ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

Date:

ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಏಕೆ? ಇದರಿಂದ ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದಲ್ಲಿರುವ ಹಿಂದಿ ಮಾತೃಭಾಷಿಗರು ಹಿಂದಿಯಲ್ಲೇ ಪರೀಕ್ಷೆ ತೆಗೆದುಕೊಳ್ಳಬಹುದಾದರೆ ಕನ್ನಡಿಗರು ಹಾಗೂ ದೇಶದ ಇನ್ನಿತರ ಮಾತೃ ಭಾಷಿಗರಿಗೂ ಅವರದೇ ಭಾಷೆಯ ಆಯ್ಕೆ ಏಕಿಲ್ಲ? ತಮ್ಮ ಮಾತೃಭಾಷೆಯನ್ನು ಬಿಟ್ಟು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ತೆಗೆದುಕೊಳ್ಳುವ ಅನಿವಾರ್ಯ ವಾತಾವರಣವಿದೆ ಏಕೆ? ಎಂದು ಪ್ರಶ್ನಿಸಿದ್ದಾರೆ.

“ಇದು ಹಿಂದಿ ಹೇರಿಕೆಯಾಗಿದೆ ಹಾಗೂ ಹಿಂದಿಯೇತರರನ್ನು 2ನೇ ದರ್ಜೆ ಭಾರತೀಯರನ್ನಾಗಿ ಪರಿಗಣಿಸುವ ಕುತಂತ್ರವಾಗಿದೆ. ಅಂದಾಜು ಏಳು ಕೋಟಿ ಕನ್ನಡಿಗರು ಕರ್ನಾಟಕದಲ್ಲಿ, ಮತ್ತು ಅಂದಾಜು 82 ಕೋಟಿ ಹಿಂದಿಯೇತರರು ಭಾರತದಲ್ಲಿದ್ದಾರೆ. ಈ ಕಾರ್ಯವು ಇವರನ್ನು ಗುಲಾಮಗಿರಿಗೆ ತಳ್ಳುವ ಪ್ರಯತ್ನವಲ್ಲವೇ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಕೃತಕ್ಕೂ ಬ್ಯಾಂಕ್‌ ಸೇವೆಗಳಿಗೂ ಏನು ಸಂಬಂಧ? ಬ್ಯಾಂಕುಗಳಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ, ಸಂಸ್ಕೃತಕ್ಕೆ ಇದೆ ಎನ್ನುವುದಾದರೆ, ಇದು ವಿಪರ್ಯಾಸವಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

ಕರ್ನಾಟಕದಲ್ಲಿ ಹಾಗೂ ಬೇರೆ ಎಲ್ಲೆಡೆ ಕೂಡ ಜನರಲ್ಲಿ ನನ್ನ ಮನವಿ. ಬ್ಯಾಂಕುಗಳಲ್ಲಿ ಈ ಭಾಷಾ ನೀತಿಯ ಅನ್ಯಾಯವನ್ನು ತಡೆಯಲು ಮತ್ತು ಈಗಾಗಲೇ ಆಗಿರುವ ಅನ್ಯಾಯಕ್ಕೆ ಪರಿಹಾರ ಒದಗಿಸಲು ನಾವೆಲ್ಲರೂ ಕೈ ಜೋಡಿಸೋಣ. ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಮೋದಿಯವರ ಮತ್ತು ಬಿಜೆಪಿಯ ಎಲ್ಲ ಬೆಂಬಲಿಗರಿಗೆ ನಮ್ಮ ಸಂದೇಶವಿದು, ದಯವಿಟ್ಟು ಎಚ್ಚರಗೊಳ್ಳಿ. ಅವರು ನಿಮಗೆ ಏನು ಮಾಡುತ್ತಿದ್ದಾರೆಂದು ಅರ್ಥ ಮಾಡಿಕೊಳ್ಳಿ. ನಿಮ್ಮದೇ ಗುಲಾಮಗಿರಿಗೆ ನೀವು ವೋಟು ಹಾಕಬೇಡಿ. ನಮ್ಮೊಡನೆ ಕೈ ಜೋಡಿಸಿ. ನಾವೆಲ್ಲರೂ ಬಟ್ಟಾಗಿ ಬದಲಾವಣೆ ತರೋಣ ಎಂದು ರಮೇಶ್ ಬೆಳ್ಳಂಕೊಂಡ ರಾಜ್ಯದ ಜನತೆಗೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಅಶ್ವಿನಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...