ರೈಲಿನಲ್ಲಿ ಕೊಳಾಯಿ ಕದಿಯುತ್ತಿದ್ದ ಕಳ್ಳರ ಬಂಧನ

Date:

  • ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುಗಳಲ್ಲಿ ಕಳ್ಳತನ
  • ಚಲಿಸುತ್ತಿರುವ ರೈಲುಗಳಲ್ಲಿ ಇಂತಹ ಘಟನೆಗಳು ಆಗಾಗ ವರದಿಯಾಗುತ್ತಿವೆ ಎಂದ ರೈಲ್ವೆ ಇಲಾಖೆ

ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುನಲ್ಲಿರುವ ಕೊಳಾಯಿ ಮತ್ತು ಇತರ ಪರಿಕರಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಜೂನ್ 30ರಂದು ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬಂಧಿಸಿದೆ.  

ರಂಗಸ್ವಾಮಿ(47) ಮತ್ತು ಗಾಂಧಿ(29) ಬಂಧಿತರು. ಇವರು ಮೂಲತಃ ಬೆಂಗಳೂರಿನ ಶ್ರೀರಾಮಪುರದವರು. ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುಗಳಲ್ಲಿನ ಕೊಳಾಯಿಗಳು ಮತ್ತು ಇತರ ಪರಿಕರಗಳನ್ನು ಕದಿಯುತ್ತಿದ್ದರು.

ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ದೇವಾಂಶ್ ಶುಕ್ಲಾ ಅವರ ಮಾರ್ಗದರ್ಶನದಲ್ಲಿ ನಲ್ಲಿಗಳು ಮತ್ತು ಇತರ ಕ್ಯಾರೇಜ್ ಮತ್ತು ವ್ಯಾಗನ್ (ಸಿ & ಡಬ್ಲ್ಯೂ) ಪರಿಕರಗಳ ಕಳ್ಳತನದಲ್ಲಿ ತೊಡಗಿರುವ ದುಷ್ಕರ್ಮಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಚಲಿಸುತ್ತಿರುವ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಆಗಾಗ ವರದಿಯಾಗುತ್ತಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದ ಆರ್‌ಪಿಎಫ್ ನಿರೀಕ್ಷಕ ಎ.ಕೆ.ತಿವಾರಿ ನೇತೃತ್ವದ ತಂಡ ಕೆಎಸ್‌ಆರ್ ಬೆಂಗಳೂರು ಠಾಣೆಯಲ್ಲಿ ರಂಗಸ್ವಾಮಿಯನ್ನು ಬಂಧಿಸಿ ನಂತರ ಗಾಂಧಿಯನ್ನು ವಶಕ್ಕೆ ತೆಗೆದುಕೊಂಡಿದೆ. ದುಷ್ಕರ್ಮಿಗಳಿಂದ ₹12,960 ಮೌಲ್ಯದ ನಲ್ಲಿಗಳು ಮತ್ತು ಇತರೆ ಫಿಟ್ಟಿಂಗ್‌ಗಳನ್ನು ಜಪ್ತಿ ಮಾಡಲಾಗಿದೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ; ದೂರು ದಾಖಲು

ದುಷ್ಕರ್ಮಿಗಳಿಂದ 56 ಜಾಯ್ಸನ್ ಟ್ಯಾಪ್ಸ್, 03 ಜಾಗ್ವಾರ್ ಟ್ಯಾಪ್ಸ್, 01 ಜಾಗ್ವಾರ್ ಪ್ರೆಸ್ ಟ್ಯಾಪ್ ಮತ್ತು 06 ಬ್ರಾಸ್ ಫೂಟ್ ವಾಲ್ವ್ ವಶಪಡಿಸಿಕೊಳ್ಳಲಾಗಿದೆ.

ಅಪರಾಧಿಗಳ ಪತ್ತೆಯಲ್ಲಿ ಕಾರ್ಯನಿರ್ವಹಿಸಿದ ಆರ್‌ಪಿಎಫ್ ತಂಡದ ಪ್ರಯತ್ನವನ್ನು ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಶ್ಲಾಘಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...