ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಇದು ದುಶ್ಯಾಸನ ರಾಜ್ಯವೆಂದ ಹೈಕೋರ್ಟ್‌

Date:

ಪ್ರೇಮಿಗಳಿಬ್ಬರು ಊರು ತೊರೆದು ಹೋದದ್ದಕ್ಕೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯ ನೆರವಿಗೆ ಯಾರೊಬ್ಬರೂ ಮುಂದಾಗಿಲ್ಲ. ಇದು ದುಶ್ಯಾಸನ ರಾಜ್ಯವೆಂದು ಹೇಳಿದೆ.

ಬೆಳಗಾವಿಯ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿದೆ.

“ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ರಕ್ಷಿಸಲು ಕೃಷ್ಣನಿದ್ದ. ಆದರೆ, ಬೆಳಗಾವಿ ಮಹಿಳೆಯ ನೆರವಿಗೆ ಯಾರು ಬಂದಿಲ್ಲ. ಇದು ದುಶ್ಯಾಸನರ ಕಾಲವಾಗಿದೆ. ಇಲ್ಲಿ ಕಾನೂನಿನ ಭಯವಿಲ್ಲ ಎಂಬ ಸಂದೇಶ ಹೋಗುತ್ತಿದೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಗ ಮಾಡಿದ ತಪ್ಪಿಗೆ ತಾಯಿಗೆ ಶಿಕ್ಷೆ ನೀಡಲಾಗಿದೆ. ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಳ್ಳಲಾಗಿದೆ. ಆ ಸಮಯದಲ್ಲಿ ಸಂತ್ರಸ್ತೆ ಎದುರಿಸಿರುವ ನೋವನ್ನು ಊಹಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಟಿವಿಗಳಲ್ಲಿ ನಡೆಯುವ ಸಂಭಾಷಣೆಯ ವಿರುದ್ಧ ಕ್ರಮಕ್ಕೆ ಮುಂದಾಗುವ ಆಯೋಗ, ಈಗ ಎಲ್ಲಿದೆ. ಮಹಿಳೆಯನ್ನು ಹೀನಾಯವಾಗಿ ಹಿಂಸಿಸಲಾಗಿದೆ. ಆದರೆ, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿವೆ” ಎಂದು ಕಿಡಿಕಾರಿದೆ.

“ಸಂತ್ರಸ್ತೆಗೆ ಅತ್ಯುತ್ತಮ ಚಿಕಿತ್ಸೆ ಮತ್ತು ಕೌನ್ಸೆಲಿಂಗ್ ಅಗತ್ಯವಿದೆ. ಮಹಿಳೆಗೆ ಚಿಕಿತ್ಸೆ ನೀಡಲಾಗಿದೆಯೇ? ಪೊಲೀಸರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ” ಎಂದು ಎಂಬುದನ್ನು ವರದಿ ನೀಡುವಂತೆ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...