ಬೆಂಗಳೂರು | ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ ಬಂದ್: ತುಷಾರ್ ಗಿರಿನಾಥ್

Date:

  • ಯುವತಿ ಸಾವಿನಿಂದ ಬಿಬಿಎಂಪಿ ವಿರುದ್ಧ ಸಾರ್ವಜನಿಕರ ಆಕ್ರೋಶ
  • 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತ

ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆಯಾಗಿರುವುದರಿಂದ ಇಡೀ ನಗರವೇ ಕಂಗೆಟ್ಟಿದೆ. ಯುವತಿ ಸಾವಿನಿಂದಾಗಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ಗಳನ್ನು ಮುಚ್ಚುವುದಾಗಿ ಹೇಳಿದೆ.

“ನಗರದಲ್ಲಿರುವ ಕೆಳಸೇತುವೆಗಳ ಸರ್ವೇ ನಡೆಸಲಾಗುತ್ತಿದ್ದು, ಡ್ರೈನೇಜ್ ಇಲ್ಲದ ಅಂಡರ್‌ಪಾಸ್‌ಗಳನ್ನು ಮುಚ್ಚಲಾಗುವುದು. ಲೋಪ ಕಂಡುಬಂದ ಕೆಳಸೇತುವೆಗಳನ್ನು ರಿಪೇರಿ ಮಾಡಿ ಪುನಾರಂಭಿಸಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದಲ್ಲಿ ಭಾನುವಾರ ಮಧ್ಯಾಹ್ನ 3:15 ರಿಂದ 4 ಗಂಟೆಯವರೆಗೆ 50 ಮಿ,ಮೀ ಮಳೆಯಾಗಿದೆ. ನಗರದಲ್ಲಿ 18 ಅಂಡರ್‌ಪಾಸ್​ಗಳಿವೆ. ಭಾನುವಾರ ಕೆ ಆರ್‌ ಸರ್ಕಲ್‌ ಕೆಳಸೇತುವೆಯಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ, ಆ ಭಾಗದ 20 ಮನೆಗಳಿಗೆ ಮಳೆ ನೀರು ನುಗ್ಗಿದೆ. ಭಾನುವಾರ ನಗರದಲ್ಲಿ ಮೋಚಾ ಚಂಡಮಾರುತ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದೆ. ಇದರಿಂದ ಮರದ ಎಲೆಗಳು ಉದುರಿ ಹೋಗಿವೆ. ಗಾಳಿಯ ರಭಸಕ್ಕೆ ಅಂಡರ್‌ಪಾಸ್‌ನಲ್ಲಿ ನೀರು ಹೋಗುವ ಸ್ಥಳದಲ್ಲಿ ಎಲೆಗಳು ತುಂಬಿರುವುದರಿಂದ ನೀರು ಪೋಲಾಗದೆ ಅನಾಹುತ ಸಂಭವಿಸಿದೆ. ನಗರದಲ್ಲಿ ಸಂಚಾರಕ್ಕೆ ಸೂಕ್ತವಲ್ಲದ ಅಂಡರ್ ಪಾಸ್ ಬಂದ್​ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಭಾನುವಾರ ಸುರಿದ ಭಾರೀ ಮಳೆಗೆ ಬೆಂಗಳೂರು ಸ್ತಭ್ದವಾಗಿದೆ. ಭೀಕರ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ನಗರದಲ್ಲಿ ನೂರಾರು ಮರಗಳು ನೆಲಕ್ಕೊರಗಿವೆ. ರಸ್ತೆ ತುಂಬಾ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದು ಕಾರು ಬೈಕ್ ಜಖಂ ಆಗಿವೆ.

ಬೆಂಗಳೂರಿನಲ್ಲಿರುವ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು | ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೇ ಪರಿಹರಿಸಿ : ಬಿಬಿಎಂಪಿ ಮುಖ್ಯ ಆಯುಕ್ತ

ಸಹಾಯ ತಂತ್ರಾಂಶದ ಮುಖಾಂತರ ಬಿಬಿಎಂಪಿ ವಲಯವಾರು ಮಳೆಹಾನಿ ಸಂಬಂಧಿಸಿದ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಭೇಟಿ ನೀಡಿ ದೂರುಗಳ ಮಾಹಿತಿ ಪರಿಶೀಲಿಸಿದರು.

ಬಿಬಿಎಂಪಿ

“ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತ (ಮಾಹಿತಿ ತಂತ್ರಜ್ಞಾನ) ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು (ಆಡಳಿತ) ಮಂಜುನಾಥ ಸ್ವಾಮಿ.ಬಿ.ಎಸ್ ರವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...