ಉಡುಪಿ | ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

Date:

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ ತಾಲ್ಲೂಕಿನ ಕೋಟ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

ಸುದಿನ ಎಂಬುವವರು ದೂರು ನೀಡಿದ ವ್ಯಕ್ತಿ. ಇವರು ಮೂಲತಃ ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ. ಇವರು ಮೀನು ವ್ಯಾಪಾರವನ್ನು ನಡೆಸುತ್ತಿದ್ದರು.

ಆರೋಪಿ ಚೈತ್ರಾ ಕುಂದಾಪುರ ಸುದಿನ ಅವರಿಂದ ₹5 ಲಕ್ಷ ಪಡೆದು ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿದ್ದಾರೆ. ಬಳಿಕ ಬಟ್ಟೆ ಅಂಗಡಿಯನ್ನು ಹಾಕಿಕೊಡದೆ, ಹಣವನ್ನು ಹಿಂತಿರುಗಿಸದೆ ಜೀವ ಬೆದರಿಕೆ ಹಾಕಿ ವಂಚಿಸಿದ್ದಾರೆ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ನೀಡಿದ ಸುದಿನ

ಸುದಿನ ಎಂಬವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ, ಸುಮಾರು ಐದು ಲಕ್ಷ ರೂ. ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಹಣವನ್ನು ಮರಳಿಸದೆ, ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.

ಸುದಿನ ಎಂಬುವವರಿಗೆ 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸುದಿನ ಅವರು ಕೂಡ ಬಿಜೆಪಿ ಕಾರ್ಯಕರ್ತ ಎಂದು ತಿಳಿದುಬಂದಿದೆ. ಚೈತ್ರಾ ಸುದಿನ ಬಳಿ ತಾನು ಬಿಜೆಪಿ ಪಕ್ಷದ ಉನ್ನತ ಸ್ಥಾನದಲ್ಲಿದ್ದೇನೆ. ನನಗೆ ಹಲವು ಮಂತ್ರಿಗಳು, ಸಚಿವರು ಹಾಗೂ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದ್ದಳು.

“ಚೈತ್ರಾ ಕುಂದಾಪುರ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ಸುದಿನಗೆ ತಿಳಿಸಿದ್ದಳು. ನಂತರ 2018 ರಿಂದ 2023ರವರೆಗೆ ಪದೇಪದೆ ಕರೆ ಮಾಡಿ ಸುದಿನ ಅವರಿಂದ ಸುಮಾರು ₹5 ಲಕ್ಷ ಪಡೆದಿದ್ದಾಳೆ. ಈ ಹಣವನ್ನು ಸುದಿನ ಅವರು ತಮ್ಮ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಸುಮಾರು ₹3 ಲಕ್ಷ ಹಣವನ್ನು ಚೈತ್ರಾಳಿಗೆ ವರ್ಗಾವಣೆ ಮಾಡಿದ್ದು, ಇನ್ನುಳಿದ ₹2 ಲಕ್ಷ ಹಣವನ್ನು ನಗದು ರೂಪದಲ್ಲಿ 2023ರ ವರೆಗೆ ಚೈತ್ರಾಳಿಗೆ ನೀಡಿದ್ದೇನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಅಂಗಡಿ ಬಗ್ಗೆ ಚೈತ್ರಾಳ ಬಳಿ ಕೇಳಿದಾಗ ಪ್ರತಿ ಬಾರಿಯೂ ಸ್ಥಳೀಯ ಮುಖಂಡರಲ್ಲಿ ಮಾತುಕತೆ ನಡೆದಿದೆ. ಅಂತಿಮ ಹಂತದಲ್ಲಿದೆ ಎಂದು ಹೇಳಿ ನಂಬಿಸಿದ್ದಳು. ಬಳಿಕ ಚೈತ್ರಾ ಚುನಾವಣಾ ಪ್ರಚಾರ, ನಾನಾ ಕಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವೆಲ್ಲವನ್ನು ನೆಪವಾಗಿ ಮುಂದಿಟ್ಟು, ದಿನಗಳನ್ನು ಮುಂದೂಡುತ್ತಾ ಬಂದರು. ಮತ್ತೆ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 553 ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ

ಇಷ್ಟು ದಿನ ಕಳೆದರೂ ಚೈತ್ರಾ ಅಂಗಡಿ ಹಾಕಿಸಿ ಕೊಡಲಿಲ್ಲ. ಇದರಿಂದ ಅವರ ಮೇಲೆ ಅನುಮಾನಗೊಂಡು ನನಗೆ ಬಟ್ಟೆ ಅಂಗಡಿ ಹಾಕಿಸಿಕೊಡುವಂತೆ ಕೇಳಿದೆ. ಅಂಗಡಿ ಹಾಕಿಕೊಡದಿದ್ದರೆ, ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದೆ. ಆದರೆ, ಚೈತ್ರಾ ಅವರು ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ, ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಕೆಲವು ದಿನಗಳ ಹಿಂದೆ ಚೈತ್ರಾ ಇನ್ನಷ್ಟು ಜನರಿಗೆ ವಂಚನೆ ಮಾಡಿದ ಬಗ್ಗೆ ಮಾಧ್ಯಮದಲ್ಲಿ ನೋಡಿದೆ. ಚೈತ್ರಾ ನನಗೂ ಕೂಡ ಮೋಸ ಮಾಡಿ, ಹಣವನ್ನು ಲಪಟಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...