ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ? ಮುಖ್ಯಮಂತ್ರಿ ಚಂದ್ರು ಪ್ರಶ್ನೆ

Date:

ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “1931ರಲ್ಲಿ ಜಾತಿ ಗಣತಿ ಆಗಿರುವುದು ಬಿಟ್ಟರೆ ಇದುವರೆಗೂ ಜಾತಿಗಣತಿ ಮಾಡಿಲ್ಲ. ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ಮಾಡಿಕೊಂಡು ಬಂದಿದ್ದಾರೆ. ಮೀಸಲಾತಿ ಇದೆ. ಆದರೆ, ಜಾತಿ ಗಣತಿಯೇ ಇಲ್ಲ. ಅಂದಾಜಿನ ಮೇಲೆ ಮೀಸಲಾತಿ ಕೊಡುತ್ತಾ ಬಂದಿದ್ದು, ಹಲವು ಸಮುದಾಯಗಳಿಗೆ ಅನ್ಯಾಯ ಆಗಿದೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 2013ರಲ್ಲಿ ಶಾಶ್ವತ ಹಿಂದುಳಿದ ಆಯೋಗಕ್ಕೆ ರಾಜ್ಯದ ಜಾತಿಗಣತಿ ಮಾಡಲು ಆದೇಶ ನೀಡಿದ್ದರು. ಇದಕ್ಕಾಗಿ ₹180 ಕೋಟಿ ಬಿಡುಗಡೆ ಮಾಡಲಾಗಿತ್ತು. ನಂತರ 2015ರಲ್ಲಿ ಜಾತಿ ಗಣತಿ ವರದಿ ಸಂಪೂರ್ಣಗೊಂಡಿತು. ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಾದ್ಯಂತ ಮನೆ ಮನೆಗೆ ತೆರಳಿ ಗಣತಿ ನಡೆಸಿತ್ತು. ದುರಂತ ಎಂದರೆ, ಆ ವರದಿಯನ್ನು ಆಯೋಗ ಇನ್ನೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿಎಂ ಆಗಿದ್ದ ಸಿದ್ದರಾಮಯ್ಯ ಅವರೇ ಆ ವರದಿಯನ್ನು ರಾಜಕೀಯ ಒತ್ತಡಗಳಿಂದ ಸ್ವೀಕರಿಸಲಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತಿ ಗಣತಿ ಹೊರಗೆ ಬಂದರೆ ರಾಜಕೀಯದಲ್ಲಿ ಏರುಪೇರು ಉಂಟಾಗಲಿದೆ ಎನ್ನುವ ಕಾರಣಕ್ಕೆ ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಕಾರ್ಯದರ್ಶಿಗಳು ವರದಿ ಸಿದ್ದವಾಗಿದೆ ಎಂದು ಸರ್ಕಾರಕ್ಕೆ ಪತ್ರ ಬರೆದರೂ, ವರದಿಯನ್ನು ತೆಗೆದುಕೊಂಡಿಲ್ಲ. 7 ಸದಸ್ಯರಲ್ಲಿ ಇಬ್ಬರು ಸಹಿ ಹಾಕಿಲ್ಲ. ಆಯೋಗದ ಅಧ್ಯಕ್ಷ ಕಾಂತರಾಜ್ ಅವರೇ ಸಹಿ ಹಾಕಿಲ್ಲ ಎನ್ನಲಾಗುತ್ತಿದೆ. ಸಿದ್ದರಾಮಯ್ಯನವರ ಬಳಿಕ ಎಚ್‌ಡಿ ಕುಮಾರಸ್ವಾಮಿ ಅವರಿಗೆ ವರದಿ ನೀಡಲು ಹೋದಾಗ ಅವರು ಕೂಡ ತೆಗೆದುಕೊಂಡಿಲ್ಲ ಎಂದು ಶಾಶ್ವತ ಆಯೋಗ ಹೇಳಿದೆ. ನಂತರ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕೂಡ ಈ ವರದಿಯನ್ನು ತೆಗೆದುಕೊಳ್ಳದೆ ತಿರಸ್ಕಾರ ಮಾಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೂರ್ವ ವಲಯದಲ್ಲಿ ಅತಿ ಹೆಚ್ಚು ಬೀದಿನಾಯಿಗಳು ವಾಸ

ಈಗಲಾದರೂ ಜಾತಿ ಗಣತಿ ವರದಿ ಬಹಿರಂಗಪಡಿಸಲಿ

“ಈಗ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಆಗಿದ್ದಾರೆ. ಎಸ್‌ಟಿ ವರ್ಗಕ್ಕೇ ಸೇರಬೇಕೆನ್ನುವ ಒತ್ತಾಯವನ್ನು ಕುರುಬ ಸಮಾಜವೇ ಮಾಡಿದೆ. ಅದಕ್ಕಾಗಿ ಸುಮ್ಮನಾಗಿದ್ದಾರೆ ಎನಿಸುತ್ತದೆ. ಶಾಶ್ವತ ಸಮಿತಿ ಅಧ್ಯಕ್ಷ ಕಾಂತರಾಜ್ ಸ್ಥಾನಕ್ಕೆ ಈಗ ಜಯಪ್ರಕಾಶ್ ಹೆಗಡೆ ಬಂದಿದ್ದು, ನಾವು ಅವರನ್ನು ಭೇಟಿ ಮಾಡಿದಾಗ, ವರದಿ ಸಂಪೂರ್ಣವಾಗಿ ಸಿದ್ಧವಾಗಿದೆ. ನಾನು ಕೊಡಲು ಸಿದ್ಧ ಎಂದು ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಮೂರು ಬಾರಿ ಜಾತಿ ಗಣತಿ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ. ನವೆಂಬರ್ ಒಳಗಡೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಜಯಪ್ರಕಾಶ್ ಹೆಗಡೆ ನವೆಂಬರ್ ತಿಂಗಳಿನಲ್ಲಿ ನಿವೃತ್ತರಾಗುತ್ತಿದ್ದಾರೆ. ಅದಕ್ಕೇ ಈ ರೀತಿ ಹೇಳಿಕೆ ನೀಡುತ್ತಿರಬೇಕು” ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

“ತುರ್ತಾಗಿ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ತೆಗೆದುಕೊಂಡು ವಿಧಾನಸಭೆಯಲ್ಲಿ ಮಂಡಿಸಲಿ, ನಂತರ ಜನ ಅದನ್ನು ತೀರ್ಮಾನ ಮಾಡುತ್ತಾರೆ. ಹಣ ಖರ್ಚು ಮಾಡಿ ಸಮೀಕ್ಷೆ ಮಾಡಿದ್ದಾರೆ. ಅದನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿಕೆ ನೀಡಲಿ” ಎಂದರು.

“ಒಂದು ವೇಳೆ ನವೆಂಬರ್ ಒಳಗೆ ಅವರು ಜಾತಿಗಣತಿ ವರದಿ ತೆಗೆದುಕೊಳ್ಳದಿದ್ದರೆ, ಸದನದಲ್ಲಿ ಮಂಡಿಸದೆ ಇದ್ದರೆ, ರಾಜ್ಯಪಾಲರಿಗೆ ವರದಿಯನ್ನು ನೀಡದೆ ಇದ್ದರೆ ಜನಾಂದೋಲನ ರೂಪಿಸುವುದಾಗಿ” ಸರ್ಕಾರಕ್ಕೆ ಎಚ್ಚರಿಸಿದರು.

“ಮತಬ್ಯಾಂಕಿಗೆ ತೊಂದರೆಯಾಗುವ ಕಾರಣಕ್ಕೆ ಅವರು ಜಾತಿ ಗಣತಿ ವರದಿ ತೆಗೆದುಕೊಂಡಿಲ್ಲ ಎನ್ನುವ ಅನುಮಾನ ಇದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...