ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲೊಂದು ತಾರತಮ್ಯ, ಅಸ್ಪೃಶ್ಯತೆ ಆಚರಣೆಯ ಪೋಸ್ಟರ್: ಜಾಲತಾಣದಲ್ಲಿ ವೈರಲ್

Date:

  • ಮನೆಕೆಲಸ ಮಾಡುವವರು, ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಬಾರದು
  • ನಿಗದಿ ಮಾಡಿದ ಸ್ಥಳದಲ್ಲಿ ಮಾತ್ರ ವಿರಾಮ ಮಾಡಲು ಮತ್ತು ಊಟ ಮಾಡಲು ಬಳಸಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಪೋಸ್ಟರ್‌ವೊಂದು ಸಾಬೀತು ಮಾಡಿದೆ. ಮನೆಕೆಲಸ ಮಾಡುವವರು, ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಬಾರದು ಹಾಗೂ ಪಾರ್ಕ್‌ ಆಂಪಿಥಿಯೇಟರ್, ಗೆಜೆಬೋಸ್ ಪ್ರದೇಶಗಳನ್ನು ಬಳಸಬಾರದು ಎಂಬ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯೊಂದು ಬರೆದಿರುವ ಪೋಸ್ಟರ್‌ವೊಂದನ್ನು ಟ್ವೀಟರ್‌ನಲ್ಲಿ ವಿಬಿನ್ ಬಾಬುರಾಜನ್ ಎಂಬುವವರು ಹಂಚಿಕೊಂಡಿದ್ದಾರೆ.

ಪೋಸ್ಟರ್‌ನಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಮನೆಕೆಲಸ ಮಾಡುವವರು, ಕಾರ್ಮಿಕರು ನಾವು ಬಳಸುವ ಅಂದರೆ ಉದ್ಯಾನವನ, ಆಂಪಿಥಿಯೇಟರ್, ಗೆಜೆಬೋಸ್‌ನಲ್ಲಿ ಓಡಾಡುವುದನ್ನು ನೋಡುವುದು ಕಷ್ಟವಾಗಿದೆ. ನಾವು ಬಳಸುವ ಪ್ರದೇಶವನ್ನು ಬಳಸಬೇಡಿ ಬದಲಾಗಿ ನಿಮಗೆ ನಿಗದಿ ಮಾಡಿರುವ ಸ್ಥಳಗಳನ್ನು ನೀವು ವಿರಾಮ ಮಾಡಲು ಮತ್ತು ಊಟ ಮಾಡಲು ಬಳಸಿ ಎಂದು ಬರೆಯಲಾಗಿದೆ.

ಎಲ್ಲ ಕಟ್ಟಡಗಳಲ್ಲಿ ಕಾಯುವ ಪ್ರದೇಶಗಳನ್ನು ಮನೆಗೆಲಸ ಮಾಡುವವರು ಮತ್ತು ಕಾರ್ಮಿಕರು ಬಳಸಬಹುದು. ನಾವು ನಡೆದಾಡುವ ಪ್ರತಿ ಸ್ಥಳಗಳಲ್ಲಿ ಕಾರ್ಮಿಕರು ಸುತ್ತುವರೆದಿರುವುದನ್ನು ನೋಡಲು ಕಷ್ಟವಾಗುತ್ತದೆ. ನಮ್ಮ ಸಂಪ್ರದಾಯಗಳಿಗೆ ಅಪಚಾರವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ನಗರದೆಲ್ಲೆಡೆ ಇಂತಹ ಜನರು ಇರುವಾಗ ನಮ್ಮಂತಹ ನಿವಾಸಿಗಳು ಅನಾನುಕೂಲತೆಯನ್ನು ಅನುಭವಿಸುತ್ತೇವೆ. ನಮ್ಮ ಸುರಕ್ಷತೆಯು ಸಾಮಾನ್ಯ ಪ್ರದೇಶಗಳಲ್ಲಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗುವುದಿಲ್ಲ. ಅಡುಗೆಯವರು, ಬಡಗಿಗಳು, ಕೊಳಾಯಿ ಕೆಲಸಗಾರರು ಕಟ್ಟಡದ ಪ್ರವೇಶ ದ್ವಾರದ ಸೋಫಾಗಳಲ್ಲಿ ಕುಳಿತುಕೊಳ್ಳುತ್ತಾರೆ. ಇದರಿಂದ ನಮ್ಮ ಸಮಾಜದವರು ಅಥವಾ ಸಂಪ್ರದಾಯಸ್ಥರು ಈಗ ಈ ಆಸನಗಳ ಮೇಲೆ ಕುಳಿತುಕೊಳ್ಳುವುದನ್ನು ನಿಲ್ಲಿಸಿದ್ದಾರೆ ಎಂದು ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...