ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್; ಮರುಕಳಿಸುವುದೇ ಪೊಲೀಸ್‌ ದೌರ್ಜನ್ಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಟೋಯಿಂಗ್’ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸುಳಿವು ನೀಡಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರು ಆಯೋಜಿಸಿದ್ದ ‘ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ’ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪರಮೇಶ್ವರ್ ಟೋಯಿಂಗ್ ಪುನರಾರಂಭದ ಬಗ್ಗೆ ಮಾತನಾಡಿದ್ದಾರೆ. “ಸಂಚಾರ ಸುಧಾರಣೆಗಾಗಿ ತಂತ್ರಜ್ಞಾನ ಬಳಸಿಕೊಂಡು ಬೆಂಗಳೂರಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ, ನಗರದ ಕೆಲವು ರಸ್ತೆಗಳಲ್ಲಿ ಮತ್ತೆ ಟೋಯಿಂಗ್ ಪುನರಾರಂಭಿಸಲು ಪೊಲೀಸರು ಯೋಜಿಸಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರ ರಾಜಧಾನಿ ದೆಹಲಿಯ ನಂತರದಲ್ಲಿ ಅತೀ ಹೆಚ್ಚು ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿರುವ ನಗರ ಬೆಂಗಳೂರು. ನಗರದಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಹಲವು ಕ್ರಮಗಳನ್ನು ಜಾರಿಯಾಗುತ್ತಿವೆ. ಅಗತ್ಯಬಿದ್ದರೆ, ಇನ್ನಷ್ಟು ಸಂಚಾರ ಪೊಲೀಸ್‌ ಠಾಣೆಗಳನ್ನು ತೆರೆಯಲಾಗುತ್ತದೆ” ಎಂದೂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022ರಿಂದ ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು. ನಗರದಲ್ಲಿ ಟ್ರಾಫಿಕ್ ಪೊಲೀಸರು ಅನಗತ್ಯವಾಗಿ ವಾಹನಗಳನ್ನು ಟೋಯಿಂಗ್ ಮಾಡುತ್ತಿದ್ದಾರೆ. ವಾಹನದ ಬಳಿಯೇ ವಾಹನ ಮಾಲೀಕರು ಇದ್ದರೂ, ವಾಹನಗಳನ್ನು ಹೊತ್ತೊಯ್ದು ದಂಡ ವಿಧಿಸುತ್ತಿದ್ದಾರೆ ಎಂಬ ಆರೋಪಗಳು ಬೆಂಗಳೂರಿನಲ್ಲಿ ಹೆಚ್ಚಾಗಿದ್ದರು.

ಅಲ್ಲದೆ, ರಸ್ತೆಯೊಂದರಲ್ಲಿ ಆಹಾರ ಡೆಲಿವೆರಿ ಮಾಡುವ ಕಾರ್ಮಿಕರೊಬ್ಬರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ಟೋಯಿಂಗ್ ಮಾಡಿದ್ದರು. ತಮ್ಮ ವಾಹನವನ್ನು ಬಿಡಿಸಿಕೊಳ್ಳಲು ಆ ಯುವಕ ಟೋಯಿಂಗ್ ವಾಹನದ ಹಿಂದೆ ಓಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿಲುಗಡೆ ನಿಷೇಧಿತ ಸ್ಥಳದಲ್ಲಿ ವಾಹನ ಪಾರ್ಕ್‌ ಮಾಡಿದ್ದಕ್ಕೆ, ವಾಹನ ಮಾಲೀಕರು ಸ್ಥಳದಲ್ಲಿಯೇ ಇದ್ದರೂ, ಅಲ್ಲಿಯೇ ದಂಡ ವಿಧಿಸದೆ, ವಾಹನವನ್ನು ಟೋಯಿಂಗ್ ಮಾಡಿ ಹೊತ್ತೊಯ್ಯುವುದರ ವಿರುದ್ಧ ಹಾಗೂ ಟೋಯಿಂಗ್ ಮಾಡುವಾಗ ವಾಹನಗಳಿಗೆ ಹಾನಿ ಮಾಡುವುದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಬಳಿಕ, ಸರ್ಕಾರ ಬೆಂಗಳೂರಿನಲ್ಲಿ ವಾಹನ ಟೋಯಿಂಗ್‌ಅನ್ನು ಸ್ಥಗಿತಗೊಳಿಸಿ ಆದೇಶಿಸಿತ್ತು. ಟೋಯಿಂಗ್ ಬದಲಾಗಿ, ವಾಹನವನ್ನು ನಿಲ್ಲಿಸಿದ್ದ ಸ್ಥಳದಲ್ಲಿಯೇ ವಾಹನ ಚಕ್ರಗಳಿಗೆ ವ್ಹೀಲ್ ಕ್ಲ್ಯಾಂಪ್‌ ಹಾಕಬೇಕು. ವಾಹನ ಮಾಲೀಕರು ಬಂದಾಗ, ಸ್ಥಳದಲ್ಲಿಯೇ ದಂಡ ವಿಧಿಸಬೇಕು ಎಂದು ಸರ್ಕಾರ ಸೂಚನೆ ನೀಡಿತ್ತು. ಆದರೆ, ಇದೀಗ, ಟೋಯಿಂಗ್‌ಅನ್ನು ಪುನರಾರಂಭಿಸಲು ಸರ್ಕಾರ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...