ಬೆಂಗಳೂರು | 93 ವರ್ಷ ಹಳೆಯ ಶಾಲೆಯ ಗೋಡೆ ಕೆಡವಿದ ಮೂವರ ವಿರುದ್ಧ ಪ್ರಕರಣ ದಾಖಲು

Date:

ಕ್ವೀನ್ಸ್ ರಸ್ತೆಯಲ್ಲಿರುವ 93 ವರ್ಷ ಹಳೆಯ ಶಾಲೆಯಾದ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್‌ಕೆಇಐ) ಕಾಂಪೌಂಡ್ ಗೋಡೆಯನ್ನು ಕೆಡವಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ ಗುಂಪೊಂದು ಜೆಸಿಬಿ ಸಮೇತವಾಗಿ ಬಲವಂತವಾಗಿ ಶಾಲೆಯ ಆವರಣಕ್ಕೆ ನುಗ್ಗಿ ಗೋಡೆಯನ್ನು ಕೆಡವಿದೆ. ಜುಲೈ 5ರಂದು ಸಂಜೆ 4:30ಕ್ಕೆ ಘಟನೆ ನಡೆದಿದ್ದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಂಧಿತ ಮೂವರನ್ನು ಮರಿಯಾ ಎಲಿಜಬೆತ್, ಮೊಹಮ್ಮದ್ ಜಬಿ ಮತ್ತು ಜೆರಾರ್ಡ್ ಸ್ಟೀಫನ್ ಹ್ಯಾರಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹ್ಯಾರಿ, ಎಲಿಜಬೆತ್ ಮತ್ತು ಜಬಿ ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿದ್ದು ಭದ್ರತಾ ಸಿಬ್ಬಂದಿಗಳಾದ ಕಾರ್ತಿಕ್ ಮತ್ತು ಮುರಳಿ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ನಾಲ್ವರು ಬಾಲಕಾರ್ಮಿಕರನ್ನು ರಕ್ಷಿಸಿದ ಅಧಿಕಾರಿಗಳು

ಎಲಿಜಬೆತ್ ಮತ್ತು ಶಾಲಾ ಆಡಳಿತದ ನಡುವಿನ 25 ವರ್ಷಗಳ ಆಸ್ತಿ ವಿವಾದದ ಕಾರಣ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಶಾಲಾ ಕ್ಯಾಂಪಸ್‌ನ ಒಂದು ಭಾಗವು ತನಗೆ ಸೇರಿದೆ ಎಂದು ಎಲಿಜಬೆತ್ ಹೇಳಿಕೊಂಡಿದ್ದಾರೆ. ಆದರೆ ಶಾಲೆಯ ಆಡಳಿತ ಮಾತ್ರ ಮುನ್ಸಿಪಲ್ ಕಾರ್ಪೊರೇಷನ್‌ನಿಂದ 10 ಎಕರೆ ಆಸ್ತಿಯನ್ನು ಖರೀದಿಸಿದೆ ಎಂದು ಹೇಳಿಕೊಳ್ಳುತ್ತಿದೆ. ತನ್ನ ಮುತ್ತಜ್ಜ ರಕ್ಷಣೆಯ ಸೇವೆ ಸಲ್ಲಿಸಿದ ಕಾರಣ ಆಸ್ತಿಯನ್ನು ಸರ್ಕಾರವು ತನಗೆ ನೀಡಿದೆ ಎಂದು ಹೇಳಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

“ಪ್ರಸ್ತುತ, ಆಸ್ತಿ ವಿವಾದವು ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಂಗ ಪರಿಶೀಲನೆಯಲ್ಲಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...