ಬೆಂಗಳೂರು | ಈ ರಸ್ತೆಗಳಲ್ಲಿ ಆಗಸ್ಟ್ 29ರಂದು ಸಂಚಾರ ನಿರ್ಬಂಧ, ಬದಲಿ ಮಾರ್ಗ ವಿವರ ಇಲ್ಲಿದೆ

Date:

ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಆಗಸ್ಟ್ 29ರಂದು (ನಾಳೆ) ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ವಾಹನ ನಿಲುಗಡೆಯನ್ನು ಕೂಡಾ ನಿಷೇಧಿಸಲಾಗಿದೆ.

ಆಗಸ್ಟ್ 29ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ಕಾರಣ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ಬಂದ್​ ಮಾಡಲಾಗಿದೆ. ಬದಲಿ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸ್​ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವೆಲ್ಲ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಳೇ ಕುಂದ್ರಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ಕಡೆಗೆ ಸಾಗುವ ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ.
ಬಿ.ಆರ್.ವಿ ಜಂಕ್ಷನ್​ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಸಾಗುವ ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬ್ರಾಡ್‌ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್​ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಧರ್ಮರಾಜ ಕೋಯಿಲ್ ಸ್ಪೀಟ್ – ಓ. ಪಿ. ಹೆಚ್. ರಸ್ತೆ ವರೆಗೆ ರಸಲ್ ಮಾರ್ಕೆಟ್​ ಕಡೆಗೆ ಚಲಿಸುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗಿದೆ.
ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್​ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ ವಿವರ ತಿಳಿಯಿರಿ

ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಟ್ರೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದು.
ದ್ವಿಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ – ಬಲ ತಿರುವು – ಸಫೀನಾ ಪ್ಲಾಜಾ -ಕಮರ್ಷಿಯಲ್ ಸ್ಟ್ರೀಟ್- ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.
ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿಎಂಟಿಸಿ ಬಸ್‌ಗಳು ಬಿ. ಆರ್. ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ಸ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹುದು.

ಇದನ್ನು ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆ ನಿರ್ವಹಣೆಗೆ ಒಆರ್‌ಆರ್‌ಸಿಎ ಸಲಹೆಗಳಿವು

ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿರ್ಬಂಧ

ರಸಲ್ ಮಾರ್ಕೆಟ್ ಸುತ್ತಮುತ್ತ, ಬ್ರಾಡ್‌ವೇರಸ್ತೆ, ಮೀನಾಕ್ಷಿಕೋಯಿಲ್ ಸ್ಟ್ರೀಟ್, ಸೆಂಟ್ರಲ್ ಸ್ಟ್ರೀಟ್ ಶಿವಾಜಿ ರಸ್ತೆ, ಬಾಳೇ ಕುಂದ್ರಿ ವೃತ್ತದಿಂದ ಚಂದ್ರಿಕಾ ಹೋಟೆಲ್‌ವರೆಗೂ (ಕನ್ನಿಂಗ್ ಹ್ಯಾಮ್ ರಸ್ತೆ) ಯೂನಿಯನ್ ಸ್ಟ್ರೀಟ್ ಇನ್ ಫೆಂಟ್ರಿರಸ್ತೆ ಸ್ಪೀಟ್- ಎಂ.ಜಿ ರಸ್ತೆ, ಕಬ್ಬನ್‌ ರಸ್ತೆ, ಲೇಡಿಕರ್ಜನ್‌ ರಸ್ತೆ, ವಿ.ಎಸ್.ಎನ್‌ ರಸ್ತೆ, ಪ್ಲೇನ್ ಸ್ಟ್ರೀಟ್​- ಎಂ.ಜಿ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಬದಲಿ ವಾಹನ ನಿಲುಗಡೆ ಸ್ಥಳ

ಕಾಮರಾಜರಸ್ತೆ ಪಾರ್ಕಿಂಗ್ ಸ್ಥಳದಲ್ಲಿ (ಸರ್ವೀಸ್ ರಸ್ತೆ ಆರ್ಮಿ ಸ್ಕೂಲ್ ಮುಂಭಾಗ), ಸಫೀನಾ ಪ್ಲಾಜಾ ಮುಂಭಾಗ ( ಮೈನ್ ಗಾರ್ಡನ್ ರಸ್ತೆ), ಜೆಸ್ಮಾ ಭವನ ರಸ್ತೆ, ಆರ್. ಬಿ. ಎ. ಎನ್. ಎಮ್. ಎಸ್ ಮೈದಾನ ( ಗಂಗಾಧರ ಚೆಟ್ಟಿ ರಸ್ತೆ), ಮುಸ್ಲಿಂ ರ್ಆಫೆನೇಜ್ ಡಿಕನ್ಸನ್ ರಸ್ತೆ ( ಹಸನತ್ ಕಾಲೇಜ್ ಹತ್ತಿರ), ರಮಡಾ ಹೊಟೇಲ್ (ಓಲ್ಡ್ ಕಾಂಗ್ರೇಸ್ ಕಛೇರಿ) ಪ್ಲೇನ್ ಸ್ಟ್ರೀಟ್​ನಲ್ಲಿ ವಾಹನ ನಿಲ್ಲಿಸಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...