ರಾಜ್ಯದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

Date:

ರಾಜ್ಯದ ಮೂರು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸುತ್ತಿದ್ದ ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಲಿದ್ದ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬೆಳಗಾವಿ ವಿಮಾನ ನಿಲ್ದಾಣದ ವಿಮಾನವೊಂದಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.

ಎಲ್ಲಾ ಭದ್ರತಾ ತಪಾಸಣೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಬೆಂಗಳೂರು ವಿಮಾನನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಲಿದ್ದ ಅಲಯನ್ಸ್ ಏರ್ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಮಧ್ಯಾಹ್ನ 1.15ರ ಸುಮಾರಿಗೆ ಬೆದರಿಕೆ ಕರೆ ಬಂದಿದೆ. ಈ ವಿಮಾನದಲ್ಲಿ 46 ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿಮಾನ ಇಳಿದ ತಕ್ಷಣ ಶ್ವಾನದಳ ಮತ್ತು ಬಾಂಬ್ ಸ್ಕ್ವಾಡ್ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ. ಎಲ್ಲಾ ತಪಾಸಣೆ ಬಳಿಕ ಇದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿದೆ. ವಿಮಾನವು ವಿದ್ಯಾನಗರಕ್ಕೆ ತಲುಪಬೇಕಾಗಿತ್ತು. ಹುಸಿ ಬಾಂಬ್ ಬೆದರಿಕೆಯಿಂದಾಗಿ ವಿಮಾನ ಹಾರಾಟ ಸಮಯದಲ್ಲಿ ವ್ಯತ್ಯಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಇನ್ನು ಬೆಂಗಳೂರಿನಿಂದ ದೆಹಲಿಗೆ ಟೇಕ್ ಆಫ್ ಆಗಲಿದ್ದ ಇಂಡಿಗೋ ವಿಮಾನಕ್ಕೂ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆಕಾಶ ಏರ್‌ನ ಕೆಐಎ ಮ್ಯಾನೇಜರ್ ಹರಿಬಾಬು ಬಂಡಿ ಅವರ ದೂರಿನ ಮೇರೆಗೆ ಕೆಐಎ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಮಾನಯಾನಕ್ಕೆ ಎಕ್ಸ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಲಾಗಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದಲ್ಲಿ ತೀವ್ರ ಭದ್ರತಾ ತಪಾಸಣೆ ನಡೆಸಲಾಗಿದ್ದು, ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಕಳುಹಿಸಲಾಗಿದೆ.

ಇದನ್ನು ಓದಿದ್ದೀರಾ? 24 ಗಂಟೆಗಳಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ; ವಾರದಲ್ಲಿ 35 ಹುಸಿ ಕರೆ!

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆಯ ಕುರಿತು ಡಿಸಿಪಿ ರೋಹನ್ ಜಗದೀಶ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. “ಏನೂ ಸಿಕ್ಕಿಲ್ಲ. ಇಮೇಲ್ ಒಂದು ಸುಳ್ಳಾಗಿತ್ತು. ಈ ಇಮೇಲ್ ಕಳುಹಿಸಿದವರ ಗುರುತು ಪತ್ತೆಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಬೆಂಗಳೂರು ವಿಮಾನ ನಿಲ್ದಾಣದ ಆರು ಇಂಡಿಗೋ ವಿಮಾನಗಳಿಗೆ ಒಟ್ಟು 12 ಬಾಂಬ್ ಬೆದರಿಕೆ ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಬೆಂಗಳೂರು ವಿಮಾನ ನಿಲ್ದಾಣವು ಈ ವೈರಲ್ ಸಂದೇಶ ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...