ಬೆಂಗಳೂರು: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ

Date:

ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದ್ದು, ಎರಡೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​​ ಸೇರಿದಂತೆ, ವಿವಿಧ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌
ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ ಎಂದರು.

ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಮಾಡಿದ ಪ್ರಕರಣ ಸಂಬಂಧ ಎರಡು ಪ್ರಕರಣ ದಾಖಲಾಗಿವೆ. ಎರಡೂ ವಂಚನೆ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ದಾಖಲಾಗಿರುವ ಸೆಕ್ಷನ್​ಗಳ ಆಧಾರದಲ್ಲಿ, ಆರೋಪಿಗಳ ಸಹಕಾರದ ಅನ್ವಯ ಬಂಧನ ಮಾಡಲಾಗುವುದು. ಚಂದ್ರಾಲೇಔಟ್ ಠಾಣೆ ಪ್ರಕರಣದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತೇವೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...