟಿಕೆಟ್ ಕಾಯ್ದಿರಿಸಿದಾಗಿನಿಂದ ನಮ್ಮ ತಂಡ ರಾಜ್ಯಪಾಲರ ಪ್ರಯಾಣಕ್ಕೆ ಸಂಬಂಧಿಸಿದಂತೆ ವಿಮಾನಯಾನ ಸಿಬ್ಬಂದಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿತ್ತು. ಮಧ್ಯಾಹ್ನ 1.35ಕ್ಕೆ ಕೆಐಎಗೆ ರಾಜ್ಯಪಾಲರ ಆಗಮನದ ಬಗ್ಗೆ ವಿಮಾನಯಾನ ಸಂಸ್ಥೆಗೆ ಎಚ್ಚರಿಕೆ ನೀಡಲಾಯಿತು. ರಾಜ್ಯಪಾಲರು ಎಂದಿಗೂ ತಡವಾಗಿ ಹೋಗುವುದಿಲ್ಲ. ಅವರು ಟೇಕ್-ಆಫ್ ಆಗುವ 40 ನಿಮಿಷಗಳ ಮೊದಲು ವಿಮಾನ ನಿಲ್ದಾಣದಲ್ಲಿದ್ದರು” ಎಂದು ಅವರು ಹೇಳಿದರು.

“ರಾಜ್ಯಪಾಲರಿಗೆ ತಪಾಸಣೆಯಿಂದ ವಿನಾಯಿತಿ ನೀಡಲಾಗಿದೆ. ಪ್ರೋಟೋಕಾಲ್ ಪ್ರಕಾರ, ಕೊನೆಯ ಪ್ರಯಾಣಿಕರು ಒಳಹೋದ ನಂತರವೇ ವಿಮಾನವನ್ನು ಹತ್ತಲು ವಿಐಪಿಗಳನ್ನು ವಿಮಾನಯಾನ ಸಂಸ್ಥೆ ಕರೆಯುತ್ತದೆ. ರಾಜ್ಯಪಾಲರು ಬೆಂಗಾವಲು ವಾಹನದೊಂದಿಗೆ ವಿಮಾನ ನಿಲ್ದಾಣ ತಲುಪಲು 8 ನಿಮಿಷ ತೆಗೆದುಕೊಂಡಿತು. ವಿಮಾನದ ಮುಂದೆ ರಾಜ್ಯಪಾಲರು ತಮ್ಮ ಕಾರಿನಿಂದ ಇಳಿದಾಗ ಮಧ್ಯಾಹ್ನ 2.06 ಆಗಿತ್ತು. ವಿಮಾನದ ಬಾಗಿಲು ಇನ್ನೂ ತೆರೆದಿತ್ತು. ಆದರೂ, ರಾಜ್ಯಪಾಲರನ್ನು ವಿಮಾನ ಏರಲು ಅನುವು ಮಾಡಿಕೊಡಲಿಲ್ಲ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಇದಕ್ಕೆ ಸಾಕ್ಷಿಯಿವೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

“ಮೆಟ್ಟಿಲು ಏಣಿಯ ಬಳಿ ನಿಂತಿದ್ದಾಗ ವಿಮಾನದೊಳಗೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರೀಫುಲ್ಲಾ ಅವರು ರಾಜ್ಯಪಾಲರಿಗೆ ಹೇಳಿದಾಗ ನಮ್ಮ ಇಡೀ ತಂಡ ತಬ್ಬಿಬ್ಬಾಯಿತು. ರಾಜ್ಯಪಾಲರು ರಾಜ್ಯದ ಪ್ರಥಮ ಪ್ರಜೆ ಮತ್ತು ಸಾಂವಿಧಾನಿಕ ಮುಖ್ಯಸ್ಥರು ಅವರನ್ನು ಈ ರೀತಿ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ಹೇಳಿದೆವು. ಅರೀಫುಲ್ಲಾ ಅವರನ್ನು ವಿಮಾನ ನಿಲ್ದಾಣದಲ್ಲಿ ಅವರ ವ್ಯವಸ್ಥಾಪಕರನ್ನು ಸಂಪರ್ಕಿಸಲು ಕೇಳಿದೆವು. ಅವರು ಅದನ್ನು ನಿರಾಕರಿಸಿದರು. ರಾಜ್ಯಪಾಲರ ಆಗಮನದ ಕುರಿತು ವಿಮಾನಯಾನ ಸಿಬ್ಬಂದಿಗೆ ಸಂಪೂರ್ಣ ತಿಳಿದಿದ್ದರೂ ಈ ರೀತಿ ನಡೆದುಕೊಂಡಿರುವುದು ಬೇಸರ ತಂದಿದೆ. ವಿಐಪಿಗಳು ಬಂದಾಗ ವಿಮಾನ ಕಾಯಲೇಬೇಕು. ಇದು ಪ್ರೋಟೋಕಾಲ್ ಉಲ್ಲಂಘನೆಯಾಗಿದೆ. ವಿಐಪಿಗಳ ಪಟ್ಟಿಯಲ್ಲಿ ರಾಜ್ಯಪಾಲರು ನಾಲ್ಕನೇ ಸ್ಥಾನದಲ್ಲಿದ್ದಾರೆ” ಎಂದು ವೇಣುಗೋಪಾಲ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...