ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ ಸಹಾಯ ಮಾಡಿ ಎಂದು ಪೊಲೀಸರಿಗೆ ಟ್ವೀಟ್‌ ಮಾಡಿದ ಯುವತಿ

Date:

ನಾನು ಅಪಾಯದಲ್ಲಿದ್ದೇನೆ. ನನ್ನ ಮೇಲೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ಅತ್ಯಾಚಾರವಾಗಿದೆ. ಹಾಗಾಗಿ, ಬೆಂಗಳೂರು ನಗರ ಪೊಲೀಸರು ದಯವಿಟ್ಟು ನನ್ನ ಸಹಾಯಕ್ಕೆ ಬನ್ನಿ ಎಂದು ಯುವತಿಯೊಬ್ಬರು ಟ್ವೀಟ್‌ ಮೂಲಕ ಪೊಲೀಸರ ಸಹಾಯ ಕೇಳಿದ್ದಾರೆ.

ಗುಪ್ತಾ ಭರತ್ ಎಂಬ ಟ್ವಿಟರ್‌ ಅಕೌಂಟ್‌ನಿಂದ ಟ್ವೀಟ್‌ ಮಾಡಲಾಗಿದೆ. “ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ. ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆ. ನನ್ನ ಜೀವ ಅಪಾಯದಲ್ಲಿದೆ” ಎಂದು ಯುವತಿ ಟ್ವೀಟ್ ಮಾಡಿದ್ದಾಳೆ.

ಆಗಸ್ಟ್‌ 9ರಿಂದ ಯುವತಿ ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ತನ್ನ ಸಮಸ್ಯೆಯನ್ನು ಹಂಚಿಕ್ಕೊಳ್ಳುತ್ತಿದ್ದು, ಕಾಶ್ಚೀರದ ಸೈಬರ್ ಕ್ರೈಂ ಪೊಲೀಸ್‌ ಠಾಣೆಗೂ ಟ್ಯಾಗ್ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ, ಸೆ. 3ರಂದು ಬಿಜೆಪಿ ಅಲ್ಪಸಂಖ್ಯಾತ ನಾಯಕಿ ನಾಜಿಹಾ ಎಂಬುವವರನ್ನು ಟ್ಯಾಗ್ ಮಾಡಿ ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ಸಹಾಯ ಮಾಡಿ ಎಂದು ಕೇಳಿದ್ದಾರೆ.

ಸೆ. 7ರಂದು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ಸಹಾಯ ಕೇಳಿದ್ದಾರೆ.

”ಫೇಸ್ ಬುಕ್ ಮೂಲಕ ಕಾಶ್ಮೀರ ಯುವಕನ ಪರಿಚಯವಾಗಿದೆ. ನಮ್ಮಿಬ್ಬರ ನಡುವೆ ಹಣಕಾಸಿನ ವ್ಯವಹಾರವೂ ನಡೆದಿತ್ತು. ಕಾಶ್ಮೀರ್ ಯುವಕ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದಾನೆ. ಸದ್ಯ ನನ್ನನ್ನು ಮದುವೆಯಾಗುವುದಿಲ್ಲ ಎಂದು ನಿರ್ಲಕ್ಷಿಸಿದ್ದಾನೆ” ಎಂದು ಯುವತಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾಳೆ.  

”ನಾನು ನೀಡಿದ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ ಅವನು ನನಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ನನಗೆ ಸಹಾಯ ಮಾಡಿ, ಕಾಶ್ಮೀರ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ” ಎಂದು ಹೇಳಿದ್ದಾಳೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರ ಪೊಲೀಸರು, “ದಯವಿಟ್ಟು ನಿಮ್ಮ ವಾಸಸ್ಥಳದ ವಿಳಾಸದ ವಿವರ ಹಂಚಿಕೊಳ್ಳಿ, ಇದರಿಂದ ನಾವು ನಿಮ್ಮ ಮನವಿಯನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ರವಾನಿಸುತ್ತೇವೆ” ಎಂದು ಟ್ವೀಟ್‌ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ

ಇದಕ್ಕೆ ಯುವತಿ, “ನಾನು ವಾಸಿಸುವ ಸ್ಥಳದಿಂದ ಎರಡು ಕಿ.ಮೀ ದೂರದಲ್ಲಿ ಬೆಳ್ಳಂದೂರು ಪೊಲೀಸ್‌ ಠಾಣೆಯಿದೆ. ಬೆಳಗ್ಗೆ ಠಾಣೆಗೆ ತೆರಳಿ ದೂರು ನೀಡುತ್ತೇನೆ” ಎಂದು ಹೇಳಿದ್ದಾಳೆ.

ಮುಂದುವರೆದು, “ಧನ್ಯವಾದಗಳು, ನಾನು ಪೊಲೀಸ್ ಇನ್ಸ್‌ಪೆಕ್ಟರ್‌ನೊಂದಿಗೆ ಸಂಪರ್ಕ ಹೊಂದಿದ್ದೇನೆ. ಅವರು ನನ್ನ ಎಫ್‌ಐಆರ್ ಅನ್ನು ಆದ್ಯತೆಯ ಮೇಲೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕುಟುಂಬ ಮತ್ತು ನನ್ನ ಸುರಕ್ಷತೆಯ ಬಗ್ಗೆ ನನಗೆ ಭರವಸೆ ಇದೆ” ಎಂದು ತಿಳಿಸಿದ್ದಾರೆ.

ಸದ್ಯ ಸಂತ್ರಸ್ತ ಯುವತಿಯು ಬೆಳ್ಳಂದೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...