ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

Date:

  • ಅರ್ಧ ಗಂಟೆಯಾದರೂ ಯುವತಿಗೆ ಚಿಕಿತ್ಸೆಗೆ ನೀಡದ ವೈದ್ಯರು – ಆರೋಪ
  • ಬೆಂಗಳೂರು ಮಹಾನಗರಿ ವೀಕ್ಷಣೆಗೆ ಆಗಮಿಸಿದ್ದ ಹೈದರಾಬಾದ್ ಕುಟುಂಬ

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಕೆ.ಆರ್‌ ಸರ್ಕಲ್‌ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ಹೈದರಾಬಾದ್ ಮೂಲದ ಇನ್ಫೋಸಿಸ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 ವರ್ಷದ ಯುವತಿ ಭಾನುರೇಖಾ ಮೃತ ದುರ್ದೈವಿ. ಯುವತಿಯ ಸಹೋದರ ಸಂದೀಪ್ ಎಂಬುವವರು ಹಲಸೂರು ಗೇಟ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಳೆ ಬರುವ ಬಗ್ಗೆ ಮುನ್ಸೂಚನೆ ಇದ್ದರು ಬಿಬಿಎಂಪಿ ಅಧಿಕಾರಿಗಳು ಅಂಡರ್‌ಪಾಸ್‌ನಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಯುವತಿಯ ಸಹೋದರ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನ ಮೇರೆಗೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಳಚೆ ನೀರು ಕುಡಿದು ಯುವತಿ ಸಾವು

ಭಾನುರೇಖಾ ಬೆಂಗಳೂರಿನ ಇನ್ಫೋಸಿಸ್‌ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವಾಸಕ್ಕೆಂದು ತನ್ನ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆತಂದಿದ್ದರು. ಕಬ್ಬನ್ ಪಾರ್ಕ್ ವೀಕ್ಷಣೆ ಮಾಡುವ ವೇಳೆ ಧಾರಾಕಾರ ಮಳೆ ಆರಂಭವಾದ ಕಾರಣ ಪ್ರಗತಿನಗರದಲ್ಲಿರುವ ತನ್ನ ಮನೆಗೆ ವಾಪಾಸಾಗುತ್ತಿದ್ದರು.

ಈ ವೇಳೆ, ಕೆಆರ್ ಸರ್ಕಲ್​ ಬಳಿಯ ಅಂಡರ್​ಪಾಸ್​ನಲ್ಲಿ ನೀರು ತುಂಬಿರುವುದನ್ನು ಗಮನಿಸದ ಕಾರು ಚಾಲಕ ನೀರಿನಲ್ಲಿ ಕಾರು ಚಲಾಯಿಸಿದ್ದಾನೆ. ಅಂಡರ್‌ಪಾಸ್‌ನ ಮಧ್ಯಭಾಗಕ್ಕೆ ತೆರಳುತ್ತಿದ್ದಂತೆ ಕಾರು ಮುಳುಗಡೆಯಾಗ ತೊಡಗಿತು. ಕಾರನ್ನು ಹಿಂದಕ್ಕೆ ಸಾಗಿಸಲು ಯತ್ನಿಸಿದರು ಇದು ಸಾಧ್ಯವಾಗದೆ ಕಾರು ಮುಳುಗಡೆಯಾಗಿತ್ತು. ಇದೇ ಸಮಯದಲ್ಲಿ ಎರಡು ಆಟೋಗಳು ಕೂಡ ಕೆಳರಸ್ತೆಯಲ್ಲಿ ಮುಳುಗಡೆಯಾಗಿದ್ದವು.

ಈ ಸುದ್ದಿ ಓದಿದ್ದೀರಾ? ಎಚ್ಚರ | ಮಳೆ ಬಂದಾಗ ರಾಜಧಾನಿ ಬೆಂಗಳೂರಿನಲ್ಲಿ ಬಳಸದಿರಿ ಕೆಳಸೇತುವೆ!

ಕಾರು ಮುಳುಗಡೆಯಾಗುವುದನ್ನು ಅರಿತ ಸ್ಥಳಿಯರು ಎಚ್ಚೆತ್ತು ಅವರ ಸಹಾಯಕ್ಕೆ ಧಾವಿಸಿದರು. ಕೂಡಲೆ ರಕ್ಷಣಾ ಸಿಬ್ಬಂದಿ ಕೂಡ ಅವರ ರಕ್ಷಣೆಗೆ ಬಂದರು. ಆರು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಯುವತಿ ಚರಂಡಿ ನೀರು ಕುಡಿದು ತೀವ್ರ ಅಸ್ವಸ್ಥವಾಗಿದ್ದರು.

ಹತ್ತಿರದ ಸೇಂಟ್​ ಮಾರ್ಥಾಸ್ ಆಸ್ಪತ್ರೆಗೆ ಯುವತಿಯನ್ನು ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆ ಸಿಬ್ಬಂದಿ ಆರಂಭದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿ, ಸುಮಾರು ಅರ್ಧಗಂಟೆಗಳ ಕಾಲ ಯುವತಿಯನ್ನು ಹೊರಗೆ ಇರಿಸಲಾಗಿತ್ತು. ಬಳಿಕ ಸ್ಥಳೀಯರು ಆಕ್ರೋಶಗೊಂಡ ನಂತರ ಯುವತಿಯನ್ನು ಆಸ್ಪತ್ರೆಯೊಳಗೆ ಸೇರಿಸಿಕೊಂಡು ಚಿಕಿತ್ಸೆ ನೀಡಲು ಆರಂಭಿಸಿದರು. ಈ ವೇಳೆಗಾಗಲೇ ಯುವತಿ ಸಾವನ್ನಪ್ಪಿದ್ದಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...