ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

Date:

  • 3 ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ
  • ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಮೊದಲ ಬಾರಿಗೆ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಡ್ರೋನ್‌ ಕ್ಯಾಮೆರಾಗಳನ್ನು ಬಳಸಿ ಟ್ರಾಫಿಕ್ ನಿಯಂತ್ರಿಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

ಶುಕ್ರವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಪರಿಶೀಲನೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಗರದ ಸಂಚಾರ ಪೊಲೀಸರಿಗೆ ಇನ್ನೂ ಮೂರು ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ ನೀಡಲಾಗಿದೆ. ವಿಶ್ವದಲ್ಲಿ ಬೆಂಗಳೂರು ನಗರ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಎಂದು ಅಪಖ್ಯಾತಿಯನ್ನು ಪಡೆದಿದೆ” ಎಂದರು.

“ಈಗ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾದರೆ ಅದಕ್ಕೆ ನಿಖರ ಕಾರಣ ಪತ್ತೆಗೆ ಪೊಲೀಸರಿಗೆ ಅಡಚಣೆಯಾಗುತ್ತಿದೆ. ಹಾಗಾಗಿ, ನಗರದಲ್ಲಿ ಇನ್ನುಮುಂದೆ ವಾಹನ ಸಂಚಾರ ದಟ್ಟಣೆಯನ್ನು ತಗ್ಗಿಸಲು ಡ್ರೋನ್ ಕ್ಯಾಮರಾ ಬಳಸಿ ಸಂಚಾರ ನಿರ್ವಹಣೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಡ್ರೋನ್ ಕ್ಯಾಮರಾಗಳು ಪೊಲೀಸ್‌ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿರುತ್ತವೆ. ಸಂಚಾರ ದಟ್ಟಣೆ ಉಂಟಾದ ಸ್ಥಳಗಳಿಂದಲೇ ಇನ್‌ಸ್ಪೆಕ್ಟರ್ ವಾಹನದಲ್ಲಿ ಆ ಕ್ಯಾಮರಾಗಳ ನಿರ್ವಹಿಸುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಎಲ್ಲಿ ವಾಹನ ಓಡಾಡಕ್ಕೆ ಅಡ್ಡಿಯಾಗಿರುತ್ತದೆಯೋ ಕೂಡಲೇ ಡ್ರೋನ್‌ ಬಳಸಿ ಯಾವ ಜಾಗದಲ್ಲಿ ಸಂಚಾರ ದಟ್ಟಣೆಯಾಗಿದೆ ಎಂಬುದನ್ನು ಪತ್ತೆ ಮಾಡಬಹುದು” ಎಂದರು.

“ನಗರದಲ್ಲಿ ಪ್ರತಿ ದಿನ ಬೆಳಿಗ್ಗೆ ಹಾಗೂ ಸಾಯಂಕಾಲ್ ಪೀಕ್ ಅವರ್‌ನಲ್ಲಿ ಎರಡು ಗಂಟೆಗಳ ಕಾಲ ಸಂಚಾರ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಒಂದು ವೇಳೆ ದಟ್ಟಣೆ ಉಂಟಾದರೇ ಇದಕ್ಕೆ ಡಿಸಿಪಿ ಮತ್ತು ಎಸಿಪಿ ಅವರನ್ನು ಹೊಣೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

“ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ನಗರದ ಜನಬಿಡದ ಪ್ರದೇಶ ಹಾಗೂ ಮಹಿಳೆಯರು ಹೆಚ್ಚೆಚ್ಚು ಓಡಾಟ ನಡೆಸುವ ಕಡೆಗಳಲ್ಲಿ ಹೈ ರೆಸಲ್ಯೂಷನ್ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ ಮಾಡಲಾಗಿದೆ. ಸೇಫ್‌ ಸಿಟಿ ಪ್ರಾಜೆಕ್ಟ್ 70% ಮುಗ್ದಿದ್ದು ಉಳಿದ ಕೆಲಸಗಳು ನಡಿಯುತ್ತಿವೆ. ಇನ್ನೂ ಹೊಯ್ಸಳ ಸಿಬ್ಬಂದಿಗೆ ಬಾಡಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಇದರಿಂದ ಅವರ ಪ್ರತಿ ಸಂಭಾಷಣೆ, ಜನರ ಸಂಭಾಷಣೆ ರೆಕಾರ್ಡ್ ಆಗುತ್ತದೆ” ಎಂದು ಸಚಿವ ಪರಮೇಶ್ವರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

“ಸಂಚಾರ ವಿಭಾಗದ ನಾಲ್ಕು ಡಿಸಿಪಿಗಳಿಗೆ ನಾಲ್ಕು ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ಇನ್ನು 10 ದಿನಗಳಲ್ಲಿ ಕ್ಯಾಮೆರಾ ಪಡೆಯಲಾಗುವುದು. ಡ್ರೋನ್ ಕ್ಯಾಮರಾ ಬಳಕೆಯ ಬಗ್ಗೆ ತರಬೇತಿ ನಡೆಯುತ್ತಿದೆ. 10 ಸಂಚಾರ ಉಪವಿಭಾಗಗಳ ಎಲ್ಲ ಎಸಿಪಿಗಳು ಮತ್ತು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಹಂತ ಹಂತವಾಗಿ ಡ್ರೋನ್‌ಗಳನ್ನು ಪಡೆಯಲಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...