ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್‌ನಿಂದ ಚಿರಂಜೀವಿ ಸಿಂಗ್‌ ಅವರಿಗೆ ವಿ ಕೃ ಗೋಕಾಕ್ ಪ್ರಶಸ್ತಿ

Date:

ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ 2023ನೇ ಸಾಲಿನ ಪ್ರತಿಷ್ಠಿತ ವಿ ಕೃ ಗೋಕಾಕ್ ಪ್ರಶಸ್ತಿಗೆ ಸಾಂಸ್ಕ್ರತಿಕ ರಾಯಭಾರಿಯೆಂದೇ ಹೆಸರಾದ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್‌ ಅವರು ಆಯ್ಕೆಯಾಗಿದ್ದಾರೆ.

ಈ ವಿ ಕೃ ಗೋಕಾಕ್ ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಸೆ. 24ರಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೆಆರ್‌ಜಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಾರತ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ” ಎಂದು ಟ್ರಸ್ಟ್‌ ಪ್ರಕಟಣೆ ಮೂಲಕ ತಿಳಿಸಿದೆ.

“ಟ್ರಸ್ಟ್ ಅಧ್ಯಕ್ಷ ಬಿ ಎಸ್ ವಿಶ್ವನಾಥ್, ಕಾರ್ಯದರ್ಶಿಗಳಾದ ಅನಿಲ್ ಗೋಕಾಕ್, ಬಹುಮುಖಿ ಚಿಂತಕ ಡಾ ನರಹಳ್ಳಿ ಬಾಲಸುಬ್ರಹ್ಮಣ್ಯ, ಭಾರತೀಯ ವಿದ್ಯಾಭವನದ ನಿರ್ದೇಶಕರಾದ ಎಚ್ ಎನ್ ಸುರೇಶ್, ಅಭಿನವ ರವಿಕುಮಾರ್ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿರಂಜೀವಿ ಸಿಂಗ್‌ ಅವರು 1945ರ ಮಾರ್ಚ್‌ 5ರಂದು ಪಂಜಾಬಿನ ರಹೋನ್‌ದಲ್ಲಿ ಜನಿಸಿದರು. 1971ರಲ್ಲಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕದ ತರೀಕೆರೆಗೆ ಬಂದರು. ಇಲ್ಲಿ ಬಂದು ನೆಲೆಸಿದಾಗಿನಿಂದಲೂ ಕನ್ನಡ ಮಾತಾಡಲು ಪ್ರಾರಂಭಿಸಿದರು. ಬಳಿಕ, ಮಂಡ್ಯ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ಸಲಹೆಗಳ ವರದಿ ಸಲ್ಲಿಸಲು ನೋಡಲ್ ಅಧಿಕಾರಿಗಳಿಗೆ ಸೂಚನೆ

ಸಿನಿಮಾ, ಪತ್ರಿಕೆಗಳ ಮೂಲಕ ಸ್ಪಷ್ಟವಾಗಿ ಕನ್ನಡವನ್ನು ಕಲಿತ ಚಿರಂಜೀವಿ ಸಿಂಗ್‌ ಅವರು ಕನ್ನಡ ಸಾಹಿತ್ಯ ಲೋಕದ ಮೇರು ಪ್ರತಿಭೆಗಳಾದ ಲಂಕೇಶ್, ರಾಜೀವ್ ತಾರನಾಥ್, ಎಸ್‌ ಜಿ ವಾಸುದೇವ್, ಗಿರೀಶ್ ಕಾರ್ನಾಡರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

`ಯಾವ ಜನ್ಮದ ಮೈತ್ರಿ’ ಪ್ರಕಟಿತ ಪುಸ್ತಕ. 2005ರಲ್ಲಿ ಕರ್ನಾಟಕ ಸರ್ಕಾರ ಇವರ ಕನ್ನಡ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪಶಸ್ತಿಯನ್ನು ನೀಡಿ ಗೌರವಿಸಿದೆ. ಕ್ಷೇತ್ರದ ಸಮುದಾಯ ಶಿಕ್ಷಣ ಸೇವೆಯನ್ನು ಪರಿಗಣಿಸಿ  2023ನೇ ಸಾಲಿನ ವಿ ಕೃ ಗೋಕಾಕ್ ಹೆಸರಿನ ಪ್ರಶಸ್ತಿ ನೀಡಲಾಗುತ್ತಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...