ಈ ಬಾರಿಯ ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನದಲ್ಲಿ ವಾಲ್ಮೀಕಿ ಪ್ರತಿಕೃತಿ

Date:

ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತದೆ. ಅದರಂತೆ, ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದೆ.

ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನವನ್ನು ಜನವರಿ 16 ರಿಂದ 26ರವರೆಗೆ 11 ದಿನಗಳ ಕಾಲ ಆಯೋಜಿಸುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜೀವನ ಆಧಾರಿತ ವಿಷಯ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಕರ್ಷಕವಾಗಿ ಪುಷ್ಪಗಳಲ್ಲಿ ಅರಳಿಸಲು ತೀರ್ಮಾನಿಸಲಾಗಿದೆ.

ಫಲಪುಷ್ಪ ನೋಡಲು ಬರುವ ಪ್ರವಾಸಿಗರು ಮತ್ತು ಬೆಂಗಳೂರಿನ ಜನತೆ ಮಹರ್ಷಿ ವಾಲ್ಮೀಕಿ ವಿಷಯಾಧರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಣದ ಪ್ರಮುಖ ಘಟನೆಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ. ಹೂ ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂವುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಫಲಪುಷ್ಪ ಪ್ರದರ್ಶನಕ್ಕೆ 70 ತರಹದ 25 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗುತ್ತಿದೆ. ಚಳಿಗಾಲದಲ್ಲಿ ಬೆಳೆಯುವಂತಹ ಪೂಷಿಯಾ, ಅಗಪಾಂಥಸ್​, ಸೈಕ್ಲೋಮನ್​, ಕ್ಯಾಲಾಲಿಲ್ಲ, ಟ್ಯೊಬಿರಸ್​ ರೂಟೆಡ್, ಸೇರಿದಂತೆ ಇನ್ನೂ ಸಾಕಷ್ಟು ಹೂವುಗಳನ್ನು ಪ್ರದರ್ಶನಕ್ಕೆ ಬಳಸಲಾಗುತ್ತಿದೆ.

25 ಲಕ್ಷ ಹೂವುಗಳಲ್ಲಿ, ಹೂವು ಕುಂಡದಲ್ಲಿ ಬೆಳೆಯುವ ಹಾಗೂ ಲಾಲ್​ಬಾಗ್​ನಲ್ಲಿ ಬೆಳೆಯುವ ಹೂವುಗಳು, ಲಾಲ್​ಬಾಗ್​ನಲ್ಲಿ ಬೆಳೆಯುವ 15 ಲಕ್ಷ ಹಾಗೂ ಗುಲಾಬಿ, ಸೇವಂತಿಗೆ ಸೇರಿದಂತೆ 10 ವಿವಿಧ ಜಾತಿಯ ಹೂವುಗಳನ್ನು ಬಳಸಲಾಗುತ್ತಿದೆ.
ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಲು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಜನರು ಆಗಮಿಸುತ್ತಾರೆ. ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಲಾಲ್​ಬಾಗ್​ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ಪ್ರವೇಶ ಟಿಕೆಟ್​ ನಿಗದಿಪಡಿಸಲಾಗಿದೆ. ಹಿರಿಯರಿಗೆ 80 ರಿಂದ 100 ರೂ. ಇದ್ದು ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದೆ. ಇನ್ನು ಶಾಲಾ ಸಮವಸ್ತ್ರ ತೊಟ್ಟು ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...